ಸಂಸ್ಥೆಯಿಂದ 12ನೇ ದಹಿಸರ್‌ ದಸರಾ ಮಹೋತ್ಸವ


Team Udayavani, Oct 4, 2019, 6:55 PM IST

mumbai-tdy-1

ಮುಂಬಯಿ, ಅ. 3: ಗೌಡ ಸಾರಸ್ವತ್‌ ಬ್ರಾಹ್ಮಣ್‌ ಸಭಾ ದಹಿಸರ್‌-ಬೊರಿವಲಿ ಸಂಸ್ಥೆಯ ವಾರ್ಷಿಕ ನವರಾತ್ರಿ ಉತ್ಸವವು ಸೆ. 29ರಂದು ಪ್ರಾರಂಭಗೊಂಡಿದ್ದು, ಅ. 8ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಕುಲಗುರು ದೈವಕ್ಯ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿಗಳ ಕೃಪೆ ಮತ್ತು ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮದ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದಗಳೊಂದಿಗೆ ದಹಿಸರ್‌ ಪೂರ್ವದ ಎನ್‌. ಎಲ್‌. ಕಾಂಪ್ಲೆಕ್ಸ್‌ನ ಸಾರಸ್ವತ ಕಲ್ಚರಲ್‌ ಆ್ಯಂಡ್‌ ರಿಕ್ರಿಯೇಷನ್‌ ಸೆಂಟರ್‌ ಜಿಎಸ್‌ಬಿ ಗಾರ್ಡನ್‌ನ ಮಾಧವೇಂದ್ರ ಸಭಾ ಮಂಟಪದಲ್ಲಿ ನಿರ್ಮಾಣಗೊಂಡಿರುವ ಪುಷ್ಪಾಲಂಕೃತ ಭವ್ಯ ಮಂಟಪದಲ್ಲಿ ರಜತ ಪ್ರಭಾವಳಿಯೊಂದಿಗೆ ಸ್ವರ್ಣಮುಕುಟ, ವಜ್ರ, ಚಿನ್ನಾಭರಣಗಳೊಂದಿಗೆ ಮಾತೆ ದುರ್ಗಾದೇವಿಯನ್ನು ಆರಾಧಿಸಲಾಗುತ್ತಿದೆ. ಉತ್ಸವದ ಒಂಬತ್ತು ದಿನಗಳಲ್ಲೂ ದೇವಿಯನ್ನು ವಿಭಿನ್ನ ರೂಪಳಿಂದ ಶೃಂಗಾರಿಸಲಾಗುತ್ತಿದೆ.

ಸರಸ್ವತಿದೇವಿ, ಶಾಂತಾದುರ್ಗಾ, ಚಾಮುಂಡೇಶ್ವರಿ, ಅನ್ನಪೂರ್ಣೆಶ್ವರಿ ಮಾತೆಯನ್ನು ಪೂಜಿಸಲಾಯಿತು. ಅ. 3ರಂದು ಲಕ್ಷ್ಮೀ ನಾರಾಯಣ ಹೃದಯ ಹವನ, ಪಂಚಾಮೃತ ಅಭಿಷೇಕ, ಚಂಡಿಕಾ ಹವನ, ತುಲಾಭಾರ ಸೇವೆ, ಪಂಚನೈವೇದ್ಯ ಮಹಾಭೋಗ, ಮಧ್ಯಾಹ್ನ ಪೂಜೆ, ದುರ್ಗಾ ನಮಸ್ಕಾರ, ದೀಪಾರಾಧನೆ, ಪುಷ್ಪಾಲಂಕಾರ ಸೇವೆ, ರಂಗಪೂಜೆ, ರಾತ್ರಿ ಪೂಜೆ ಇತ್ಯಾದಿಗಳೊಂದಿಗೆ ಸಂಪ್ರದಾಯಿಕವಾಗಿ ಚಂಡಿಕಾ ದೇವಿಯನ್ನು ಆರಾಧಿಸಲಾಯಿತು. ವೇದಮೂರ್ತಿ ಲಕ್ಷ್ಮೀ ನಾರಾಯಣ ಭಟ್‌ ಅವರು ವಿವಿಧ ಪೂಜಾಧಿಗಳನ್ನು ನೆರವೇರಿಸಿ ಸದ್ಭಕ್ತರನ್ನು ಹರಸಿದರು. ಪುರೋಹಿತರಾದ ವೇದ ಮೂರ್ತಿ ಉಲ್ಲಾಸ್‌ ಭಟ್‌, ವೇದಮೂರ್ತಿ ಮಂಜುನಾಥ್‌ ಪುರಾಣಿಕ್‌, ವೇದಮೂರ್ತಿ ಪ್ರಶಾಂತ್‌ ಭಟ್‌, ವೇದಮೂರ್ತಿ ವಿನಾಯಕ ಭಟ್‌, ವೇದಮೂರ್ತಿ ಹರೀಶ್‌ ಭಟ್‌ ಬೆಳಗಾವಿ, ಮತ್ತಿತರ ವಿದ್ವಾನರು ಪೂಜಾಧಿಗಳ ಸಹಭಾಗಿತ್ವ ವಹಿಸಿದ್ದರು. ರಾಜಾರಾವ್‌ ದಂಪತಿ ಹಾಗೂ ಎಚ್‌. ಪಿ. ಪ್ರಭು ದಂಪತಿ ಪೂಜಾಧಿಗಳ ಯಜಮಾನತ್ವ ವಹಿಸಿದ್ದರು.

ಜಿಎಸ್‌ಬಿ ಸಭಾದ ಸಂಚಾಲಕರಾದ ಕೆ. ಶ್ರೀನಿವಾಸ ಪ್ರಭು, ಜಿ. ಡಿ. ರಾವ್‌, ಗಣೇಶ್‌ ವಿ. ಪೈ, ಶೋಭಾ ವಿ. ಕುಲ್ಕರ್ಣಿ, ಸುಗುಣಾ ಕೆ. ಕಾಮತ್‌, ಗೌರವ ಕಾರ್ಯಾಧ್ಯಕ್ಷ ಕೆ. ಆರ್‌. ಮಲ್ಯ, ಅಧ್ಯಕ್ಷ ಎಂ. ಉದಯ ಪಡಿಯಾರ್‌, ಉಪಾಧ್ಯಕ್ಷ ಸಾಣೂರು ಮನೋಹರ್‌ ವಿ. ಕಾಮತ್‌, ಗೌರವ ಪ್ರಧಾನ ಕಾರ್ಯದರ್ಶಿ ವಿಷ್ಣು ಆರ್‌. ಕಾಮತ್‌, ಗೌರವ ಕೋಶಾಧಿಕಾರಿ ಮೋಹನ್‌ ಎ. ಕಾಮತ್‌, ಜೊತೆ ಕಾರ್ಯದರ್ಶಿಗಳಾದ ಗುರುಪ್ರಸಾದ್‌ ವಿ. ಪೈ ಮತ್ತು ಜಯೇಶ್‌ ಎಚ್‌. ಪ್ರಭು, ಜತೆ ಕೋಶಾಧಿಕಾರಿ ಪಿ. ಎಸ್‌. ಕಾಮತ್‌ ಹಾಗೂ ಸದಸ್ಯರ ಸೇವೆಯೊಂದಿಗೆ ನಡೆಯುತ್ತಿರುವ ಈ ಉತ್ಸವದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸೇವಾಕರ್ತರು, ಸಾವಿರಾರು ಭಕ್ತರು ಆಗಮಿಸಿ ಗಂಧಪ್ರಸಾದ ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.

 

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.