ಕೆಎಸ್‌ಆರ್‌ಟಿಸಿ: ದಸರಾ ದರ್ಶನಕ್ಕೆ ವಿಶೇಷ ಬಸ್‌


Team Udayavani, Oct 4, 2019, 5:40 AM IST

ksrtc

ಮೈಸೂರು: ಅರಣ್ಯ ವ್ಯಾಪ್ತಿಯ ಹಾಡಿಗಳಲ್ಲಿ ವಾಸಿಸುವ ಗಿರಿಜನರ ಸಹಿತ ಗ್ರಾಮೀಣ ಭಾಗದ ಬಡಜನರಿಗೆ ಈ ಬಾರಿ ಕೆಎಸ್‌ಆರ್‌ಟಿಸಿಯಿಂದ ಉಚಿತವಾಗಿ ದಸರಾ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗುರುವಾರದಿಂದ ಮೂರು ದಿನಗಳ ಕಾಲ ಆಯೋಜಿಸಿರುವ ದಸರಾ ದರ್ಶನ ಬಸ್‌ಗಳಿಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಹಸುರು ನಿಶಾನೆ ತೋರಿದರು. ಹಳೇ ಮೈಸೂರು ವ್ಯಾಪ್ತಿಯ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು ಸಹಿತ ಐದು ಜಿಲ್ಲೆಗಳ 31 ತಾಲೂಕುಗಳ ಆದಿವಾಸಿಗಳು ಮತ್ತು ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಈ ದಸರಾ ದರ್ಶನ ಸೌಲಭ್ಯ ಒದಗಿಸಲಾಗಿದೆ. ಕಳೆದ ಬಾರಿ ಇದ್ದ ರಿಯಾಯಿತಿ ಪಾಸ್‌ ರದ್ದುಪಡಿಸಿ, ಸಂಪೂರ್ಣ ಉಚಿತವಾಗಿ ದಸರಾ ದರ್ಶನ ವ್ಯವಸ್ಥೆ ಮಾಡಲಾಗಿದೆ.

ದೇಶೀ ಆಟ, ಮನೋರಂಜನೆಯ ಸವಿಯೂಟ
ದಸರಾ ಅಂಗವಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪಾರಂಪರಿಕ ಆಟಗಳ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಪಗಡೆ ಆಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಮಕ್ಕಳಿಗೆ ಏರ್ಪಡಿಸಿದ್ದ ಕಣ್ಣಾ ಮುಚ್ಚಾಲೆ, ಕುಂಟಾಬಿಲ್ಲೆ, ಹಾವು-ಏಣಿ, ಗೋಲಿ, ಚೌಕಾಬಾರ, ಮೂರು ಕಾಲಿನ ಓಟ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಯುವಕ, ಯುವತಿಯರಿಗಾಗಿ ಏರ್ಪಡಿಸಿದ್ದ ಅಳಿಗುಳಿ ಮನೆ, ಹಗ್ಗ-ಜಗ್ಗಾಟ, ಹಾವು ಏಣಿ, ಗೋಲಿ, ಬಿಲ್ಲು ಬಾಣ, ಚಿನ್ನಿದಾಂಡು, ಬುಗುರಿ, ಗೋಣಿಚೀಲದ ಓಟ, ಮೂರು ಕಾಲಿನ ಓಟ ಮತ್ತು ಹುಲಿ-ಕುರಿ ಸ್ಪರ್ಧೆಯಲ್ಲಿ ನಾನಾ ಕಾಲೇಜುಗಳ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ದಿನವಿಡೀ ಮೊಬೈಲ್‌ನಿಂದ ದೂರ ಉಳಿದರು. 25 ವರ್ಷ ಮೇಲ್ಪಟ್ಟವರಿಗೆ ಏರ್ಪಡಿಸಿದ್ದ ಪಗಡೆ, ಹಗ್ಗ-ಜಗ್ಗಾಟ, ಅಳಿಗುಳಿ ಮನೆ, ಬಿಲ್ಲುಬಾಣ, ಚೌಕಾಬಾರ ಸ್ಪರ್ಧೆಯಲ್ಲಿ ವಯಸ್ಸಿನ ಭೇದ ಮರೆತು ಅಜ್ಜಿಯರು ಭಾಗವಹಿಸಿ ಎಲ್ಲರ ಗಮನ ಸೆಳೆದರು.

ಛಾಯಾಚಿತ್ರ ಸ್ಪರ್ಧೆ
ಪ್ರವಾಸೋದ್ಯಮ ಇಲಾಖೆ ವತಿಯಿಂದ ದಸರಾ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಿಗೆ ಪ್ರವಾಸೋದ್ಯಮ ಇಲಾಖೆಯಿಂದ ಒಂದು ಲಕ್ಷ ರೂ.ಬಹುಮಾನ ನೀಡಲಾಗುವುದು. ಸ್ಪರ್ಧೆಗೆ ಒಬ್ಬರು ಗರಿಷ್ಠ ಮೂರು ಛಾಯಾಚಿತ್ರಗಳನ್ನು ಸಲ್ಲಿಸಬಹುದಾಗಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.