ಮಾಬುಕಳದಿಂದ ಕೋಟದವರೆಗೆ ಬೃಹತ್ ಪ್ರತಿಭಟನ ಪಾದಯಾತ್ರೆ
ಸರ್ವಿಸ್ ರಸ್ತೆಗೆ ಆಗ್ರಹ
Team Udayavani, Oct 1, 2019, 5:14 AM IST
ಕೋಟ: ಚತುಷ್ಪಥ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಸೆ. 30ರಂದು ಮಾಬುಕಳದಿಂದ ಕೋಟದ ತನಕ ಬೃಹತ್ ಪ್ರತಿಭಟನ ಪಾದಯಾತ್ರೆ ಜರಗಿತು.
ಜಾಗೃತಿ ಸಮಿತಿ ಅಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನದ ಮಾಬುಕಳದಲ್ಲಿ ಪಾದಯಾತ್ರೆಗೆ ಚಾಲನೆ ನೀಡಿದರು.
ಕುಮ್ರಗೋಡಿನಿಂದ ಮಾಬುಕಳ, ಸಾಸ್ತಾನ, ಸಾಲಿಗ್ರಾಮ, ಕೋಟ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣವಾಗಬೇಕು ಮತ್ತು ಅವೈಜ್ಞಾನಿಕ ಕಾಮಗಾರಿಗಳನ್ನು ಸರಿಪಡಿಸಬೇಕು. ಸರ್ವಿಸ್ ರಸ್ತೆ ನಿರ್ಮಾಣವಾಗುವ ತನಕ ಪೊಲೀಸರು ವಿರುದ್ಧ ದಿಕ್ಕಿನಲ್ಲಿ ಸಂಚರಿಸುವವರಿಗೆ ದಂಡ ವಿಧಿಸಬಾರದು ಎಂದು ಘೋಷಣೆಗಳನ್ನು ಕೂಗಿದರು.
ನವಯುಗ ವಿರುದ್ಧ ಆಕ್ರೋಶ
ಪ್ರತಿಭಟನಾ ಮೆರವಣಿಗೆಯಲ್ಲಿ ವಾಹನ ಚಾಲಕ- ಮಾಲಕರು, ಸ್ವಸಹಾಯ ಸಂಘಗಳು, ಸ್ಥಳೀಯರು ಬೃಹತ್ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು ಮತ್ತು ನವಯುಗ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಾಸ್ತಾನ, ಗುಂಡ್ಮಿ, ಚೇಂಪಿ, ಸಾಲಿಗ್ರಾಮ, ಮುಂತಾದ ಕಡೆಗಳಲ್ಲಿ ತಂಪು ಪಾನೀಯಗಳನ್ನು ವಿತರಿಸಲಾಯಿತು ಹಾಗೂ ಹಲವು ಕಡೆ ಸ್ಥಳೀಯರು ಮೆರವಣಿಗೆಯ ಜತೆ ಸೇರಿ ಹೆಜ್ಜೆ ಹಾಕಿದರು. ಪ್ರತಿಭಟನೆಗೆ ಆಗಮಿಸುವವರಿಗೆ ವಾಹನ ಮಾಲಕರಿಂದ ಉಚಿತ ವಾಹನದ ವ್ಯವಸ್ಥೆ ಕೂಡ ಮಾಡಲಾಗಿತ್ತು.
ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನಾ ಮೆರವಣಿಗೆ ಸಂದರ್ಭ ಅಹಿತಕರ ಘಟನೆಗಳು ನಡೆಯದಂತೆ ಉಡುಪಿ ಡಿವೈಎಸ್ಪಿ ಜಯಶಂಕರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು ಹಾಗೂ ಕೋಟ, ಸಾಲಿಗ್ರಾಮ, ಸಾಸ್ತಾನ ಮುಂತಾದ ಕಡೆ ಪೊಲೀಸರನ್ನು ನಿಯೋಜಿಸಲಾಗಿತ್ತು. ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಉಡುಪಿಯ ಮಂಜುನಾಥ ಮತ್ತು ಠಾಣಾಧಿಕಾರಿಗಳಾದ ನಿತ್ಯಾನಂದ ಗೌಡ, ಮಧು, ರಾಘವೇಂದ್ರ ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಜಾಗೃತಿ ಸಮಿತಿ ಕಾರ್ಯದರ್ಶಿ ವಿಟuಲ ಪೂಜಾರಿ, ಕಾನೂನು ಸಲಹೆಗಾರ ಶ್ಯಾಮ್ಸುಂದರ ನಾೖರಿ, ಬ್ರಹ್ಮಾವರ ತಾಲೂಕು ಜನಜಾಗೃತಿ ಸಮಿತಿ ಅಧ್ಯಕ್ಷ ಅಚ್ಯುತ್ ಪೂಜಾರಿ, ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್, ತಾ.ಪಂ. ಸದಸ್ಯೆ ಜ್ಯೋತಿ ಉದಯ ಪೂಜಾರಿ, ಲಲಿತಾ, ಜಾಗೃತಿ ಸಮಿತಿಯ ಸದಸ್ಯ ಪ್ರಶಾಂತ ಶೆಟ್ಟಿ ನಾಗರಾಜ ಗಾಣಿಗ ಸಾಲಿಗ್ರಾಮ, ಅಲ್ವಿನ್ ಅಂದ್ರಾಡೆ, ಗೋವಿಂದ ಪೂಜಾರಿ, ಜಿಲ್ಲಾ ಲಾರಿ ಮಾಲಕರ ಸಂಘದ ರಾಜೇಶ್ ಕಾವೇರಿ, ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ