ಕೊಂಕಣ ರೈಲ್ವೇ: ಸ್ವಚ್ಛ ರೈಲ್ವೇ ಸ್ವಚ್ಛ ಭಾರತ ಅಭಿಯಾನ
11 ಸಾವಿರ ಕೆಜಿ ಕಸ ವಿಲೇವಾರಿ
Team Udayavani, Oct 4, 2019, 4:12 AM IST
ಉಡುಪಿ: ಸ್ವಚ್ಛ ಭಾರತ ಅಭಿಯಾನದಡಿ ಕಾರವಾರ ವಲಯದ ಕೊಂಕಣ ರೈಲು ನಿಲ್ದಾಣಗಳಲ್ಲಿ ಒಟ್ಟು 11,600 ಕೆಜಿ ಕಸವನ್ನು ಸಂಗ್ರಹಿಸಿದ್ದು, ಅದನ್ನು ಒಣ ಮತ್ತು ಹಸಿ ಕಸವಾಗಿ ಪ್ರತ್ಯೇಕಿಸಿ ವಿಲೇವಾರಿ ಮಾಡಲಾಗಿದೆ ಎಂದು ಕಾರವಾರ ಪ್ರಾದೇಶಿಕ ರೈಲ್ವೇ ಪ್ರಬಂಧಕ ಬಿ.ಬಿ. ನಿಕ್ಕಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕೇಂದ್ರ ರೈಲ್ವೇ ಮಂತ್ರಾಲಯದ ನಿರ್ದೇಶನದಂತೆ ಸೆ. 16ರಿಂದ ಅ. 2ರ ವರೆಗೆ ಸ್ವತ್ಛ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈಲು ನಿಲ್ದಾಣ, ಪರಿಸರ, ಬೋಗಿಗಳ ಸ್ವತ್ಛತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಪ್ರತಿದಿನ ಒಂದು ವಿಭಾಗಕ್ಕೆ ಆದ್ಯತೆ ನೀಡಿ ಅಭಿಯಾನ ನಡೆಸಲಾಗುತ್ತಿದೆ ಎಂದರು.
ಬೋಗಿಗಳಲ್ಲಿ ಸಾಕಷ್ಟು ಕಸದ ಬುಟ್ಟಿಗಳ ವ್ಯವಸ್ಥೆ ಮಾಡಲಾಗಿದೆ. ಸ್ವತ್ಛತೆ ಕಾಪಾಡಲು ಪ್ರಯಾಣಿಕರು ಇಲಾಖೆ ಯೊಂದಿಗೆ ಇನ್ನಷ್ಟು ಸಹಕಾರ ನೀಡಬೇಕು. ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ಯಂತ್ರ ವನ್ನು ಕಾರವಾರ ನಿಲ್ದಾಣದಲ್ಲಿ ಅಳವಡಿಸಲಾಗಿದ್ದು, ಉಡುಪಿ ನಿಲ್ದಾಣದಲ್ಲೂ ಶೀಘ್ರ ಅಳವಡಿಸಲಾ ಗುತ್ತದೆ ಎಂದು ಮಾಹಿತಿ ನೀಡಿದರು.
ಕಾರವಾರ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮ ಆಯೋಜಿಸಿದ್ದು, ಅದರ ಅಂಗವಾಗಿ ಇಲಾಖೆ ವತಿಯಿಂದ ವಸ್ತ್ರದ ಚೀಲ ವಿತರಿಸಲಾಗಿತ್ತು. ರೈಲು ನಿಲ್ದಾಣದ ಅಂಗಡಿಗಳಲ್ಲಿ ಪ್ಲಾಸ್ಟಿಕ್ಗೆ ಪರ್ಯಾಯ ವಸ್ತು ಬಳಕೆ ಮಾಡುವಂತೆ ಆದೇಶಿಸಲಾಗಿದೆ ಎಂದರು.
ಬಯೋ ಶೌಚಾಲಯ
ಬಯೋ ಶೌಚಾಲಯ ಉಪಯೋಗಿಸುವವರು ಶುಚಿತ್ವದ ಬಗ್ಗೆ ಗಮನ ಹರಿಸಬೇಕು. ಶೌಚಾಲಯ ಬ್ಲಾಕ್ ಆದರೆ ಸರಿಪಡಿಸಿದ ಬಳಿಕವಷ್ಟೇ ಉಪಯೋಗಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಕೊಂಕಣ ರೈಲ್ವೇ ಸಾರ್ವಜನಿಕ ಸಂಪರ್ಕ ಪ್ರಬಂಧಕಿ ಸುಧಾ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
141 ಕಿ.ಮೀ. ದ್ವಿಪಥಕ್ಕೆ 4,980 ಕೋ.ರೂ.
ಕೊಂಕಣ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಡಿಸೆಂಬರ್ 2020ರ ಒಳಗೆ ಪೂರ್ಣ ಗೊಳ್ಳಲಿದೆ. ಈ ಸಂದರ್ಭ 4,980 ಕೋ.ರೂ ವೆಚ್ಚದಲ್ಲಿ 141 ಕಿ.ಮೀ. ಹಳಿಯನ್ನು ದ್ವಿಪಥಗೊಳಿಸಲಾಗುತ್ತದೆ ಎಂದು ನಿಕ್ಕಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು