ಅಂಗನವಾಡಿ ಕಾರ್ಯಕರ್ತರಿಗೆ ಸಿಗಲಿದೆ ಸ್ಮಾರ್ಟ್‌ ಫೋನ್‌


Team Udayavani, Oct 2, 2019, 5:27 AM IST

smart-phone

ಉಡುಪಿ: ಅಂಗನವಾಡಿ ಕೇಂದ್ರಗಳ ದೈನಂದಿನ ಕಾರ್ಯ ಚಟುವಟಿಕೆಗಳನ್ನು ಗಣಕೀಕೃತ ಗೊಳಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಸರಕಾರ ಸ್ಮಾರ್ಟ್‌ಫೋನ್‌ ವಿತರಿಸಲು ನಿರ್ಧರಿಸಿದ್ದು, ಉಡುಪಿ ಜಿಲ್ಲೆಯ 1,119 ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಯೋಜನೆ ಲಭ್ಯವಾಗಲಿದೆ.
ಸ್ನೇಹ ಆ್ಯಪ್‌ ಕಾರ್ಯ ವೈಖರಿ?
ಕೇಂದ್ರ ಸರಕಾರವು ಪೋಷಣ್‌ ಅಭಿಯಾನ ಯೋಜನೆಯಡಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಆನ್‌ಲೆ„ನ್‌ ವ್ಯಾಪ್ತಿಗೆ ತರಲು ಯೋಜನೆ ಸಿದ್ಧಪಡಿಸಿದೆ. ಅದಕ್ಕಾಗಿ “ಸ್ನೇಹಾ’ ಆ್ಯಪ್‌ ರೂಪಿಸಿದೆ. ಅ ಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಸೇ°ಹಾ ಆ್ಯಪ್‌ ಬಳಕೆಗೆ ಪ್ರತ್ಯೇಕ ಬಳಕೆದಾರರ ಹೆಸರು ಮತ್ತು ಪಾಸ್‌ವರ್ಡ್‌ ನೀಡಲಾಗುತ್ತದೆ. ಮೇಲ್ವಿಚಾರಕರಿಗೆ ಟ್ಯಾಬ್‌ ವಿತರಿಸಲಾಗುತ್ತದೆ. ಅವರು ಟ್ಯಾಬ್‌ ಮೂಲಕವೇ ಮಕ್ಕಳ ಆಧಾರ್‌ ಸಂಖ್ಯೆ ಜೋಡಣೆ ಹಾಗೂ ಅಂಗನವಾಡಿಗಳನ್ನು ಜಿಪಿಎಸ್‌ ಜಾಲಕ್ಕೆ ಸಂಪರ್ಕಿಸುವ ಕಾರ್ಯ ನಿರ್ವಹಿಸಲಿದ್ದಾರೆ.
ಕಡತ ನಿರ್ವಹಣೆ
ಅಂಗನವಾಡಿ ಕಾರ್ಯಕರ್ತೆಯರು ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್‌), ಮಾತƒಪೂರ್ಣ, ಮಾತೃ ವಂದನ, ಮಾತೃಶ್ರೀ, ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಕೇಂದ್ರದ ಪ್ರತಿನಿತ್ಯದ ಆಗುಹೋಗುಗಳ ಕುರಿತ ಸುಮಾರು 40 ಬಗೆಯ ಕಡತಗಳನ್ನು ನಿರ್ವಹಣೆ ಮಾಡಬಹುದಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹಾಜರಾತಿಯೂ ಕೂಡ ಇದರಲ್ಲಿ ದಾಖಲಿಸಲು ಸಹಕಾರಿಯಾಗಿದೆ.
ಸ್ಮಾಟ್‌ ಫೋನ್‌ ಯಾಕೆ?
ಕಾರ್ಯಕರ್ತರ ಮತ್ತು ಅ ಧಿಕಾರಿಗಳ ಕಾರ್ಯ ಒತ್ತಡ ತಗ್ಗಿಸಲು ಹಾಗೂ ಅಂಗನವಾಡಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲು ಇಲಾಖೆಯು ಅಂಗನವಾಡಿಗಳನ್ನು ಆನ್‌ಲೆ„ನ್‌ ವ್ಯಾಪ್ತಿಗೆ ತರಲು ಮುಂದಾಗಿದೆ. ಕಾರ್ಯಕರ್ತೆಯರು ಸ್ಮಾರ್ಟ್‌ ಫೋನ್‌ ಮೂಲಕ ದಾಖಲಿಸುವ ಪ್ರತಿ ವಿವರವು ಇಲಾಖೆಯ ಕೇಂದ್ರ ಕಚೇರಿಯ ಸರ್ವರ್‌ನಲ್ಲಿ ಅಡಕವಾಗುತ್ತದೆ. ಈ ದತ್ತಾಂಶವನ್ನು ರಾಜ್ಯ, ಜಿಲ್ಲಾ ಮಟ್ಟದ ಅ ಧಿಕಾರಿಗಳು ಕುಳಿತಲ್ಲೇ ಪರಾಮರ್ಶಿಸಬಹುದು.
ಜಿಲ್ಲೆಗಳಿಗೆ ಸುತ್ತೋಲೆ ಬಂದಿಲ್ಲ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಪೋಷಣ್‌ ಅಭಿಯಾನದ ಒಂದು ಹಾಗೂ ಎರಡನೇ ಹಂತದಲ್ಲಿ ಸ್ಮಾರ್ಟ್‌ ಫೋನ್‌ ತಲುಪಿದೆ. ಅಭಿಯಾನದ ಮೂರನೇ ಹಂತದಲ್ಲಿ ಉಡುಪಿ ಸೇರಿದಂತೆ 11 ಜಿಲ್ಲೆಗಳಲ್ಲಿ ವಿತರಣೆಯಾಗಲಿದೆ. ಇದುವರೆಗೆ ಇಲಾಖೆಗೆ ಸುತ್ತೋಲೆ ಬಂದಿಲ್ಲ.
ಇಂಟರ್‌ ನೆಟ್‌ ವೆಚ್ಚ ಸರಕಾರ ಭರಿಸಲಿದೆ
ಉಡುಪಿ ಜಿಲ್ಲೆಯಲ್ಲಿ 1,119 ಅಂಗನವಾಡಿಗಳಿದ್ದು, ಎಲ್ಲ ಕಾರ್ಯಕರ್ತರಿಗೂ ಸ್ಮಾರ್ಟ್‌ ಫೋನ್‌ ವಿತರಿಸಲಾಗುತ್ತದೆ. ಉಡುಪಿ ತಾಲೂಕಿನಲ್ಲಿ 274, ಕುಂದಾಪುರ ತಾಲೂಕಿನಲ್ಲಿ 412, ಬ್ರಹ್ಮಾವರ ತಾಲೂಕಿನಲ್ಲಿ 275, ಕಾರ್ಕಳದಲ್ಲಿ 230 ಕಾರ್ಯಕರ್ತೆಯರಿದ್ದಾರೆ. ಈ ಯೋಜನೆಯಡಿ ಮೊಬೈಲ್‌ ಜತೆಗೆ ಸಿಮ್‌ ಕಾರ್ಡ್‌ ಸಹ ನೀಡಲಿದ್ದು, ಇಂಟರ್‌ನೆಟ್‌ ಸೇವಾ ವೆಚ್ಚವನ್ನು ಇಲಾಖೆಯೇ ಭರಿಸಲಿದೆ.

ಕೆಲಸದ ಒತ್ತದ ಕಡಿಮೆ
ಸರಕಾರ ಶೀಘ್ರದಲ್ಲಿ ಸ್ಮಾರ್ಟ್‌ ಫೋನ್‌ ವಿತರಿಸಿದರೆ ಅಂಗನವಾಡಿ ಕಾರ್ಯಕರ್ತರ ಕೆಲಸದ ಒತ್ತದ ಕಡಿಮೆಯಾಗಲಿದೆ. ನಿತ್ಯ ಹತ್ತಾರು ಕಡತಗಳನ್ನು ನೋಡಿಕೊಳ್ಳುವುದರಲ್ಲಿ ಸಮಯ ಕಳೆದುಹೋಗುತ್ತಿದೆ.
-ಜಯಲಕ್ಷ್ಮೀ , ಅಂಗನವಾಡಿ ಕಾರ್ಯಕರ್ತರ ಸಂಘದ ರಾಜ್ಯಾಧ್ಯಕ್ಷೆ

ಸುತ್ತೋಲೆ ಬಂದ
ತತ್‌ಕ್ಷಣ ವಿತ ರ ಣೆ
ಕೇಂದ್ರ ಸರಕಾರವು ಪೋಷಣ್‌ ಅಭಿಯಾನದ 3ನೇ ಹಂತದಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ ಸ್ಮಾರ್ಟ್‌ ಫೋನ್‌ ವಿತರಣೆಯಾಗಲಿದೆ. ಸುತ್ತೋಲೆ ಬಂದ ತತ್‌ಕ್ಷಣ ಸ್ಮಾರ್ಟ್‌ ಫೋನ್‌ ವಿತರಣೆ ಕಾರ್ಯ ಪ್ರಾರಂಭವಾಗಲಿದೆ.
-ಗ್ರೇಸಿ ಗೊನ್ಸಾಲ್ವಿಸ್‌, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ

ಜ ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.