ಪ್ರವಾಹದಲ್ಲಿ ಕೊಚ್ಚಿ ಹೋದ ಬೆಳೆ: ರೈತ ಆತ್ಮಹತ್ಯೆ
Team Udayavani, Oct 1, 2019, 1:32 PM IST
ಬೆಳಗಾವಿ: ಜಿಲ್ಲೆಯಲ್ಲಿ ಅಪ್ಪಳಿಸಿದ ಭೀಕರ ಪ್ರವಾಹದಿಂದ ಬೆಳೆ ಹಾನಿ ಆಗಿದ್ದಕ್ಕೆ ಮನ ನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ.
ಅಂಬೇವಾಡಿ ಗ್ರಾಮದ ಮಾರುತಿ ನಾರಾಯಣ ರಾಕ್ಷೆ(60) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಲದಲ್ಲಿ ಭತ್ತ ಹಾಗೂ ಆಲೂಗಡ್ಡೆ ಬೆಳೆದಿದ್ದನು. ಕಳೆದ ಎರಡು ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಮಲಪ್ರಭೆ ನದಿಯಲ್ಲಿ ನೆರೆ ಬಂದಿತ್ತು. ಹೀಗಾಗಿ ಬೆಳೆದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಸರ್ಕಾರದಿಂದ ಬೆಳೆ ಪರಿಹಾರವೂ ಇಲ್ಲ, ಬೆಳೆಯೂ ಸಿಕ್ಕಿಲ್ಲ ಎಂದು ರೈತ ಮಾರುತಿ ನೊಂದುಕೊಂಡಿದ್ದನು.
ಕಳೆದ ಒಂದು ವಾರದಿಂದ ಮಾನಸಿಕವಾಗಿ ನೊಂದುಕೊಂಡಿದ್ದ ರೈತ ಮಾರುತಿ ಸೋಮವಾರ ವಿಷ ಸೇವಿಸಿದ್ದನು. ಕೂಡಲೇ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮಂಗಳವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ
ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ
Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು
MUST WATCH
ಹೊಸ ಸೇರ್ಪಡೆ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ