ಕಾನೂನು ಪಾಲಿಸದಿದ್ದರೆ ಕಠಿಣ ಕ್ರಮ: ವೇದಮೂರ್ತಿ
ಬೈಕ್ ಸವಾರರಿಗೆ ದಂಡ-ಹೆಲ್ಮೆಟ್ ವಿತರಣೆ
Team Udayavani, Oct 4, 2019, 4:53 PM IST
ಸಿಂಧನೂರು: ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಅಪಘಾತ ತಡೆಗೆ ಪ್ರತಿಯೊಬ್ಬರೂ ಹೊಸ ಮೋಟಾರ್ ವಾಹನ ಕಾಯ್ದೆಯ ನಿಯಮಗಳನ್ನು ಪಾಲಿಸಬೇಕು. ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ. ವೇದಮೂರ್ತಿ ಹೇಳಿದರು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಗುರುವಾರ ಹೆಲ್ಮೆಟ್ ಇಲ್ಲದೇ ಬೈಕ್ ಚಲಾಯಿಸುತ್ತಿದ್ದ ಸವಾರರಿಗೆ ದಂಡ ವಿಧಿಸಿ, ಹೆಲ್ಮೆಟ್ ವಿತರಿಸಿ ಅವರು ಮಾತನಾಡಿದರು. ಸಣ್ಣ ಅಪಘಾತಗಳಿಂದ ಪ್ರಾಣ ಉಳಿಸಿಕೊಳ್ಳಲು ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ಬಗ್ಗೆ ಇತರರಿಗೂ ಅರಿವು ಮೂಡಿಸಬೇಕು.
ಜಿಲ್ಲಾದ್ಯಂತ ನಮ್ಮ ಇಲಾಖೆಯಿಂದ ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜತೆಗೆ ಸಂಚಾರ ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಾಹನ ಸವಾರರು, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಅಪಘಾತ ತಡೆಗೆ ಸಹಕರಿಸಬೇಕು ಎಂದರು.
ಐಎಸ್ಐ ಮಾರ್ಕ್ ಹೊಂದಿರುವ ಹೆಲ್ಮೆಟ್ ವಿತರಿಸುತ್ತಿದ್ದೇವೆ. ಅಲ್ಲಲ್ಲಿ ಸ್ವಲ್ಪ ದೋಷ ಕಂಡುಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ನಮ್ಮ ಇಲಾಖೆಯಿಂದ ಆಗುತ್ತದೆ ಎಂದರು ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ, ಸಿಪಿಐ ಬಾಲಚಂದ್ರ ಲಕ್ಕಂ, ಪಿಎಸ್ಐ ವಿಜಯ ಕೃಷ್ಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ