ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ನೆರವು ಘೋಷಣೆ

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ: 33.85 ಕೋ.ರೂ. ವಾರ್ಷಿಕ ಕೊಡುಗೆಗಳ ಲೋಕಾರ್ಪಣೆ

Team Udayavani, Oct 1, 2019, 5:00 AM IST

a-41

ಮೂಡುಬಿದಿರೆ: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥರು ಸಮಾರಂಭವನ್ನು ಉದ್ಘಾಟಿಸಿದರು.

ಮೂಡುಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೆರವು ಘೋಷಣೆ ಮತ್ತು ಪ್ರತಿಷ್ಠಾನದ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕೊಡುಗೆಗಳ ಲೋಕಾರ್ಪಣೆ ವಿದ್ಯಾಗಿರಿಯಲ್ಲಿ ಸೋಮವಾರ ಜರಗಿತು.

ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥರು ಸಮಾರಂಭವನ್ನು ಉದ್ಘಾಟಿಸಿ, ಸಮಗ್ರ ಶಿಕ್ಷಣದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣ ದೊಂದಿಗೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಾದರಿಯಾದ ಬದ್ಧತೆ ತೋರುತ್ತಿದೆ ಎಂದರು.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಮಾತನಾಡಿ, ಸಮಾಜಮುಖೀಯಾಗಿ ಶಿಕ್ಷಣ ಸಂಸ್ಥೆ ಹೇಗೆ ಕೆಲಸ ಮಾಡಬಹುದು ಎಂದು ಡಾ| ಆಳ್ವರು ತೋರಿಸಿಕೊಡುತ್ತಿದ್ದಾರೆ. ಇಂಥ ಚಟುವಟಿಕೆಗಳಿಗೆ ಸಮಾಜ, ಸರಕಾರ ಬೆಂಬಲ ನೀಡಬೇಕಾಗಿದೆ ಎಂದರು.

ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಮುಖ್ಯ ಅತಿಥಿಯಾಗಿ ಮಾತನಾಡಿ, ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವ ಸಂಸ್ಥೆ, ವ್ಯಕ್ತಿಗಳನ್ನು ಮಾಧ್ಯಮಗಳು ಲೋಕಕ್ಕೆ ಪರಿಚಯಿಸಿ, ಸಮಾಜವೂ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಮಾಡಬೇಕಾಗಿದೆ ಎಂದರು.
ಪೇಜಾವರ ಶ್ರೀಪಾದರ ಹಿರಿತನದ ಗೋವರ್ಧನ ಗಿರಿ ಟ್ರಸ್ಟ್‌ಗೆ ಆಳ್ವಾಸ್‌ ನಿಂದ ಒಂದು ಲಕ್ಷ ರೂ.ಗಳ ಡಿಡಿ ಯನ್ನು ಸಮರ್ಪಿಸಲಾಯಿತು.

33.85 ಕೋ.ರೂ. ಕೊಡುಗೆಗಳ ಲೋಕಾರ್ಪಣೆ
ಆಳ್ವಾಸ್‌ ಅಧ್ಯಕ್ಷ ಡಾ| ಎಂ. ಮೋಹನ ಆಳ್ವರು 2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಇತರ ಸಾಮಾಜಿಕ ಚಟುವಟಿಕೆಗಳಿಗೆ ವಿನಿಯೋಗಿಸುತ್ತಿರುವ 33.85 ಕೋ.ರೂ. ವಾರ್ಷಿಕ ಉಚಿತ ಕೊಡುಗೆಗಳ ವಿವರ ನೀಡಿದರು.

ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ ಚಟು ವಟಿಕೆ ವ್ಯಾಪ್ತಿಗೆ ಬರುವ 4,543 ವಿದ್ಯಾರ್ಥಿಗಳ ಉಚಿತ ಶಿಕ್ಷಣ ವ್ಯವಸ್ಥೆಗೆ 13.76 ಕೋ. ರೂ., ಉಚಿತ ವಾಸ್ತವ್ಯಕ್ಕೆ 5.73 ಕೋ.ರೂ., ಉಚಿತ ಭೋಜನಕ್ಕೆ 5.96 ಕೋ.ರೂ., ಸ್ಕೌಟ್‌ ಗೈಡ್ಸ್‌ ಕನ್ನಡ ಭವನ ನಿರ್ಮಾಣಕ್ಕೆ 3.5 ಕೋ.ರೂ., ಆಳ್ವಾಸ್‌ ಕನ್ನಡ ಮಾಧ್ಯಮ ಶಾಲೆಗೆ 3.5 ಕೋ.ರೂ., ಎಚ್‌ಐವಿ ಪೀಡಿತರಿಗೆ, ನುಡಿಸಿರಿ ಘಟಕ ನಿರ್ವಹಣೆಗೆ 1.5 ಕೋ.ರೂ., ಕ್ರೀಡಾ ಚಟುವಟಿಕೆಗಳಿಗೆ 1.26 ಕೋ.ರೂ., ಕ್ರೀಡಾಕೂಟ ಗಳ ಆಯೋಜನೆಗೆ 1 ಕೋ.ರೂ. ವಿನಿ ಯೋಗಿಸಲಾಗುತ್ತಿದೆ ಎಂದರು.

ಶಾಸಕ ಉಮಾನಾಥ ಕೋಟ್ಯಾನ್‌, ಮಾಜಿ ಸಚಿವರಾದ ಕೆ. ಅಮರನಾಥ ಶೆಟ್ಟಿ, ಕೆ. ಅಭಯಚಂದ್ರ, ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಮುಖ್ಯ ಅತಿಥಿ ಯಾಗಿದ್ದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.