ರಾಜ್ಯದ ಪ್ರವಾಹ ನಿರಾಶ್ರಿತರ ಮೊದಲ ಮನೆ ನಿರ್ಮಾಣಕ್ಕೆ ಸಿಎಂ ಅಡಿಗಲ್ಲು
Team Udayavani, Oct 4, 2019, 12:58 PM IST
ಬೆಳಗಾವಿ: ಪ್ರವಾಹ ಸಂತ್ರಸ್ತರಿಗೆ ಕೊನೆಗೂ ಧಾವಿಸಿರುವ ರಾಜ್ಯ ಸರ್ಕಾರ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂ. ಜಮಾ ಮಾಡುತ್ತಿದ್ದಂತೆ, ಮುಖ್ಯಮಂತ್ರಿಗಳು ರಾಜ್ಯದ ಮೊದಲ ನಿರಾಶ್ರಿತರ ಮನೆ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಅನೇಕ ಮನೆಗಳು ಧರೆಗುರುಳಿದ್ದು, ಸಂಪೂರ್ಣ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರ ಐದು ಲಕ್ಷ ರೂ. ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮೊದಲ ಕಂತು ಒಂದು ಲಕ್ಷ ರೂ. ಬಂದಿದ್ದು, ನಗರದ ಮಹಾದ್ವಾರ ರಸ್ತೆಯಲ್ಲಿ ಇರುವ ವಿನೋದ ಭಾಗವತ್ ಎಂಬವರ ಮನೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಿದರು.
ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕ್ಷೇತ್ರದಲ್ಲಿ ಈ ಮನೆ ನಿರ್ಮಾಣ ಆಗುತ್ತಿದೆ. ಈಗ ಮುಖ್ಯಮಂತ್ರಿಗಳು ಶುಕ್ರವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.
ಗುದ್ದಲಿ ಪೂಜೆ ಮಾಡಿದ ಸಿಎಂ ಯಡಿಯೂರಪ್ಪ ಅವರು ನೆರೆ ಸಂತ್ರಸ್ತರಿಗೆ ಒಂದು ಲಕ್ಷ ಹಣ ನೀಡಿ ಮನೆ ಕಟ್ಟಿಕೊಳ್ಳಲು ಅನುವು ಮಾಡಿ ಕೊಟ್ಟಿದ್ದಾರೆ. ನಿನ್ನೆಯಷ್ಟೇ ನಿರಾಶ್ರಿತರ ಅಕೌಂಟ್ ಗೆ ಒಂದು ಲಕ್ಷ ಪರಿಹಾರ ಅಕೌಂಟ್ ಗೆ ಜಿಲ್ಲಾಡಳಿತ ಹಾಕಿತ್ತು. ಈ ಹಿನ್ನಲೆಯಲ್ಲಿ ಇಂದು ನಿರಾಶ್ರಿತರ ಮನೆಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ