ತಕ್ಷಣ ನೀತಿ ಸಂಹಿತೆ ಜಾರಿಗೆ ಆಯೋಗಕ್ಕೆ ಕಾಂಗ್ರೆಸ್ ಮನವಿ
Team Udayavani, Oct 1, 2019, 3:00 AM IST
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಚುನಾವಣೆ ಘೊಷಣೆ ಮಾಡಿ, ನವೆಂಬರ್ 11 ರಿಂದ ನೀತಿ ಸಂಹಿತೆ ಜಾರಿಗೊಳಿಸಲು ಮುಂದಾಗಿದ್ದು, ಇದರಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಅನುಕೂಲ ಮಾಡಿಕೊಡುವ ಹುನ್ನಾರ ಅಡಗಿದ್ದು, ತಕ್ಷಣ ನೀತಿ ಸಂಹಿತೆ ಜಾರಿಗೊಳಿಸಬೇಕೆಂದು ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವ ದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಂತರ ಮಾಧ್ಯಮ ಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ದೇಶದ ಇತಿಹಾಸದಲ್ಲಿ ಆಯೋಗ ಈ ರೀತಿ ನಡೆದುಕೊಂಡಿರಲಿಲ್ಲ.
ಚುನಾವಣಾ ಆಯೋಗ ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಕಕ್ಷಿದಾರರಲ್ಲದಿದ್ದರೂ, ಸ್ವಯಂ ಪ್ರೇರಿತರಾಗಿ ಹೇಳಿಕೆ ನೀಡಿ ಅನರ್ಹರ ಪರ ವಕಾಲತ್ತು ವಹಿಸುತ್ತಾರೆ. ಚುನಾವಣೆ ಮುಂದೂಡಲು ಅವಕಾಶವಿಲ್ಲ ಎಂದು ಕೋರ್ಟ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದ ಆಯೋಗ ಮತ್ತೆ ಚುನಾವಣೆ ಮುಂದೂಡಲು ತೀರ್ಮಾನಿ ಸಿರುವುದಾಗಿ ಕೋರ್ಟ್ ಮುಂದೆ ಹೇಳಿ, ಒಂದೇ ದಿನದಲ್ಲಿ ಮತ್ತೆ ಚುನಾವಣೆ ಘೋಷಣೆ ಮಾಡಿದರು. ಆಯೋಗದ ಈ ನಡೆಯ ಹಿಂದೆ ಯಾರಿದ್ದಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ
D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…