ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರಾಜ್ಯ ಪ್ರಶಸ್ತಿ


Team Udayavani, Oct 1, 2019, 5:56 AM IST

bagamandala

ಮಡಿಕೇರಿ: ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಕಾರ್ಯನಿರ್ವಹಣೆ ಮತ್ತು ಸರ್ವಾಂಗೀಣ ಪ್ರಗತಿಯ ಕಾರಣಕ್ಕಾಗಿ ಅಪೆಕ್ಸ್‌ ಬ್ಯಾಂಕ್‌ 2017-18ನೇ ಸಾಲಿನ ರಾಜ್ಯ ಮಟ್ಟದ ತೃತೀಯ ಪ್ರಶಸ್ತಿಯನ್ನು ನೀಡಿದೆ ಎಂದು ಸಂಘದ ಅಧ್ಯಕ್ಷ ಹೊಸೂರು ಸತೀಶ್‌ ಕುಮಾರ್‌ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಪೆಕ್ಸ್‌ ಬ್ಯಾಂಕ್‌ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ಸಂಘದ ಪರವಾಗಿ ಸ್ವೀಕರಿಸಲಾಗಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಪಾರಿತೋಷಕವನ್ನು ಒಳಗೊಂಡಿದೆ. ಪ್ರಶಸ್ತಿ ಪಡೆದ ರಾಜ್ಯದ ಆರು ಸಂಘಗಳ ಪೈಕಿ ನಮ್ಮ ಸಂಘವೂ ಒಂದಾಗಿದೆ. ಅಲ್ಲದೆ, ಕೊಡಗು ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಈ ಪ್ರಶಸ್ತಿಯನ್ನು ಪಡೆದ ಸಂಘ ತಮ್ಮದೆಂದು ಹರ್ಷ ವ್ಯಕ್ತಪಡಿಸಿದರು.

ಪ್ರಶಸ್ತಿ ಸ್ವೀಕರಿಸುವ ಸಂದರ್ಭ ಸಂಘದ ನಿರ್ದೇಶಕರಾದ ಜೆ.ಎಸ್‌. ನಂಜುಂಡಪ್ಪ, ಅಯ್ಯಣೀರ ಎ.ದಿನೇಶ್‌ ಹಾಜರಿದ್ದರು.

ಡಿಸಿಸಿ ಪ್ರಶಸ್ತಿ
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಿಂದ 2018-19ನೇ ಸಾಲಿನ ಸ್ವಸಹಾಯ ಸಂಘಗಳ ರಚನೆ ಮತ್ತು ಸಾಲ ಜೋಡಣೆಗಾಗಿ ಮಡಿಕೇರಿ ತಾಲ್ಲೂಕಿಗೆೆ ಸಂಬಂಧಿಸಿದಂತೆ ಪ್ರಥಮ ಬಹುಮಾನವನ್ನು ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಡೆದುಕೊಂಡಿದೆ ಎಂದು ಸತೀಶ್‌ ಕುಮಾರ್‌ ತಿಳಿಸಿದರು.

25.19 ಲಕ್ಷ ರೂಲಾಭ
ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 1991-92 ನೇ ಸಾಲಿನಿಂದ ನಿರಂತರವಾಗಿ ಲಾಭವನ್ನು ಹೊಂದಿಕೊಂಡು ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸಂಘವು 25.19 ಲಕ್ಷ ರೂ. ಲಾಭ ಗಳಿಸುವ ಮೂಲಕ ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ಸತತ ಎ ದರ್ಜೆಯನ್ನು ಹೊಂದಿರುವುದಾಗಿ ಸತೀಶ್‌ ಕುಮಾರ್‌ ಮಾಹಿತಿ ನೀಡಿದರು. ಉಪಾಧ್ಯಕ್ಷ ಬಾರಿಕೆ ಪುಷ್ಪ, ನಿರ್ದೇಶಕರುಗಳಾದ ಜೆ.ಎಸ್‌.ನಂಜುಂಡಪ್ಪ, ಅಯ್ಯಣಿರ ಎ.ದಿನೇಶ್‌, ಕುದುಪಜೆ ಹರೀಶ್‌ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಕಲಾವತಿ ಉಪಸ್ಥಿತರಿದ್ದರು.

ಮೃತರ ಸಾಲಮನ್ನಾ
ಸಂಘದ ಸದಸ್ಯರಾದ ಕೋರಂಗಾಲ ಗ್ರಾಮದ ಅತ್ತೇಡಿ ಎಂ.ಯಶವಂತ, ಬೋಳನ ಎ. ಬಾಲಕೃಷ್ಣ,ಅವರ ಪತ್ನಿ ಬೋಳನ ಬಿ. ಯಮುನಾ ಮತ್ತು ಕಾಳನ ಎಂ. ಉದಯ ಹಾಗೂ ನಡುಬೆಟ್ಟಿ ರಾಜು ‌ ಭೂ ಕುಸಿತದಲ್ಲಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸದಸ್ಯರ ಡಿವಿಡೆಂಡ್‌ ಮೊತ್ತದಲ್ಲಿ ಮೃತ ಬಾಲಕೃಷ್ಣ ಅವರು ಹೊಂದಿಕೊಂಡಿದ್ದ ವಾಹನ ಸಾಲ ಅಸಲು ಮತ್ತು ಬಡ್ಡಿ ಸೇರಿ 37,068 ಹಾಗೂ ಮೃತ ಯಶವಂತ ಅವರು ಹೊಂದಿಕೊಂಡಿದ್ದ ವಾಹನ ಸಾಲ ಮತ್ತು ಆಭರಣ ಸಾಲ ಅಸಲು ಮತ್ತು ಬಡ್ಡಿ ಸೇರಿ 31,720 ರೂ.ಗಳನ್ನು ಸಂಪೂರ್ಣ ಮನ್ನಾ ಮಾಡಲಾಗಿದೆ. ಮೃತ ಉದಯ ಹಾಗೂ ರಾಜು ಅವರ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ನೆರವು ನೀಡಲಾಗಿದೆ ಎಂದು ಸತೀಶ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.