ಹಿಂಗಾರು ಬಿತ್ತನೆಗೆ ಭರ್ಜರಿ ತಯಾರಿ

ಉತ್ತರೆ ಮಳೆಯಿಂದ ಜಮೀನುಗಳಲ್ಲಿ ಸಾಕಷ್ಟು ತೇವಾಂಶಕೃಷಿ ಇಲಾಖೆಯಿಂದ ಕಡಲೆ ಬೀಜ ದಾಸ್ತಾನು

Team Udayavani, Sep 30, 2019, 2:48 PM IST

3-Sepctember-10

ತಿಪ್ಪೇಸ್ವಾಮಿ ನಾಕೀಕೆರೆ
ಚಿತ್ರದುರ್ಗ:
ಜಿಲ್ಲೆಯಲ್ಲಿ ಮುಂಗಾರು ಕೈಒಟ್ಟು, ಹಿಂಗಾರು ಕೈ ಹಿಡಿದಿದೆ. ಪರಿಣಾಮ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಲು ಸಾಧ್ಯವಾಗದ ರೈತರು ಹಿಂಗಾರಿ ಬೆಳೆಗಳ ಬಿತ್ತನೆಗೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

ಕೃಷಿ ಇಲಾಖೆ ಕೂಡಾ ಈಗಾಗಲೇ 15 ಸಾವಿರ ಕ್ವಿಂಟಲ್‌ ಕಡಲೆ ಬೀಜ ದಾಸ್ತಾನು ಮಾಡಿದೆ. ಒಟ್ಟು 30 ಸಾವಿರ ಕ್ವಿಂಟಲ್‌ ಬೀಜದ ಅವಶ್ಯಕತೆಯಿದ್ದು, ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ದಾಸ್ತಾನಿಗೆ ತರಿಸಲು ಸಿದ್ಧತೆಯಲ್ಲಿದೆ. ಜಿಲ್ಲೆಯಲ್ಲಿ ಹಿಂಗಾರು ಬೆಳೆಯಾಗಿ ರೈತರು ಕಡಲೆ ಬೆಳೆಯುತ್ತಾರೆ. ಇದರ ಜತೆಗೆ ಅಕ್ಕಡಿ ಅಥವಾ ಕಡೆಸುತ್ತಿಗೆ ಕುಸುಬೆಯನ್ನೂ ಹಾಕಲಾಗುತ್ತೆ. ವಿಶೇಷವಾಗಿ ಹಸ್ತಾ ಮಳೆಗೆ ಕಡಲೆ ಬಿತ್ತನೆ ಆರಂಭವಾಗುತ್ತದೆ. ಉತ್ತರೆ ಮಳೆಯಿಂದ ಜಮೀನುಗಳಲ್ಲಿ ಸಾಕಷ್ಟು ತೇವಾಂಶ ಇದೆ. 75 ದಿನಕ್ಕೆ ಕಟಾವಿಗೆ ಬರುವ ಕಡಲೆಯನ್ನು ಎರೆ ಭೂಮಿಯಲ್ಲಿ ಬೆಳೆಯುತ್ತಾರೆ.

ಚಿತ್ರದುರ್ಗ ಕಸಬಾ, ತುರುವನೂರು, ಬೆಳಗಟ್ಟ, ಭರಮಸಾಗರ, ಚಳ್ಳಕೆರೆ, ಹಿರಿಯೂರಿನ ಕೆಲ ಭಾಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕಿನ ಕೆಲ ಭಾಗಗಳಲ್ಲಿರುವ ಎರೆ ಭೂಮಿಯಲ್ಲಿ ಕೆಲ ರೈತರಷ್ಟೇ ಸಾಂಪ್ರದಾಯಿಕವಾಗಿ ಕಡಲೆ ಬೆಳೆಯುವ ರೂಢಿ ಇಟ್ಟುಕೊಂಡಿದ್ದಾರೆ. ಕೃಷಿ ಇಲಾಖೆ ಅಂದಾಜಿನ ಪ್ರಕಾರ ಸುಮಾರು 50 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆಯಾಗುತ್ತದೆ. ಆದರೆ, ಈ ವರ್ಷ ಇದರ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಮುಂಗಾರು ಹಂಗಾಮಿನಲ್ಲಿ 3.55 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಇತ್ತು. ಆದರೆ, 2.35 ಲಕ್ಷ ಹೆಕ್ಟೇರ್‌ ಮಾತ್ರ ಬಿತ್ತನೆಯಾಗಿ ಶೇ. 65ರಷ್ಟು ಗುರಿ ಸಾಧಿ ಸಲಾಗಿದೆ. ಸಮರ್ಪಕ ಮಳೆ ಬಾರದ ಕಾರಣ ಇನ್ನೂ ಶೇ.35ರಷ್ಟು ಬಿತ್ತನೆ ಪ್ರದೇಶ ಖಾಲಿ ಉಳಿದಿದೆ. ಈಗ ಹದವಾಗಿ ಮಳೆ ಬಂದಿರುವುದರಿಂದ ಕಡಲೆಯನ್ನಾದರೂ ಬೆಳೆಯೋಣ ಎಂಬ ತುಡಿತ ರೈತರಲ್ಲಿದೆ.

ಒಂದೇ ದರ: ಕಡಲೆ ಬೀಜಕ್ಕೆ ರೈತರೀಗ ಮುಗಿಬಿದ್ದಿದ್ದಾರೆ. ಇದೇ ಕಾರಣಕ್ಕೆ ಸರ್ಕಾರ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಬೀಜ ವಿತರಣೆ ಮಾಡುವ ಕಾರ್ಯಕ್ರಮ ಜಾರಿಗೆ ತಂದಿದೆ. ಸಾಮಾನ್ಯವಾಗಿ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗುವ ಕಡಲೆ ಬೀಜದ ದರಕ್ಕೂ, ಮಾರುಕಟ್ಟೆಯಲ್ಲಿ ಸಿಗುವ ಕಡಲೆ ಬೀಜದ ದರಕ್ಕೂ ಕನಿಷ್ಠ ಒಂದು ಸಾವಿರವಾದರೂ ವ್ಯತ್ಯಾಸ ಇರುತ್ತದೆ. ಆದರೆ, ಸದ್ಯ ಇರುವ ಬೆಲೆಯನ್ನು ಗಮನಿಸಿದರೆ ಮಾರುಕಟ್ಟೆ ಹಾಗೂ ರೈತ ಸಂಪರ್ಕ ಕೇಂದ್ರದಲ್ಲಿ ಹೆಚ್ಚು ಕಡಿಮೆ ಒಂದೇ ಬೆಲೆ ಇದೆ.

ಕೃಷಿ ಇಲಾಖೆ ಪ್ರತಿ ಕೆಜೆ ಕಡಲೆ ಬೀಜಕ್ಕೆ 45 ರೂ. ಅಂದರೆ ಕ್ವಿಂಟಲ್‌ಗೆ 4500 ರೂ. ನಿಗ ದಿ ಮಾಡಿದೆ. ಮಾರುಕಟ್ಟೆಯಲ್ಲಿ 4600, 4650 ರೂ.ಗೆ ಕಡಲೆ ಬೀಜ ದೊರೆಯುತ್ತಿದೆ. ಕೇವಲ 100-150 ರೂ. ವ್ಯತ್ಯಾಸವಿರುವುದರಿಂದ ರೈತರು ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಮಾರುಕಟ್ಟೆ ದರಕ್ಕಿಂತ ಕಡಿಮೆ ಮಾಡಬೇಕು ಎಂಬ ಕೂಗು ಕೇಳಿಬಂದಿದೆ.

ಬಿತ್ತನೆಗೆ ನೀಡುವ ಪ್ರಮಾಣದಲ್ಲಿ ವ್ಯತ್ಯಾಸ: ಕೃಷಿ ಇಲಾಖೆ ಪ್ರತಿ ಎಕರೆಗೆ 20 ರಿಂದ 25 ಕೆಜಿ ಕಡಲೆ ಬೀಜ ಬಿತ್ತನೆ ಮಾಡಬಹುದು ಎಂದು ಅಂದಾಜಿಸಿ 5 ಎಕರೆವರೆಗೆ ಭೂಮಿ ಇರುವ ರೈತರಿಗೆ 1 ಕ್ವಿಂಟಲ್‌ ಬೀಜ ವಿತರಣೆ ಮಾಡಲು ತೀರ್ಮಾನಿಸಿದೆ. ಪ್ರತಿ ಎಕೆರೆಗೆ
ಕನಿಷ್ಠ 30ರಿಂದ 35 ಕೆಜಿ ಬಿತ್ತನೆ ಮಾಡಬೇಕಾಗುತ್ತದೆ. ಆದ್ದರಿಂದ ಇಲಾಖೆ ನೀಡುವ ಬೀಜ ಸಾಕಾಗುವುದಿಲ್ಲ. ಇದರ ಪ್ರಮಾಣ ಹೆಚ್ಚಿಸಬೇಕು ಎನ್ನುತ್ತಿದ್ದಾರೆ ರೈತರು.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.