ಕ್ರಿಕೆಟ್‌ ಸಲಹಾ ಸಮಿತಿಗೆ ಕಪಿಲ್‌ ದೇವ್‌ ರಾಜೀನಾಮೆ


Team Udayavani, Oct 2, 2019, 9:00 PM IST

x-8

ಹೊಸದಿಲ್ಲಿ: ತ್ರಿಸದಸ್ಯ ತಾತ್ಕಾಲಿಕ ಕ್ರಿಕೆಟ್‌ ಸಲಹಾ ಸಮಿತಿಯ (ಸಿಎಸಿ) ಮುಖ್ಯಸ್ಥನ ಹುದ್ದೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್‌ ದೇವ್‌ ರಾಜೀನಾಮೆ ನೀಡಿದ್ದಾರೆ. ಕಪಿಲ್‌ ರಾಜೀನಾಮೆಗೆ ನಿರ್ದಿಷ್ಟ ಕಾರಣವೇನು ಎನ್ನುವುದು ಇನ್ನೂ ಬಹಿರಂಗವಾಗಿಲ್ಲ. ಆದರೆ ಕ್ರಿಕೆಟನ್ನು ಕಾಡುತ್ತಿರುವ ಸ್ವಹಿತಾಕ್ತಿಯ ಸಂಘರ್ಷದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಭಾರತೀಯ ತಂಡಕ್ಕೆ ಮುಖ್ಯ ಕೋಚ್‌ ಆಯ್ಕೆ ಮಾಡುವ ಸಲುವಾಗಿ ಕಪಿಲ್‌ ದೇವ್‌ ನೇತೃತ್ವದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕ್ರಿಕೆಟ್‌ ಸಲಹಾ ಸಮಿತಿಯನ್ನು ರಚಿಸಲಾಗಿತ್ತು. ಅಂಶುಮಾನ್‌ ಗಾಯಕ್‌ವಾಡ್‌ ಮತ್ತು ಶಾಂತಾ ರಂಗಸ್ವಾಮಿ ಸಮಿತಿಯಲ್ಲಿರುವ ಇನ್ನಿಬ್ಬರು.

ಎಂಪಿಸಿಎ ಆಜೀವ ಸದಸ್ಯ ಸಂಜೀವ ಗುಪ್ತ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಸಿಸಿಐಯ ನೈತಿಕತೆ ವಿಭಾಗದ ಅಧಿಕಾರಿ ಡಿ.ಕೆ.ಜೈನ್‌ ಇತ್ತೀಚೆಗೆ ಕ್ರಿಕೆಟ್‌ ಸಲಹಾ ಸಮಿತಿಗೂ ನೋಟಿಸ್‌ ಜಾರಿಗೊಳಿಸಿದ್ದರು. ಶಾಂತಾ ರಂಗಸ್ವಾಮಿ ನೋಟಿಸ್‌ ಸಿಕ್ಕಿದ ಮರುದಿನವೇ ರಾಜೀನಾಮೆ ನೀಡಿದ್ದರು.

ಜನರು ಆರೋಪಗಳನ್ನು ಮಾಡುವುದರಿಂದ ಸಮಸ್ಯೆಯಿಲ್ಲ. ಆದರೆ ನೈತಿಕತೆ ಅಧಿಕಾರಿ ಪ್ರತಿಯೊಂದು ಆರೋಪವನ್ನು ಹೆಕ್ಕಿ ನೋಟಿಸ್‌ ಜಾರಿಗೊಳಿಸಿದರೆ ಅದು ನೀಡುವ ಚಿತ್ರಣ ಭಿನ್ನವಾಗಿರುತ್ತದೆ ಮತ್ತು ಮಾಜಿ ಕ್ರಿಕೆಟಿಗರು ಕ್ರಿಕೆಟ್‌ನ ಆಡಳಿತ ವ್ಯವಸ್ಥೆಯೊಳಗೆ ಬರಲು ಕಷ್ಟವಾಗುತ್ತದೆ ಎಂದು ಕಪಿಲ್‌ ತಮ್ಮ ಅಸಮಾಧಾನವನ್ನು ಹೇಳಿಕೊಂಡಿದ್ದಾರೆ.

ರಾಜೀನಾಮೆ ಅಗತ್ಯವಿರಲಿಲ್ಲ : ರಾಯ್‌
ಇದೇ ವೇಳೆ ಆಡಳಿತ ಸಮಿತಿಯ ಮುಖ್ಯಸ್ಥ ವಿನೋದ್‌ ರಾಯ್‌ ಅವರು ಕಪಿಲ್‌ ರಾಜೀನಾಮೆ ನೀಡುವ ಅಗತ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಪಿಲ್‌ ದೇವ್‌ ಅವರನ್ನು ಮುಖ್ಯ ಕೋಚ್‌ ಆಯ್ಕೆಯ ಕೆಲಸಕ್ಕಷ್ಟೇ ನೇಮಿಸಲಾಗಿತ್ತು.

ಆಯ್ಕೆ ಸಮಿತಿಯ ಮೂವರು ಸದಸ್ಯರಿಗೆ ನೀಡಿದ ಪತ್ರಗಳಲ್ಲೂ ಇದು ಕೋಚ್‌ ಆಯ್ಕೆಗಷ್ಟೇ ರಚನೆಯಾಗಿರುವ ಸಮಿತಿ ಎಂದು ಸ್ಪಷ್ಟಪಡಿಸಲಾಗಿತ್ತು. ಕೋಚ್‌ ಆಯ್ಕೆ ಪ್ರಕ್ರಿಯೆ ಮುಗಿದಿರುವುದರಿಂದ ರಾಜೀನಾಮೆ ನೀಡುವ ಅಗತ್ಯವಿರಲಿಲ್ಲ ಎಂದು ರಾಯ್‌ ಹೇಳಿದ್ದಾರೆ.

ಸ್ವಹಿತಾಸಕ್ತಿ ಸಂಘರ್ಷದ ಆರೋಪ ಮುಗಿದ ಅದ್ಯಾಯವೇ ಎಂಬ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸದ ರಾಯ್‌ ನಾನು ಈ ಮೊದಲು ಹೇಳಿರುವಂತೆ ನೈತಿಕತೆ ಅಧಿಕಾರಿಯ ನಿರ್ಧಾರದ ಮೇಲೆ ತೀರ್ಪು ನೀಡುವುದಿಲ್ಲ ಎಂದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.