ಲಿಂಗತ್ವ ಅಲ್ಪಸಂಖ್ಯಾಕರಿಗೆ ವಿವಿಧ ಸೌಲಭ್ಯ:ಜಿಲ್ಲಾಧಿಕಾರಿ
ಲಿಂಗತ್ವ ಅಲ್ಪ ಸಂಖ್ಯಾಕರ ಅಭಿವೃದ್ಧಿ ಸಭೆ
Team Udayavani, Oct 5, 2019, 5:56 AM IST
ಉಡುಪಿ: ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾಕರಿಗೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾಕರ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾಕರಲ್ಲಿ ಉದ್ಯೋಗ ಮತ್ತು ಸ್ವ ಉದ್ಯೋಗ ಮಾಡಲು ಇಚ್ಚಿಸುವವರು ಒಂದು ವಾರದ ಒಳಗೆ ತಮ್ಮ ಪಟ್ಟಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ನೀಡಬೇಕು. ಉದ್ಯೋಗ ಮತ್ತು ಸ್ವ-ಉದ್ಯೋಗ ಮಾಡಲು ಅವಕಾಶಗಳನ್ನು ಕಲ್ಪಿಸುವುದು. ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ನಿವೇಶನ ಅಗತ್ಯವಿರುವವರು ಪಟ್ಟಿಯನ್ನು ನೀಡುವಂತೆ ತಿಳಿಸಿದರು. ಈಗಾಗಲೇ ಜಿ.ಪಂ. ನಿಂದ ವಸತಿ ರಹಿತರು ಮತ್ತು ನಿವೇಶನ ರಹಿತರ ಪಟ್ಟಿ ಸಿದ್ಧಪಡಿಸಿದ್ದು, 75 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಇನ್ನೂ 75 ಎಕರೆ ಜಾಗ ಗುರುತಿಸುವ ಕಾರ್ಯ ನಡೆಯಲಿದ್ದು, ಪಟ್ಟಿ ನೀಡಿದಲ್ಲಿ ವಿಶೇಷ ವರ್ಗದಲ್ಲಿ ಅವಕಾಶ ನೀಡಲಾಗುವುದು ಎಂದರು.
ತೊಂದರೆ ನೀಡದಿರಿ
ಲಿಂಗತ್ವ ಅಲ್ಪ ಸಂಖ್ಯಾಕರು ಮುಖ್ಯವಾಹಿನಿಯಲ್ಲಿ ಬಾಳಲು ಜಿಲ್ಲಾಡಳಿತದಿಂದ ಎಲ್ಲ ರೀತಿಯ ಅಗತ್ಯ ನೆರವು ನೀಡಲಾಗುವುದು. ಜಿಲ್ಲೆಯ ಟೋಲ್ಗಳಲ್ಲಿ ಅನಗತ್ಯವಾಗಿ ಸಾರ್ವಜನಿಕರಿಗೆ ಹಾಗೂ ವಾಹನಗಳಿಗೆ ತೊಂದರೆ ನೀಡುವ ಲಿಂಗತ್ವ ಅಲ್ಪಸಂಖ್ಯಾಂಕರ ವಿರುದ್ದ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಂತವರ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದರು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಲಿಂಗತ್ವ ಅಲ್ಪ ಸಂಖ್ಯಾಕರಿಂದ ತೊಂದರೆಯಾದರೆ ಇಡೀ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತದೆ. ಆ ರೀತಿ ಆಗದಂತೆ ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ಒಳ್ಳೆಯ ಭಾವನೆ ಬರುವ ರೀತಿಯಲ್ಲಿ ವರ್ತಿಸಬೇಕು. ಜಿಲ್ಲೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾಕರ ಸರ್ವೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ 2019-20 ರಲ್ಲಿ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾಕರ ಪುರ್ನವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಲಿಂಗತ್ವ ಅಲ್ಪ ಸಂಖ್ಯಾಕರ ಆಯ್ಕೆ ಪ್ರಕ್ರಿಯೆ ನಡೆಯಿತು.
ಶಾಸಕ ರಘುಪತಿ ಭಟ್ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾಕರು ಸಮಾಜದಲ್ಲಿ ಹೊಂದಿಕೊಂಡು ಹೋಗಬೇಕು. ಹೊರ ಜಿಲ್ಲೆಯಿಂದ ಬಂದು ಇಲ್ಲಿನ ಟೋಲ್ಗಳಲ್ಲಿ ಸಮಸ್ಯೆ ಉಂಟು ಮಾಡುವ ಹಾಗೂ ಅನೈತಿಕ ಚಟುವಟಿಕೆ ನಡೆಸುವವರ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಬೆಂಗಳೂರಿನ ಪಯಣ ಸಂಘಟನೆಯ ಚಾಂದಿನಿ, ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರ ಪರವಾಗಿ ಸಂಜೀವ ವಂಡ್ಸೆ ಮತ್ತಿತರರು ಸಮುದಾಯದ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹೊÉàಟ್, ಎಎಸ್ಪಿ ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಗುರುತು ಚೀಟಿ
ಲಿಂಗತ್ವ ಅಲ್ಪಸಂಖ್ಯಾಕರ ಬಗ್ಗೆ ಸಮಾಜದಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಪೊಲೀಸ್ ಇಲಾಖೆಗೆ ಈ ಬಗ್ಗೆ ಪ್ರತ್ಯೇಕ ಕಾರ್ಯಾಗಾರ ನಡೆಸಲಾಗುವುದು. ಮೈತ್ರಿ ಯೋಜನೆಯಲ್ಲಿ ಎಲ್ಲ ಲಿಂಗತ್ವ ಅಲ್ಪ ಸಂಖ್ಯಾಕರ ಪ್ರಯೋಜನ ಪಡೆಯುವಲ್ಲಿ ತಹಶೀಲ್ದಾರ್ಗಳು ಗಮನಹರಿಸಿ ಶೀಘ್ರದಲ್ಲಿ ಅವರಿಗೆ ಗುರುತು ಚೀಟಿ ವಿತರಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ