ಸುವಿಧಾ ಸ್ಯಾನಿಟರಿ ಪ್ಯಾಡ್‌ ಕೊರತೆ

ಪಿಎಂ ಜನೌಷಧ ಕೇಂದ್ರದಲ್ಲಿ ಸಿಗುತ್ತಿಲ್ಲ ಪ್ಯಾಡ್‌ಮಹಿಳೆಯರು-ಯುವತಿಯರ ಪರದಾಟ

Team Udayavani, Sep 30, 2019, 12:16 PM IST

3-Sepctember-6

ಸಿದ್ದಯ್ಯ ಪಾಟೀಲ
ಸುರಪುರ: ಮಹಿಳೆಯರ ಆರೋಗ್ಯದ ಶುಚಿತ್ವ ಕಾಪಾಡಿಕೊಳ್ಳಲು ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರದಲ್ಲಿ ಸುವಿಧಾ ಸ್ಯಾನಿಟರಿ ಪ್ಯಾಡ್‌ ಕೊರತೆ ಉಂಟಾಗಿದ್ದು, ಖಾಸಗಿ ಔಷಧಾಲಯಗಳಲ್ಲೂ ಸಮರ್ಪಕವಾಗಿ ದೊರೆಯುತ್ತಿಲ್ಲ. ಹೀಗಾಗಿ ಯುವತಿಯರು, ಮಹಿಳೆಯರು ಪರದಾಡುವಂತಾಗಿದೆ.

ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ಘೋಷಿಸಿದಂತೆ ಕೇಂದ್ರ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ಮಹಿಳೆಯರ ಆರೋಗ್ಯದ ಶುಚಿತ್ವದ ಹಿನ್ನೆಲೆಯಲ್ಲಿ ಹೊಸ ಹೆಜ್ಜೆಯಿಟ್ಟು ಅಗ್ಗದ ದರದಲ್ಲಿ ಪಿಎಂ ಜನೌಷಧ ಕೇಂದ್ರಗಳಿಗೆ ಸುವಿಧಾ ಹೆಸರಿನ ಸ್ಯಾನಿಟರಿ ಪ್ಯಾಡ್‌ಗಳನ್ನು ಸರಬರಾಜು ಮಾಡುತ್ತಿತ್ತು. ಇದರಿಂದ ಅತ್ಯಂತ ಕಡಿಮೆ ದರದ ಸ್ಯಾನಿಟರಿ ಪ್ಯಾಡ್‌ಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಯಿತು.

ದುಬಾರಿ ಬೆಲೆ: ಈ ಮೊದಲು ಖಾಸಗಿ ಔಷಧಾಲಯಗಳಲ್ಲಿ ದುಬಾರಿ ದರದಲ್ಲಿ ಪ್ಯಾಡ್‌ ಗಳು ದೊರೆಯುತ್ತಿದ್ದವು. ಬಡ ಮಹಿಳೆಯರಿಗೆ ನಿಲುಕದ ತುತ್ತಾಗಿತ್ತು. ಇದರಿಂದಾಗಿ ಬಡ ಯುವತಿಯರು-ಮಹಿಳೆಯರು ಕೊಳ್ಳಲು ಹಿಂದೇಟು ಹಾಕುತ್ತಿದ್ದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಅಗ್ಗದ ಬೆಲೆ: ಕೇಂದ್ರ ಸರಕಾರವೂ ಬಡವರಿಗೆ ಕೈಗೆಟಕುವ ಅಗ್ಗದ ದರದಲ್ಲಿ ಪ್ಯಾಡ್‌ಗಳನ್ನು ಸರಬರಾಜು ಮಾಡಲಾಗುತ್ತಿತ್ತು. 4 ಪ್ಯಾಡ್‌ ಹೊಂದಿರುವ ಒಂದು ಪ್ಯಾಕೆಟ್‌ 10 ರೂ.ಗೆ ಲಭ್ಯವಾಗುತ್ತಿತ್ತು. ಇದನ್ನು ಇನ್ನಷ್ಟು ಅಗ್ಗಕ್ಕೆ ಇಳಿಸಿ 1 ರೂ.ಗೆ ಪ್ಯಾಡ್‌ ಲಭ್ಯವಾಗುವಂತೆ ಮಹಿಳೆಯರಿಗೆ ಅನುಕೂಲ ಕಲ್ಪಿಸಿಕೊಡಲಾಗಿತ್ತು.

ಸಿಗದಾದ ಸುವಿಧಾ: ಪಟ್ಟಣದಲ್ಲಿ ಕಳೆದ 15-20 ದಿನಗಳಿಂದ ಪ್ಯಾಡ್‌ಗಳ ಕೊರತೆ ಉಂಟಾಗಿದೆ. ನಿತ್ಯ ಪಿಎಂ ಜನೌಷಧ ಕೇಂದ್ರಗಳಿಗೆ ಮಹಿಳೆಯರು, ಯುವತಿಯರು ತಿರುಗುತ್ತಿದ್ದು, ನಿರಾಶಾಭಾವದಿಂದ ಹಿಂದಿರುಗುತ್ತಿದ್ದಾರೆ. ಬಂದ ಮಹಿಳೆಯರಿಗೆ ಉತ್ತರಿಸುವುದೇ ಜನೌಷಧ ಕೇಂದ್ರಗಳ ಮಾಲೀಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಮಹಿಳೆಯರಿಗೆ ತೊಂದರೆ: ಶಾಲಾ-ಕಾಲೇಜು, ವಸತಿ ನಿಲಯಗಳಿಗೆ ಆರೋಗ್ಯ ಇಲಾಖೆಯಿಂದಲೇ ಪ್ಯಾಡ್‌ಗಳನ್ನು ಪೂರೈಸಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿನಿಯರಿಗೆ ಕೊರತೆಯುಂಟಾಗಿಲ್ಲ. ಆದರೆ, ಸಾಮಾನ್ಯ ಮಹಿಳೆಯರಿಗೆ, ಯುವತಿಯರಿಗೆ ತೊಂದರೆಯಾಗಿದೆ. ಮಹಿಳೆಯರು ಬಾಯಿಬಿಟ್ಟು ಎಲ್ಲಿ ಹೇಳಿಕೊಳ್ಳದ ಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ದರದಲ್ಲಿ ಖಾಸಗಿ ಔಷಧ ಅಂಗಡಿಗಳಲ್ಲಿ ಸಿಗುವ ಪ್ಯಾಡ್‌ಗಳ ಖರಿದೀಸಲಾಗುತ್ತಿಲ್ಲ. ಇದು ಬಡ ಮಹಿಳೆಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಬೇಡಿಕೆಯಷ್ಟು ಪೂರೈಸುತ್ತಿಲ್ಲ: ಪ್ರತಿ ತಿಂಗಳು ಏನಿಲ್ಲವೆಂದರೂ 70ರಿಂದ 80 ಸಾವಿರ ಪ್ಯಾಡ್‌ಗಳು ಮಾರಾಟವಾಗುತ್ತಿದ್ದವು. ಇತ್ತೀಚಿಗೆ ಮುಂಗಡವಾಗಿ ಬುಕ್‌ ಮಾಡಿದ್ದರೂ ಕೂಡ ಶೇ. ಅರ್ಧಕ್ಕಿಂತಲೂ ಕಡಿಮೆ ಪೂರೈಸುತ್ತಿದ್ದಾರೆ. ಕೆಲದಿನಗಳಿಂದ ಅದು ಕೂಡ ಸಂಪೂರ್ಣವಾಗಿ ನಿಂತು ಹೋಗಿದೆ. ಇದರಿಂದ ಮಹಿಳೆಯರು ನಿತ್ಯ ಅಂಗಡಿಗೆ ಅಲೆದಾಡುವುದು ಮಾತ್ರ ನಿಂತಿಲ್ಲ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.