ಬಸ್ ಏಜೆಂಟ್ ಆಗಿದ್ದವರನ್ನು ತಂದು ಕಾಂಗ್ರೆಸ್ ಜನನಾಯಕನನ್ನಾಗಿ ಮಾಡಿತ್ತು
ಅನರ್ಹ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ದ ಎಚ್ ಎಂ ರೇವಣ್ಣ ವಾಗ್ದಾಳಿ
Team Udayavani, Sep 30, 2019, 2:20 PM IST
ಬೆಂಗಳೂರು: ಎಸ್ ಟಿ ಸೋಮಶೇಖರ್ ರದ್ದು ನಾಲಿಗೆಯಾ ಅಥವಾ ಬೇರೆನಾ ? ಬಸ್ ಏಜೆಂಟ್ ಆಗಿದ್ದವರನ್ನು ತಂದು ಕಾಂಗ್ರೆಸ್ ಜನನಾಯಕನನ್ನಾಗಿ ಮಾಡಿತ್ತು ಎಂದು ಅನರ್ಹ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ದ ಎಚ್ ಎಂ ರೇವಣ್ಣ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಎಸ್ ಬಿ ಎಂ ಮೂವರು ಆಡಿದ ಆಟ ಗೊತ್ತಿಲ್ವಾ? ಸೋಮಶೇಖರ್, ಭೈರತಿ, ಮುನಿರತ್ನ ಆಡಿದ್ದ ಆಟ ನಾವೂ ನೋಡಿದ್ದೇವೆ. ಮೊದಲು ಸಿದ್ದರಾಮಯ್ಯನವರನ್ನು ಹಾಡಿ ಹೊಗಳುತ್ತಿದ್ರಿ ಈಗ ನಾಲಿಗೆಗೆ ಏನಾಗಿದೆ.? ಎಲ್ಲಾ ಅಧಿಕಾರ ಅನುಭವಿಸಿ ಈಗ ಬಿಜೆಪಿ ಬಾಗಿಲಿಗೆ ಹೋಗಿ ನಿಂತಿದ್ದೀರಲ್ಲ, ನಿಮಗೇನಾದ್ರಾ ಮಾನ ಮರ್ಯಾದೆ ಇದೆಯಾ? ಎಂದು ಎಚ್ ಎಂ ರೇವಣ್ಣ ಅನರ್ಹರ ವಿರುದ್ಧ ಹರಿಹಾಯ್ದರು.
ಮುಂದೆ ಮಾತನಾಡಿದ ಅವರು ಎಲ್ಲ ಸವಲತ್ತುಗಳನ್ನು ಪಡೆದುಕೊಂಡು ಈಗ ಮಾತನಾಡ್ತೀರಲ್ಲ. ಸಿದ್ದರಾಮಯ್ಯ ಮನೆಗೆ ಬಂದರೆ ನಿಮಗೆ ಸ್ಪೆಷಲ್ ಟ್ರೀಟ್ಮೆಂಟ್ ಸಿಗುತ್ತಿತ್ತು. ಈಗ ಅವರ ಬಗ್ಗೆಯೇ ಮಾತನಾಡ್ತೀರಲ್ಲ ನಾಚಿಕೆ ಆಗಲ್ವಾ ಎಂದು ಖಾರವಾಗಿ ನುಡಿದರು.
ಕೃಷ್ಣ ಭೈರೇಗೌಡರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸ್ತೀವಿ ಅಂದಿರಲ್ಲ. ಈಗ ನಿಮ್ಮ ನಾಲಿಗೆಗೆ ಏನಾಗಿದೆ. ಬಹಳ ದಿನ ನಿಮ್ಮ ಆಟ ನಡೆಯೋದಿಲ್ಲ. ಮುಂದೆ ನಿಮಗೆ ಮಾರಿಹಬ್ಬ ಇದೆ ಎಚ್ ಎಂ ರೇವಣ್ಣ ಹೆಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ