ತಾಲೂಕಿನಲ್ಲಿ ಮಿತಿ ಮೀರಿದ ಲಂಚದ ಹಾವಳಿ


Team Udayavani, Oct 1, 2019, 5:22 PM IST

Udayavani Kannada Newspaper

ಸಕಲೇಶಪುರ: ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದ್ದು, ಬಡವರು ತಾಲೂಕಿನಲ್ಲಿ ಬದುಕಲಾರದ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕು ಕಚೇರಿ ಭ್ರಷ್ಟಾಚಾರದ ಕೂಪವಾಗಿದ್ದು ಹಣವಿಲ್ಲದೇ ಇಲ್ಲಿ ಯಾವ ಕೆಲಸವೂ ಜನಸಾಮಾ ನ್ಯರಿಗೆ ಆಗುವುದಿಲ್ಲ. ತಾಲೂಕು ಕಚೇರಿಯಲ್ಲಿ ವಿಧವಾ ಪಿಂಚಣಿ, ಅಂಗವಿಕಲರ ಪಿಂಚಣಿ, ಪಡಿತರ ಚೀಟಿ, ಆದಾಯ ಹಾಗೂ ಜಾತಿ ಪ್ರಮಾಣ ಪತ್ರ, ಮತ್ತಿತರ ಕೆಲಸಗಳಿಗೆ ಲಂಚ ನೀಡುವುದು ಅನಿವಾರ್ಯವಾಗಿದೆ.

ಖಾತೆ ವರ್ಗಾವಣೆಗೂ ಲಂಚ ಕೊಡಬೇಕು: ಹೊರ ಊರಿನವರು ಇಲ್ಲಿ ಜಮೀನನ್ನು ಖರೀದಿಸಿದರೆ ತಮ್ಮ ಹೆಸರಿಗೆ ಖಾತೆ ವರ್ಗಾಯಿಸಿಕೊಳ್ಳಲು ಸುಮಾರು 25ರಿಂದ 50 ಸಾವಿರ ರೂ. ಲಂಚ ಪಡೆಯಲಾಗುತ್ತದೆ. ಇಲ್ಲದಿದ್ದಲ್ಲಿ ಅವರ ಹೆಸರಿನಲ್ಲಿ ಖಾತೆ ಆಗದಂತೆ ವಿವಿಧ ನೆಪಗಳನ್ನು ಹೇಳಿ ತಡೆಹಿಡಿಯಲಾಗುತ್ತದೆ. ಮಿನಿ ವಿಧಾನಸೌಧ, ರಾಜಸ್ವ ನಿರೀಕ್ಷಕರ ಕಚೇರಿ, ಸರ್ವೆ ಇಲಾಖೆಯ ಕಚೇರಿಗಳು ಒಂದೆಡೆ ಇರಬೇಕೆಂಬ ನಿಯಮವಿದ್ದರೂ ರಾಜಸ್ವ ನಿರೀಕ್ಷಕರ ಕಚೇರಿ ಹಾಗೂ ಸರ್ವೆ ಇಲಾಖೆ ಬೇರೆ ಬೇರೆ ಕಡೆಯಿದ್ದು ಇದನ್ನು ಮಿನಿವಿಧಾನಸೌಧಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳದ ಕಾರಣ ಲಂಚದ ಹಾವಳಿ ಮಿತಿ ಮೀರಿದೆ.

ತರಾಟೆಗೆ ತೆಗೆದುಕೊಂಡಿದ್ದ ಅಧಿಕಾರಿ: ಮಿನಿ ವಿಧಾನಸೌಧದಲ್ಲಿರುವ ಖಜಾನೆ ಕಚೇರಿಯಲ್ಲಂತೂ ಲಂಚವಿಲ್ಲದೇ ಯಾವುದೇ ಕೆಲಸವಾಗುವುದಿಲ್ಲ. ಇತ್ತೀಚೆಗಷ್ಟೆ ಸಕಾಲ ವಿಭಾಗದ ಮುಖ್ಯಸ್ಥ ಮಥಾಯಿರವರು ಸಕಾಲ ಅಡಿಯಲ್ಲಿ ಸಲ್ಲಿಸುವ ಸೇವೆಗಳ ಬಗ್ಗೆ ತಾಲೂಕು ಕಚೇರಿಯಲ್ಲಿ ಬೋರ್ಡ್‌ ಹಾಕದಿದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದರೂ ಸಕಾಲ ಸೇವೆಗಳ ಬಗ್ಗೆ ಮಾಹಿತಿ ನೀಡುವ ಬೋರ್ಡ್‌ ಹಾಕಿಲ್ಲ. ಒಬ್ಬ ಸರ್ಕಾರಿ ನೌಕರ ಮತ್ತೂಂದು ಕಚೇರಿಯಲ್ಲಿ ಹಣ ಕೊಡದೇ ತನ್ನ ಕೆಲಸ ಮಾಡಿಸಿಕೊಳ್ಳುವುದು ಕಷ್ಟಕರವಾಗಿದೆ. ಸರ್ಕಾರಿ ಸಿಬ್ಬಂದಿ ಬಳಿ ಗುರುತು ಪರಿಚಯವಿದ್ದವರು ಹೋದಲ್ಲಿ ಕೆಲಸವಾಗುತ್ತದೆ ಎಂಬುದು ಸುಳ್ಳಾಗಿದೆ. ಏಕೆಂದರೆ ನೌಕರರಿಗೆ ಹಣ ಸಿಗದಿರುವುದರಿಂದ ಇವರ ಕೆಲಸಗಳನ್ನು ಮಾಡಿ ಕೊಡಲು ಮುಂದಾಗುವುದಿಲ್ಲ. ಅದೇ ನೌಕರರಿಗೆ ಗುರುತು ಪರಿಚಯವಿಲ್ಲದವರು ಹಣ ನೀಡಿ ಮಧ್ಯವರ್ತಿಗಳಿಂದ ಕೆಲಸ ಮಾಡಿಸಿಕೊಳ್ಳುತ್ತಾರೆ.

ಭೂಮಾಪನಾ ಇಲಾಖೆಯಲ್ಲಿ ಭ್ರಷ್ಟಾಚಾರ: ತಾಲೂಕಿನಲ್ಲಿ ಅತಿ ದೊಡ್ಡ ಭ್ರಷ್ಟಾಚಾರದ ಕೂಪವಾಗಿರುವುದು ಭೂಮಾಪನ ಇಲಾಖೆ. ಇಲ್ಲಿ ಹಣವಿಲ್ಲದೇ ಏನು ಆಗುವುದಿಲ್ಲ. ಹಣ ನೀಡದಿದ್ದಲ್ಲಿ ಭೂಮಾಪನಾ ಇಲಾಖೆಯಿಂದ ಕಂದಾಯ ಇಲಾಖೆಗೆ ಕಂದಾಯ ಇಲಾಖೆಯಿಂದ ಭೂಮಾಪನಾ ಇಲಾಖೆಗೆ ತಿರುಗಾಡುವಷ್ಟರಲ್ಲಿ ಸಾರ್ವಜನಿಕರು ಹೈರಾಣಾಗುತ್ತಾರೆ. ಒಂದು ಪೋಡು ಮಾಡಿಕೊಡಲು ಕನಿಷ್ಠವೆಂದರೂ 50 ಸಾವಿರ ರೂ. ಖರ್ಚು ಮಾಡಬೇಕಾಗಿದೆ. ಹಣ ಕೊಡದಿದ್ದಲ್ಲಿ ಸತಾಯಿಸಿ ಕೊನೆಗೆ ಬೇಕಾಬಿಟ್ಟಿ ಕೆಲಸ ಮಾಡಿ ರೈತರನ್ನು ಮತ್ತಷ್ಟು ಆತಂಕಕ್ಕೆ ತಳ್ಳಲಾಗುತ್ತದೆ. ಹೇಮಾವತಿ ಸಂತ್ರಸ್ತರ ಮುಳುಗಡೆ ಯೋಜನೆಯಲ್ಲಂತೂ ನೈಜ ಪ್ರಮಾಣ ಪತ್ರ ಹೊಂದಿರುವ ಹಲವು ಬಡವರು ಲಂಚ ಕೊಡಲಾರದೇ ಜಮೀನನ್ನು ಪಡೆಯಲು ಮುಂದಾಗಿಲ್ಲ.

ಹಣ ನೀಡದಿದ್ದರೆ ಇ- ಖಾತೆ ಆಗೋಲ್ಲ: ಪುರ ಸಭೆಯಲ್ಲಂತೂ ಭ್ರಷ್ಟಾಚಾರ ಮಿತಿ ಮೀರಿದ್ದು, ತಮ್ಮ ಆಸ್ತಿಗಳಿಗೆ ಇ-ಖಾತಾ ಮಾಡಿಸಿಕೊಳ್ಳಲು 3ರಿಂದ 10 ಸಾವಿರ ರೂ. ಲಂಚ ನೀಡಬೇಕಾಗಿದೆ. ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಂತೂ ಲಂಚವಿಲ್ಲದೇ ಯಾವುದೇ ಆಸ್ತಿಗಳು ನೋಂದಣಿಯಾಗುವುದಿಲ್ಲ. ತಾಲೂಕು ಪಂಚಾಯಿತಿ, ಸೆಸ್ಕ್ ಲೋಕೋಪಯೋಗಿ ಇಲಾಖೆ, ಜಿಪಂ ಎಂಜಿನಿಯರಿಂಗ್‌ ಇಲಾಖೆ ಸೇರಿದಂತೆ ಎಲ್ಲೆಡೆ ಗುತ್ತಿಗೆದಾರರು ಕಮಿಷನ್‌ ಹಣ ನೀಡದೇ ಯಾವುದೆ ಕೆಲಸ ಮಾಡುವ ಹಾಗಿಲ್ಲ.

ಆರ್‌ಟಿಒ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ: ಎಆರ್‌ಟಿಒ ಕಚೇರಿಯಲ್ಲೂ ಮಧ್ಯವರ್ತಿಗಳದ್ದೇ ಹಾವಳಿಯಾಗಿದೆ. ಪಟ್ಟಣದ ಕ್ರಾಫ‌ರ್ಡ್‌ ಆಸ್ಪತ್ರೆಯಲ್ಲೂ ಲಂಚ ಕೆಲಸ ಮಾಡುತ್ತಿದೆ. ನರ್ಸ್‌ಗಳಿಗೆ ಲಂಚ ನೀಡಿದಲ್ಲಿ ಉತ್ತಮ ಸೇವೆ ದೊರಕುತ್ತದೆ ಇಲ್ಲದಿದ್ದಲ್ಲಿ ರೋಗಿಗಳನ್ನು ಕಡೆಗಣಿಸಲಾಗುತ್ತದೆ. ಸಿಡಿಪಿಒ, ಕೃಷಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯಲ್ಲೂ ಇತ್ತೀಚೆಗೆ ಲಂಚದ ಹಾವಳಿ

ಪ್ರಾರಂಭವಾಗಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲೂ ಸಹ ಲಂಚದ ಪಿಡುಗು ಇದೆ. ಪಟ್ಟಣ ವ್ಯಾಪ್ತಿಯಲ್ಲಿರುವ ಕಚೇರಿಗಳು ಮಾತ್ರವಲ್ಲದೇ ಗ್ರಾಮ ಪಂಚಾಯಿತಿ ಕಚೇರಿಗಳೂ ಭ್ರಷ್ಟಾಚಾರದ ಕೇಂದ್ರಗಳಾಗಿದೆ. ಲಂಚವಿಲ್ಲದೇ ಯಾವುದೇ ಕೆಲಸವಾಗವುದಿಲ್ಲ. ಬಡವರು ಹಣ ಕೊಟ್ಟರೂ ಕೆಲಸಗಳಾಗುತ್ತಿಲ್ಲ. ಬಹುತೇಕ ಎಲ್ಲಾ ಇಲಾಖೆಗಳಲ್ಲೂ ಲಂಚದ ಹಾವಳಿ ಮುಗಿಲು ಮುಟ್ಟಿದ್ದು, ಅಧಿಕಾರಿಗಳು ಜನ ಸಾಮಾನ್ಯರು ಮಧ್ಯವರ್ತಿಗಳನ್ನು ಆಶ್ರಯಿಸದೆ ನೇರವಾಗಿ ಕಚೇರಿಗೆ ಬಂದು ಕೆಲಸ ಮಾಡಿಸಿಕೊಂಡು ಹೋಗಲಿ ಎಂದು ಕಾಟಾಚಾರಕ್ಕೆ ಹೇಳುತ್ತಾರೆ.

ಆದರೆ ವಾಸ್ತವವಾಗಿ ಜನಸಾಮಾನ್ಯರಿಗೆ ಹಲವು ಕಚೇರಿ ಗಳಲ್ಲಿ ಸರಿಯಾದ ಮಾಹಿತಿ ದೊರಕುವುದಿಲ್ಲ. ಈ ಹಿನ್ನೆಲೆಯಲ್ಲಿ ಅನಿರ್ವಾಯವಾಗಿ ಜನಸಾಮಾನ್ಯರು, ಕೂಲಿ ಕಾರ್ಮಿಕರು ಕಚೇರಿ ಕೆಲಸಗಳಿಗೆ ಮಧ್ಯವರ್ತಿಗಳನ್ನು ಆಶ್ರಯಿಸಬೇಕಾಗಿದೆ. ಹಲವು ಇಲಾಖೆಗಳಲ್ಲಿ ಪ್ರಾಮಾಣಿಕ ಅಧಿಕಾರಿಗಳು ನೌಕರರು ಸೇವೆ ಸಲ್ಲಿಸುತ್ತಿದ್ದು ಆದರೆ ಲಂಚವನ್ನು ನಿಲ್ಲಿಸಲು ಅಸಹಾಯಕರಾಗಿದ್ದಾರೆ. ನಿಯಮ ಪಾಲಿಸದ ನೌಕರರು: ಬಹುತೇಕ ಸರ್ಕಾರಿ ಕಚೇರಿಗಳಿಗೆ ನಿಗದಿತ ವೇಳೆಯಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸಲು ಬರುವುದಿಲ್ಲ. ಸರ್ಕಾರದಿಂದ ನಿಯಮದಂತೆ ಬೆಳಗ್ಗೆ 9.55ರಿಂದ 10.30ರ ಒಳಗೆ ಕಚೇರಿಗೆ ಹಾಜರಾಗುವ ಸಿಬ್ಬಂದಿ ಬಯೋ ಮೆಟ್ರಿಕ್‌ ನೀಡಬೇಕು ಹಾಗೂ ಸಂಜೆ 5.30ಕ್ಕೆ ಕರ್ತವ್ಯ ಮುಗಿಸಿ ಹೊರ ಹೋಗುವಾಗ ಬಯೋ ಮೆಟ್ರಿಕ್‌ ನೀಡ ಬೇಕೆಂಬ ನಿಯಮವಿದ್ದರೂ ಇದು ಪಾಲನೆಯಾಗುತ್ತಿಲ್ಲ.

ಅಧಿಕಾರಿಗಳಿಗೆ ಕಾಯುವುದು ಅನಿವಾರ್ಯ: ಹಲವು ಕಚೇರಿಗಳಲ್ಲಿ 10.30ಕ್ಕೆ ಸರಿಯಾಗಿ ಆಗಮಿಸುವ ಹಲವು ಸಿಬ್ಬಂದಿ ಬಯೋ ಮೆಟ್ರಿಕ್‌ ನೀಡಿ ಪುನಃ ಉಪಹಾರ ಅಥವಾ ಕಾಫಿಗೆಂದು ಹೊರ ಹೋಗುತ್ತಾರೆ. ಕನಿಷ್ಠ ಅರ್ಧಗಂಟೆ ಕಾμ ಹಾಗೂ ಉಪಾಹಾರಕ್ಕೆಂದು ತೆರಳುವ ಈ ಸಿಬ್ಬಂದಿಯನ್ನು ಜನರು ಕಾಯುತ್ತಲೇ ಇರಬೇಕಾಗುತ್ತದೆ. ಹಾಗೂ ಹೀಗೂ ಕೆಲಸ ಆರಂಭಿಸಿದರೆ ಮತ್ತೆ ಊಟದ ಸಮಯವಾಗುತ್ತದೆ. ಊಟ ಮಾಡಿಕೊಂಡು ಕೆಲ ಸಮಯ ಕೆಲಸ ಮಾಡಿ ಮತ್ತೆ ಕಾಫಿಗೆಂದು ಹೊರ ಹೋಗುವ ಸಿಬ್ಬಂದಿ ಬರಿ ಕಾಲ ಹಗರಣದಲ್ಲೆ ಇರುತ್ತಾರೆ. ಕೆಲವು ಸಿಬ್ಬಂದಿ ಕಚೇರಿ ಕೆಲಸದ ಸಮಯದಲ್ಲೇ ಮೊಬೈಲ್‌ ನಲ್ಲಿ ಕಾಲ ಕಳೆಯುತ್ತಿರುತ್ತಾರೆ. ತಾಲೂಕನ್ನು ಲಂಚ ಮುಕ್ತವಾಗಿ ಮಾಡಲು ಶಾಸಕರು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಜನರ ಹಿತ ಕಾಪಾಡಬೇಕಾಗಿದೆ.

 

-ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.