ಪ್ರೊ ಕಬಡ್ಡಿ ಲೀಗ್‌ : ಪ್ಲೇ ಆಫ್ ಗೆ ಏರೀತೇ ಜೈಪುರ?

3 ಸ್ಥಾನಕ್ಕೆ 4 ತಂಡಗಳ ನಡುವೆ ಪೈಪೋಟಿ

Team Udayavani, Oct 1, 2019, 11:00 PM IST

pink

ಪಂಚಕುಲ: ಏಳನೇ ಆವೃತಿಯ ಪ್ರೊ ಕಬಡ್ಡಿ ಲೀಗ್‌ ಅಂತಿಮ ಹಂತ ತಲುಪಿದೆ. ಪ್ಲೇ ಆಫ್ ಪೈಪೋಟಿ ತೀವ್ರಗೊಂಡಿದೆ. 3 ಸ್ಥಾನಗಳಿಗಾಗಿ 4 ತಂಡಗಳು ರೇಸ್‌ನಲ್ಲಿವೆ.

ದಬಾಂಗ್‌ ಡೆಲ್ಲಿ , ಬೆಂಗಾಲ್‌ ವಾರಿಯರ್ ಮತ್ತು ಹರ್ಯಾಣ ಸ್ಟೀಲರ್ ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿವೆ. ಯು ಮುಂಬಾ (59), ಬೆಂಗಳೂರು ಬುಲ್ಸ್‌ (58), ಯುಪಿ ಯೋಧಾ (58) ಅನಂತರದ ಸ್ಥಾನದಲ್ಲಿವೆ. 7ನೇ ಸ್ಥಾನಿಯಾಗಿರುವ ಜೈಪುರ್‌ ಪಿಂಕ್‌ ಪ್ಯಾಂಥರ್ (52) ಮೇಲಿನ ಸ್ಥಾನವೇರಿ ಮುನ್ನಡೆದೀತೇ ಎಂಬುದಷ್ಟೇ ಸದ್ಯದ ಕುತೂಹಲ.

ಮುಂದಿನ 2 ಪಂದ್ಯಗಳಲ್ಲಿ ದೊಡ್ಡ ಅಂತರದ ಗೆಲುವು ದಾಖಲಿಸುವುದು ಜೈಪುರ ಪಾಲಿಗೆ ಅನಿವಾರ್ಯ. ಇದರಲ್ಲೊಂದು ಪಂದ್ಯವನ್ನು ಬೆಂಗಳೂರು ಬುಲ್ಸ್‌ ವಿರುದ್ಧ ಆಡಲಿದೆ. ಹೀಗಾಗಿ ಅದು ಮಾಡು-ಮಡಿ ಸ್ಥಿತಿಯಲ್ಲಿದೆ.

ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಮತ್ತು ಯು ಮುಂಬಾಕ್ಕೆ 3 ಪಂದ್ಯಗಳು ಬಾಕಿ ಇವೆ. ಇದರಲ್ಲಿ ಎರಡನ್ನು ಗೆದ್ದರೆ ಪ್ಲೇ ಆಫ್ ಟಿಕೆಟ್‌ ಪಕ್ಕಾ. ಹಾಗೆಯೇ ಯೋಧಾಕ್ಕೆ 4 ಪಂದ್ಯಗಳಿವೆ. ಎರಡನ್ನು ಗೆದ್ದರೆ ಪ್ಲೇ ಆಫ್ ಪ್ರವೇಶಿಸಬಹುದು. ಈ ಪಂದ್ಯಗಳು ಯುಪಿಯ ತವರಾದ ಗ್ರೇಟರ್‌ ನೋಯ್ಡಾದಲ್ಲಿ ನಡೆಯುವುದರಿಂದ ತಂಡಕ್ಕೆ ಲಾಭ ಹೆಚ್ಚು.

ಮಾಡು-ಮಡಿ ಸ್ಥಿತಿಯಲ್ಲಿ ಜೈಪುರ
ಜೈಪುರ ಪಿಂಕ್‌ ಪ್ಯಾಂಥರ್ನ ಆರಂಭದ ಗೆಲುವಿನ ಅಬ್ಬರ ಕಂಡಾಗ ಎಲ್ಲರಿಗಿಂತ ಮೊದಲೇ ಪ್ಲೇ ಆಫ್ ಪ್ರವೇಶಿಸಲಿದೆ ಎಂದೇ ಭಾವಿಸಲಾಗಿತ್ತು. ಆದರೆ ಅನಂತರ ಎದುರಾದ ಸರಣಿ ಸೋಲಿನಿಂದ ಪ್ಲೇ ಆಫ್ ಹಾದಿ ದುರ್ಗಮಗೊಂಡಿದೆ. ತವರಿನ ಪಂದ್ಯಗಳೂ ಜೈಪುರಕ್ಕೆ ಕಂಟಕವಾಗಿ ಪರಿಣಮಿಸಿದ್ದೊಂದು ವಿಪರ್ಯಾಸ.

ಮುಂದಿನ 2 ಪಂದ್ಯಗಳಲ್ಲಿ ಒಂದರಲ್ಲಿ ಎಡವಿದರೂ ಜೈಪುರ ಪ್ಲೇ ಆಫ್ ರೇಸ್‌ನಿಂದ ನಿರ್ಗಮಿಸುವುದು ಖಚಿತ. ಒಂದು ವೇಳೆ ಎರಡನ್ನು ಗೆದ್ದರೂ ಜೈಪುರದ ಮುಂದಿನ ಹಾದಿ ಪಕ್ಕಾ ಎಂದು ಹೇಳಲು ಸಾಧ್ಯವಿಲ್ಲಿ. ಕಾರಣ, ಅದು ಮುಂಬಾ, ಯೋಧಾ ಅಥವಾ ಬುಲ್ಸ್‌ ತಂಡಗಳ ಸೋಲನ್ನೂ ಹಾರೈಸಬೇಕು! ಹೀಗಾಗಿ ಜೈಪುರದ ಮುಂದೆ ಅನೇಕ ಲೆಕ್ಕಾಚಾರಗಳಿವೆ.

ಬುಲ್ಸ್‌ಗೆ ಪವನ್‌ ಬಲ
ನಾಯಕ ರೋಹಿತ್‌ ಕುಮಾರ್‌ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮನ್ನಡೆಸುತ್ತಿರುವ ಪವನ್‌ ಸೆಹ್ರಾವತ್‌ ಮೇಲೆ ಬುಲ್ಸ್‌ ಹೆಚ್ಚಿನ ನಂಬಿಕೆ ಇರಿಸಿದೆ. ಕಳೆದ ಪಂದ್ಯದಲ್ಲಿ ಅಂಕಪಟ್ಟಿಯ ಅಗ್ರಸ್ಥಾನಿ ಡೆಲ್ಲಿ ವಿರುದ್ಧ ಟೈ ಮತ್ತು ಬಲಿಷ್ಠ ಮುಂಬಾ ವಿರುದ್ಧ ಗೆಲುವು ಸಾಧಿಸಿದ ಆತ್ಮವಿಶ್ವಾಸದಲ್ಲಿರುವ ಬುಲ್ಸ್‌, ಬುಧವಾರ ಹರ್ಯಾಣಕ್ಕೆ ಸೋಲುಣಿಸಿದರೆ ಗಂಭೀರ ಸಮಸ್ಯೆಗೆ ಸಿಲುಕದು.
ಪವನ್‌ ಅವರ ಕ್ವಿಕ್‌ ರೈಡಿಂಗ್‌, ಮಹೇಂದರ್‌ಸಿಂಗ್‌ ಅವರ ಟ್ಯಾಕಲ್‌, ಸುಮಿತ್‌ ಸಿಂಗ್‌ ಅವರ ಆಲ್‌ರೌಂಡ್‌ ಶೋ ಬುಲ್ಸ್‌ ಪಾಲಿಗೆ ಮಹತ್ವದ್ದಾಗಿದೆ. ಅಕಸ್ಮಾತ್‌ ಇವರಲ್ಲೊಬ್ಬರು ವಿಫ‌ಲರಾದರೂ ಅದು ಚಾಂಪಿಯನ್ನರ ಪಾಲಿಗೆ ಹಿನ್ನಡೆಯಾದೀತು. ಹೀಗಾಗಿ ಅದು ಉಳಿದ ಪಂದ್ಯಗಳಲ್ಲಿ ಎಚ್ಚರಿಕೆಯ ನಡೆಗಳನ್ನು ಇಡಬೇಕಿದೆ.

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.