ವಿದ್ಯಾರ್ಥಿದೆಸೆಯಲ್ಲೇ ಸಂಶೋಧನೆಗೆ ಕರೆ
ಮಣಿಪಾಲದಲ್ಲಿ ಇ ಪೋಸ್ಟರ್ ಸಮ್ಮೇಳನ ಉದ್ಘಾಟನೆ
Team Udayavani, Oct 5, 2019, 5:11 AM IST
ಉಡುಪಿ: ಬೇರೆ ಬೇರೆ ಹಂತಗಳ ವಿದ್ಯಾರ್ಥಿಗಳು ಸಂಶೋಧನೆಯನ್ನು ಶೈಕ್ಷಣಿಕ ವೃತ್ತಿಯಲ್ಲಿ ಅಗತ್ಯವಾಗಿ ಮತ್ತು ಸ್ವಯಂ ಪ್ರೇರಿತರಾಗಿ ಅಳವಡಿಸಿಕೊಳ್ಳಬೇಕು ಎಂದು ನಿಟ್ಟೆ ಜ| ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿರ್ದೇಶಕ ಡಾ| ಕೆ. ಶಂಕರನ್ ಹೇಳಿದರು.
ಮಣಿಪಾಲ ಮಾಹೆ ವಿ.ವಿ.ಯ ವಾಣಿಜ್ಯ ಶಾಸ್ತ್ರ ವಿಭಾಗ ಕೆಎಂಸಿ ಡಾ| ಟಿಎಂಎ ಪೈ ಸಭಾಂಗಣದಲ್ಲಿ ಆಯೋಜಿಸಿದ ಒಂದು ದಿನದ ಅಂತರ್ ವಿಭಾಗಗಳ ಅಂತಾರಾಷ್ಟ್ರೀಯ ಮಟ್ಟದ ಇ ಪೋಸ್ಟರ್ (ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಭಿತ್ತಿಚಿತ್ರ) ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು ಸಂಶೋಧನೆಯಿಂದ ವ್ಯಕ್ತಿ ತಮ್ಮ ಸುತ್ತಮುತ್ತಲಿನ ಜಗತ್ತನ್ನು ನೋಡುವ ದೃಷ್ಟಿಕೋನ ಬದಲಾಗುತ್ತದೆ ಎಂದರು.
ಮಾಹೆ ಸಹಕುಲಪತಿ ಡಾ| ಪಿಎಲ್ಎನ್ಜಿ ರಾವ್ ಗೌರವ ಅತಿಥಿಗಳಾಗಿ ಪಾಲ್ಗೊಂಡು ಸಂಶೋಧನೆಯು ಮಾಹೆಯನ್ನು ಬೇರೆ ವಿ.ವಿ.ಗಳಿಗಿಂತ ಭಿನ್ನವಾಗಿ ಮತ್ತು ಮುಂಚೂಣಿಯಲ್ಲಿರುವಂತೆ ಮಾಡಿದೆ. ವಿದ್ಯಾರ್ಥಿ ಸಂಶೋಧಕರನ್ನು ಎಳೆವೆಯಲ್ಲಿ ಸಂಶೋಧನೆ ಯತ್ತ ಉತ್ತೇಜಿಸಬೇಕು ಎಂದು ಕರೆ ನೀಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ| ಸಂದೀಪ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಆಯೋಜಕರಾದ ಪ್ರೊ| ಅಂಕಿತಾ ಶೆಟ್ಟಿ ಸ್ವಾಗತಿಸಿ ಪ್ರೊ| ಊರ್ಮಿಳಾ ವಂದಿಸಿದರು. ಕೋಮಲ್ ಜೆನಿಫರ್ ಡಿ’ಸೋಜಾ ಕಾರ್ಯಕ್ರಮ ನಿರ್ವಹಿಸಿದರು. ಸಮ್ಮೇಳನದಲ್ಲಿ ಆಡಳಿತ ನಿರ್ವಹಣೆ, ವಾಣಿಜ್ಯ, ಆರೋಗ್ಯ ನಿರ್ವಹಣೆ, ಎಂಜಿನಿಯರಿಂಗ್- ತಂತ್ರಜ್ಞಾನ, ವ್ಯವಹಾರ ವಿಶ್ಲೇಷಣೆ ಈ ನಾಲ್ಕು ವಿಷಯಗಳನ್ನು ಅಳವಡಿಸಲಾಗಿದೆ. ನೆದರ್ಲಂಡ್, ಫ್ರಾನ್ಸ್, ಯುಎಇ, ಅಫ್ಘಾನಿಸ್ಥಾನ ಸೇರಿದಂತೆ ಜಗತ್ತಿನ ವಿವಿಧ ವಿ.ವಿ.ಗಳಿಂದ 150 ವಿದ್ಯಾರ್ಥಿ ಸಂಶೋಧಕರು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ