ಇದ್ದೂ ಇಲ್ಲದಂತಿರುವ ಶುದ್ಧೀಕರಣ ಘಟಕಗಳು


Team Udayavani, Oct 4, 2019, 2:15 PM IST

bk-tdy-1

ಗುಳೇದಗುಡ್ಡ: ಎಲ್ಲೆಂದರಲ್ಲಿ ತುಕ್ಕು ಹಿಡಿದ ಯಂತ್ರ.. ಅದರಿಂದಲೇ ಫಿಲ್ಟರ್‌ ಆಗಿ ಬರುವ ಜಂಗು ವಾಸನೆ ಹೊಂದಿರುವ ನೀರು… ಇದು ಸಮೀಪದ ಕೋಟೆಕಲ್‌ ಗ್ರಾಪಂ ವ್ಯಾಪ್ತಿಗೆ ಬರುವ ತೋಗುಣಶಿ ಗ್ರಾಮದಲ್ಲಿರುವ ಶುದ್ಧ ನೀರಿನ ಘಟಕದ ಕಥೆ-ವ್ಯಥೆ.

ಇದೇ ಘಟಕದಿಂದ ಜನರಿಗೆ ನಿತ್ಯ ನೀರು ಸಿಗುತ್ತದೆಯೇನೋ ನಿಜ ಆದರೆ ಆ ನೀರು ಬಳಕೆ ಮಾಡಲು ಜನರು ಭಯಪಡುವಂತಾಗಿದೆ. ಅಷ್ಟರಮಟ್ಟಿಗೆ ಯಂತ್ರಗಳು ತುಕ್ಕು ಹಿಡಿದಿವೆ. ಆದರೂ ಇದುವರೆಗೂ ಅಧಿ ಕಾರಿಗಳು ಕಣ್ಣೆತ್ತಿ ನೋಡದಿರುವುದು ವಿಪರ್ಯಾಸ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ವತಿಯಿಂದ 2017-18ನೇ ಸಾಲಿನ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ ಯೋಜನೆಯಲ್ಲಿ ಸುಮಾರು 11ಲಕ್ಷ ರೂ. ವೆಚ್ಚದಲ್ಲಿ ಈ ಘಟಕ ಆರಂಭಿಸಲಾಗಿದೆ. ಘಟಕ ನಿರ್ಮಿಸಿ ಇನ್ನೂ 2 ವರ್ಷ ಕಳೆದಿಲ್ಲ. ಅಷ್ಟರಲ್ಲೇ ಯಂತ್ರಗಳು ತುಕ್ಕು ಹಿಡಿಯುತ್ತಿದ್ದು, ಅದರ ಮೂಲಕವೇ ಫಿಲ್ಟರ್‌ ಆದ ನೀರನ್ನು ಜನ ನಿತ್ಯ ಕುಡಿಯುವ ಪರಿಸ್ಥಿತಿ ಇದೆ ಎನ್ನುತ್ತಾರೆ ಗ್ರಾಮಸ್ಥರು.

ಜಂಗು ವಾಸನೆ: ಶುದ್ಧ ಕುಡಿಯುವ ನೀರಿನ ಘಟಕದ ಯಂತ್ರಗಳು ತುಕ್ಕು ಹಿಡಿಯುತ್ತಿರುವುದರಿಂದ ಫಿಲ್ಟರ್‌ ಆಗಿ ಬರುವ ನೀರು ಜಂಗು ವಾಸನೆ ಬೀರುತ್ತಿದ್ದು, ಬೇರೆ ದಾರಿಯಿಲ್ಲದೇ ಅದೇ ನೀರನ್ನು ಬಳಸುವಂತಾಗಿದೆ. ಈ ನೀರು ಸೇವಿಸಿ ಆರೋಗ್ಯ ಹದಗೆಟ್ಟರೆ ಯಾರು ಹೊಣೆ ಎಂಬುದು ಗ್ರಾಮಸ್ಥರ ಪ್ರಶ್ನೆ. ಇಲಾಖೆ 5 ವರ್ಷಗಳ ಕಾಲ ಗದಗ ಮೂಲದ ಗುತ್ತಿಗೆದಾರರಿಗೆ ಘಟಕ ನಿರ್ವಹಣೆಯನ್ನು ನೀಡಿದೆ. ಆದರೆ ಆ ಗುತ್ತಿಗೆದಾರರು ಇದುವರೆಗೂ ಬಂದು ಘಟಕದ ಪರಿಸ್ಥಿತಿಯನ್ನು ಗಮನಿಸಿಲ್ಲ. ಶುದ್ಧೀಕರಣ ಘಟಕಕ್ಕೆ ಕ್ಯಾಂಡಲ್‌ ಅಳವಡಿಸಿಲ್ಲ. ಈ ರೀತಿ ನಿರ್ಲಕ್ಷ ವಹಿಸುತ್ತಿರುವುದರಿಂದ ಯಂತ್ರಗಳು ತುಕ್ಕು ಹಿಡಿದು ಹಾಳಾಗುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ತೋಗುಣಶಿ ಗ್ರಾಮದ ಶುದ್ಧೀಕರಣ ಘಟಕದ ಯಂತ್ರಗಳು ತುಕ್ಕು ಹಿಡಿಯುತ್ತಿರುವ ಬಗ್ಗೆ ಪಂಚಾಯಿತಿ ಅ ಧಿಕಾರಿಗಳಿಗೆ ಮಾಹಿತಿ ನೀಡಿದರೂ ಅವರೂ ಗಮನ ಹರಿಸುತ್ತಿಲ್ಲ. ಕೂಡಲೇ ಅ ಧಿಕಾರಿಗಳು ಯಂತ್ರಗಳನ್ನು ದುರಸ್ತಿಗೊಳಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕೆಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ಗ್ರಾಮದ ಶುದ್ಧೀಕರಣ ಘಟಕ ತುಕ್ಕು ಹಿಡಿದಿರುವ ಬಗ್ಗೆ ಮಾಹಿತಿಯಿದ್ದು, ಗದುಗಿನ ಪೂಜಾರಿ ಎಂಬುವರಿಗೆ ತೋಗುಣಶಿ ಗ್ರಾಮದ ಶುದ್ಧೀಕರಣ ಘಟಕ ನಿರ್ವಹಣೆಗೆ ಕೊಡಲಾಗಿದೆ. ಈಗಾಗಲೇ ಗುತ್ತಿಗೆದಾರರಿಗೆ ದುರಸ್ತಿ ಮಾಡುವಂತೆ ಸೂಚಿಸಿದ್ದು, 2-3ದಿನಗಳಲ್ಲೇ ಘಟಕ ದುರಸ್ತಿಗೊಳಿಸಲಾಗುವುದು.-ಎನ್‌.ಎಸ್‌. ಪತಂಗೆ, ಕಿರಿಯ ಅಭಿಯಂತರ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗ

 

-ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.