ಭಾರತ-ದ.ಆಫ್ರಿಕಾ ಟೆಸ್ಟ್: ಮೊದಲ ದಿನದಾಟಕ್ಕೆ ಮಳೆ ಅಡ್ಡಿ ; ರೋಹಿತ್ ಶತಕ, ಮಾಯಾಂಕ್ ಮಿಂಚು


Team Udayavani, Oct 2, 2019, 3:56 PM IST

Rohit-Sharma-730

ವಿಶಾಖಪಟ್ಟಣ: ಪ್ರವಾಸಿ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳ ನಡುವೆ ಇಂದು ಆರಂಭಗೊಂಡ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಭಡ್ತಿಪಡೆದ ರೋಹಿತ್ ಶರ್ಮಾ ಅವರು ಭರ್ಜರಿ ಶತಕ ಬಾರಿಸಿದ್ದಾರೆ. ಮಳೆಯಿಂದಾಗಿ ಆಟ ಸ್ಥಗಿತಗೊಂಡಾಗ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೇ 202 ರನ್ನುಗಳನ್ನು ದಾಖಲಿಸಿ ಸುಸ್ಥಿತಿಯಲ್ಲಿದೆ.

ಪ್ರಥಮ ದಿನದಾಟಕ್ಕೆ ಮಳೆ ಅಡ್ಡಿಯಾಗಿದೆ. 59.1 ಓವರ್ ಗಳ ಆಟ ಮಾತ್ರವೇ ಈ ದಿನ ಸಾಧ್ಯವಾಗಿದ್ದು ಮಳೆಯೊಂದಾಗಿ ದಿನದ ಆಟವನ್ನು ಇಲ್ಲಿಗೇ ನಿಲ್ಲಿಸಲಾಗಿದೆ. ರೋಹಿತ್ ಮತ್ತು ಮಾಯಾಂಕ್ ಅವರು ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಬ್ಯಾಟಿಂಗ್ ಆಯ್ದುಕೊಂಡರು. ಭಾರತದ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಮಾಯಾಂಕ್ ಅಗರ್ವಾಲ್ ಅವರು ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಅದರಲ್ಲೂ ಆರಂಭಿಕನ ಸ್ಥಾನಕ್ಕೆ ಭಡ್ತಿ ಪಡೆದ ರೋಹಿತ್ ಶರ್ಮಾ ಅವರು ಉತ್ತಮ ಆಟವಾಡಿ ಭರ್ಜರಿ ಶತಕ ಬಾರಿಸಿದರು.

60ನೇ ಓವರ್ ನ ಆಟ ಪ್ರಗತಿಯಲ್ಲಿದ್ದಾಗ ಮಳೆ ಬಂದು ಪಂದ್ಯ ಸ್ಥಗಿತಗೊಂಡಿತು. ಬಳಿಕ ಮಳೆ ನಿಲ್ಲುವ ಸೂಚನೆ ಇಲ್ಲದೇ ಇದ್ದಾಗ ದಿನದಾಟವನ್ನು ಅಲ್ಲಿಗೇ ನಿಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಅವರು 115 ರನ್ನು ಮತ್ತು ಮಾಯಾಂಕ್ ಅಗರ್ವಾಲ್ ಅವರು 84 ರನ್ನುಗಳನ್ನು ಮಾಡಿ ಆಟ ಕಾಯ್ದುಕೊಂಡಿದ್ದಾರೆ. ಇವರಿಬ್ಬರ ನಡುವೆ ಈಗಾಗಲೇ 202 ರನ್ನುಗಳ ಜೊತೆಯಾಟ ಸಾಗಿದೆ.

ರೋಹಿತ್ ಶರ್ಮಾ ಅವರು ಸುದೀರ್ಘ ಸಮಯದ ಬಳಿಕ ತಮ್ಮ ಟೆಸ್ಟ್ ವೃತ್ತಿಜೀವನದ ನಾಲ್ಕನೇ ಶತಕವನ್ನು ದಾಖಲಿಸಿದರು. ಈ ಹಿಂದೆ 2016ರ ನವಂಬರ್ ತಿಂಗಳಿನಲ್ಲಿ ರೋಹಿತ್ ಅವರು ಶ್ರೀಲಂಕಾ ವಿರುದ್ಧ ನಾಗ್ಪುರದಲ್ಲಿ ಕೊನೆಯ ಶತಕವನ್ನು ಬಾರಿಸಿದ್ದರು.

ಏಕದಿನ ಮತ್ತು ಟಿ20 ಮಾದರಿಯಲ್ಲಿ ರೋಹಿತ್ ಅವರು ಭರ್ಜರಿ ದಾಖಲೆಗಳನ್ನು ಹೊಂದಿದ್ದರೂ ಆರು ವರ್ಷಗಳ ಹಿಂದೆಯೇ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದ್ದರೂ ಈ ಮಾದರಿಯ ಕ್ರಿಕೆಟ್ ನಲ್ಲಿ ಸ್ಥಿರ ಪ್ರದರ್ಶನ ನೀಡಲು ರೋಹಿತ್ ಅವರಿಗೆ ಸಾಧ್ಯವಾಗಿರಲಿಲ್ಲ. ತನ್ನ ಮೊದಲ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಭರ್ಜರಿ ಶತಕ ದಾಖಲಿಸಿರುವ ಹೆಗ್ಗಳಿಕೆಯೂ ರೋಹಿತ್ ಅವರದ್ದಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.