ಶಿಸ್ತು ಕಳೆದುಕೊಂಡ ಅವಳಿನಗರದ ಗಸ್ತು

ಅಪರಾಧ ಕೃತ್ಯಕ್ಕೆ ಆಯಾ ಠಾಣಾ ಬೀಟ್‌ ವ್ಯವಸ್ಥೆಯೇ ಹೊಣೆ

Team Udayavani, Oct 5, 2019, 11:16 AM IST

Udayavani Kannada Newspaper

ಹುಬ್ಬಳ್ಳಿ: ಅವಳಿನಗರದಲ್ಲಿ ಇನ್ಮುಂದೆ ಮೀಟರ್‌ ಬಡ್ಡಿ ದಂಧೆ, ಕ್ರಿಕೆಟ್‌ ಬೆಟ್ಟಿಂಗ್‌, ಜೂಜಾಟ, ಮಟ್ಕಾ ಸೇರಿದಂತೆ ಅಕ್ರಮ ಚಟುವಟಿಕೆಗಳು ಹಾಗೂ ಮನೆಗಳ್ಳತನ, ಸರಗಳ್ಳತನ, ಸುಲಿಗೆ, ದರೋಡೆ, ಚಾಕು ಇರಿತದಂತಹ ಅಪರಾಧಗಳು ನಡೆದರೆ ಆಯಾ ಪ್ರದೇಶದ ಬೀಟ್‌ ವ್ಯವಸ್ಥೆಗೆ ನಿಯುಕ್ತಿಗೊಂಡ ಪೊಲೀಸ್‌ ಸಿಬ್ಬಂದಿಯೇ ಹೊಣೆಯಾಗುತ್ತಾರೆ.

ಅವಳಿನಗರದಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಗಸ್ತು ವಾಹನಗಳನ್ನು ಹೆಚ್ಚಿಸಲಾಗಿದೆ. ಅಕ್ರಮ ದಂಧೆಗಳನ್ನು ನಿಯಂತ್ರಿಸಲು 2-3 ವರ್ಷಗಳಿಂದ ಎಲ್ಲ ಠಾಣೆಗಳಲ್ಲಿ ಬೀಟ್‌ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ಸಾರ್ವಜನಿಕರನ್ನು ಸಹಭಾಗಿತ್ವ ಮಾಡಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಟ್ಕಾ, ಜೂಜಾಟ, ಮೀಟರ್‌ ಬಡ್ಡಿ, ಕ್ರಿಕೆಟ್‌ ಬೆಟ್ಟಿಂಗ್‌, ಸರಗಳ್ಳತನ, ಮನೆಗಳ್ಳತನ, ಸುಲಿಗೆ, ದರೋಡೆ ಸೇರಿದಂತೆ ಮಾರಣಾಂತಿಕ ಹಲ್ಲೆ, ಚಾಕು ಇರಿತ, ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದು ಅವಳಿನಗರದ ಜನಸಾಮಾನ್ಯರ ನಿದ್ರೆಗೆಡಿಸಿದೆ.

ಅಷ್ಟೇ ಅಲ್ಲದೆ ಪೊಲೀಸ್‌ ವ್ಯವಸ್ಥೆ ಹಾಗೂ ಗಸ್ತು ಬಗ್ಗೆಯೇ ಸಾರ್ವಜನಿಕರಲ್ಲಿ ಸಂಶಯ ಮೂಡುವಂತಾಗಿದೆ. ಮಹಾನಗರ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ಅವರು ಅಪರಾಧ ಚಟುವಟಿಕೆ ಹಾಗೂ ಅಕ್ರಮ ದಂಧೆಗಳನ್ನು ತಡೆಗಟ್ಟಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಹತೋಟಿಗೆ ತರಲು ಬೀಟ್‌ ವ್ಯವಸ್ಥೆ ಬಲವರ್ಧನೆಗೊಳಿಸಲು ಮುಂದಾಗಿದ್ದಾರೆ. ಜೊತೆಗೆ ಯಾವುದೇ ಪ್ರದೇಶದಲ್ಲಿ ಅಹಿತಕರ ಘಟನೆ, ಚಟುವಟಿಕೆಗಳು ನಡೆದರೆ ಆ ಪ್ರದೇಶದ ಬೀಟ್‌ಗೆ ನಿಯುಕ್ತಿಗೊಂಡ ಸಿಬ್ಬಂದಿಯನ್ನೇ ಹೊಣೆಗಾರರನ್ನಾಗಿಸಲು ಮುಂದಾಗಿದ್ದಾರೆ. ಸಾರ್ವಜನಿಕರಿಂದ ಪೊಲೀಸ್‌ ಇಲಾಖೆ ಕಾರ್ಯವೈಖರಿ ಬಗ್ಗೆ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಆಯುಕ್ತ ಆರ್‌. ದಿಲೀಪ್‌ ಅವರು ಬೀಟ್‌ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಮುಂದಾಗಿದ್ದಾರೆ.

ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಬೀಟ್‌ ವ್ಯವಸ್ಥೆ ರಚಿಸುವ ಬದಲು ಅವರಿಂದ ಅಕ್ರಮ ಚಟುವಟಿಕೆ, ದಂಧೆಕೋರರ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳುವುದು ಉತ್ತಮ ವೆಂದು ಭಾವಿಸಿದ್ದಾರೆ.

ಪೊಲೀಸ್‌ ಇಲಾಖೆಯಿಂದ ಎರಡು ತಿಂಗಳಲ್ಲಿ ಹೊಸ ಬದಲಾವಣೆ! : ಅವಳಿ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ವೈಯಕ್ತಿಕ ಹಾಗೂ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ, ಚಾಕು ಇರಿತದಂತಹ ಪ್ರಕರಣಗಳು ನಡೆಯುತ್ತಿವೆ. ಆದರೂ ಕಾನೂನು-ಸುವ್ಯವಸ್ಥೆ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇಲಾಖೆಯನ್ನು ಇನ್ನಷ್ಟು ಬಲವರ್ಧನೆಗೊಳಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಅವಳಿನಗರದ ಜನ ಪೊಲೀಸ್‌ ಇಲಾಖೆಯಿಂದ ಅತ್ಯುತ್ತಮವಾದ ಹೊಸ ಬದಲಾವಣೆ ಕಾಣಲಿದ್ದಾರೆ ಎಮದು ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ “ಉದಯವಾಣಿ’ಗೆ ತಿಳಿಸಿದರು.

ಅಕ್ರಮ ನಿಯಂತ್ರಣಕ್ಕೆ ಡಿಸಿಪಿ ನೇತೃತ್ವದಲ್ಲಿ ವಿಶೇಷ ತಂಡ : ಮೀಟರ್‌ಬಡ್ಡಿ ಕುಳಗಳು, ರೌಡಿಗಳು, ಗೂಂಡಾಗಳು, ಅಕ್ರಮ ದಂಧೆಕೋರರು, ಮಹಿಳೆಯರಿಗೆ ಸಾಲ ಕೊಡಿಸುವುದಾಗಿ ವಂಚಿಸುವ ಜಾಲ ಹಾಗೂ ದುಷ್ಟಶಕ್ತಿಗಳ ಮಟ್ಟಹಾಕಲು ಹಾಗೂ ಅಪರಾಧ ಚಟುವಟಿಕೆಗಳು, ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಿಸುವ ನಿಟ್ಟಿನಲ್ಲಿ ಆಯುಕ್ತರು ಆಯಾ ವಿಭಾಗದ ಡಿಸಿಪಿಗಳ ನೇತೃತ್ವದಲ್ಲಿ ರೌಡಿ, ಗೂಂಡಾಗಳ ಮೇಲೆ ನಿಗಾ ವಹಿಸಲು ಎರಡು ವಿಶೇಷ ತಂಡ ರಚಿಸಿದ್ದಾರೆ.

 ಜನರ ಸಹಭಾಗಿತ್ವದ ಬೀಟ್‌ ವ್ಯವಸ್ಥೆ ಫೇಲ್‌ ಆಗಿದ್ದೆಲ್ಲಿ? : ಅವಳಿನಗರದಲ್ಲಿ ಈ ಹಿಂದೆ ಬೀಟ್‌ ವ್ಯವಸ್ಥೆಯನ್ನು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ರೂಪಿಸಲಾಗಿತ್ತು. ಆದರೆ ಬೀಟ್‌ ವ್ಯವಸ್ಥೆಯಲ್ಲಿ ನೇಮಕಗೊಂಡಿದ್ದವರಲ್ಲಿ ಕೆಲವರು ಅಕ್ರಮ ದಂಧೆಕೋರರು, ಅಪರಾಧ ಚಟುವಟಿಕೆಯಲ್ಲಿ ತೊಡಗಿಕೊಂಡವರೊಂದಿಗೆ ಗುರುತಿಸಿಕೊಂಡಿದ್ದರು. ಅಲ್ಲದೆ ಅಂತಹ ದಂಧೆಕೋರರ ಬಗ್ಗೆ ಪೊಲೀಸ್‌ ಇಲಾಖೆಗೆ ಮಾಹಿತಿ ಕೊಡುತ್ತಿರಲಿಲ್ಲ. ಹೀಗಾಗಿ ಜನರ ಸಹಭಾಗಿತ್ವದ ವ್ಯವಸ್ಥೆ ಹಿನ್ನಡೆ ಕಂಡಿತು.

 ಮನೆ ಬಾಗಿಲಿಗೆ ಸ್ಟಿಕ್ಕರ್‌ ಅಂಟಿಸಿದ್ದಾಯ್ತು; ಆದ್ರೆ ಸ್ಪಂದನೆಯೇ ಇಲ್ಲ:  ಇತ್ತೀಚೆಗೆ ಅವಳಿನಗರದಲ್ಲಿ ಮನೆ ಮನೆಗೆ, ಕಚೇರಿಗಳಲ್ಲಿ ಆಯಾ ಪ್ರದೇಶದ ಬೀಟ್‌ ಸಿಬ್ಬಂದಿ ಹೆಸರು, ದೂರವಾಣಿ ಸಂಖ್ಯೆಗಳ ಮಾಹಿತಿ ಒಳಗೊಂಡ ಸ್ಟಿಕ್ಕರ್‌ ಅಂಟಿಸಿ ಹೋಗಲಾಗಿದೆ. ತುರ್ತು ಸಂದರ್ಭದಲ್ಲಿ, ಸಮಸ್ಯೆಗಳಾದಲ್ಲಿ ಸಂಪರ್ಕಿಸುವಂತೆಯೂ ಹೇಳಿ ಹೋಗಲಾಗಿದೆ. ಆದರೆ ಎಷ್ಟೋ ಬಾರಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಸಾಧ್ಯವಾಗುತ್ತಿಲ್ಲ. ಸೂಕ್ತ ಸ್ಪಂದನೆಯೇ ಇಲ್ಲ. ಕರೆಯನ್ನು ಸ್ವೀಕರಿಸುವುದಿಲ್ಲ ಎಂಬುದು ಸಾರ್ಜಜನಿಕರನೇಕರ ಅಹವಾಲು.

ಸಮರ್ಪಕವಾಗಿ ಗಸ್ತು ತಿರುಗದ ವಾಹನ ವಿಚಾರಣೆ ಅವಳಿನಗರದಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ 2017ರ ಜ. 20ರಿಂದ 25 ಚಾಲುಕ್ಯ ಗಸ್ತುವಾಹನಗಳನ್ನು ನಿಯೋಜಿಸಲಾಗಿತ್ತು. ಆದರೆ ಅವು ಸಮರ್ಪಕವಾಗಿ ಗಸ್ತು ತಿರುಗುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿಬಂದ ಹಿನ್ನೆಲೆಯಲ್ಲಿ ಆಯುಕ್ತರು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಇವುಗಳಲ್ಲಿ ಕೆಲವು ಚಾಲುಕ್ಯ ವಾಹನಗಳು ದುರಸ್ತಿಗೆ ಬಂದಿದ್ದು, ಅವುಗಳ ರಿಪೇರಿ ಕೂಡ ಆಗಬೇಕಿದೆ.

 

ಬಡ್ಡಿಕುಳಗಳ ಜತೆ ಫ್ರೆಂಡ್ಲಿ ಫ್ರೆಂಡ್ಲಿ ? :  ಬೀಟ್‌ ವ್ಯವಸ್ಥೆಯಲ್ಲಿ ಸಾರ್ವಜನಿಕರನ್ನು ಸೇರಿಸಿಕೊಂಡರೆ ಅಕ್ರಮ ಕುಳಗಳನ್ನು ಮಟ್ಟಹಾಕಲು ಎಷ್ಟರ ಮಟ್ಟಿಗೆ ಸಾಧ್ಯ ಎಂಬುದು ಮುಖ್ಯ. ಕೂಲಿ ಕಾರ್ಮಿಕರು, ಆಟೋ ಚಾಲಕರು, ತರಕಾರಿ, ಹಣ್ಣು-ಹಂಪಲು ಮಾರಾಟಗಾರರು ಸೇರಿದಂತೆ ಎಲ್ಲ ವರ್ಗದ ಜನರು ಬೀಟ್‌ ವ್ಯವಸ್ಥೆಯಲ್ಲಿರಬೇಕು. ಆ ಮೂಲಕ ಎಲ್ಲ ವರ್ಗದ ಜನರ ನೋವು ಪೊಲೀಸರಿಗೆ ಗೊತ್ತಾಗಬೇಕು ಎಂಬುದು ಆಶಯವಾಗಿತ್ತು. ಆದರೆ ಮೀಟರ್‌ಬಡ್ಡಿ ಕುಳಗಳು ಇಂಥವರಿಂದಲೇ ಬಡ್ಡಿ ವಸೂಲಿ ಮಾಡುತ್ತಾರೆ. ಹಣ್ಣು-ಹಂಪಲು, ತರಕಾರಿ ಸೇರಿದಂತೆ ಇನ್ನಿತರೆ ಠೊಕ ವ್ಯಾಪಾರಿಗಳು ತನ್ನ ಬಳಿಯೇ ಹಣ್ಣು, ತರಕಾರಿ ಖರೀದಿಸಬೇಕು. ತನ್ನ ಒತ್ತು ಗಾಡಿಯಲ್ಲೇ ಮಾರಾಟ ಮಾಡಬೇಕೆಂದು ಹೆದರಿಸಿ ಬೀದಿಬದಿಯ ವ್ಯಾಪಾರಿಗಳಿಂದ ಸಂಜೆ ಬಡ್ಡಿ ಸೇರಿ ಹಣ ವಸೂಲಿ ಮಾಡುತ್ತಾರೆ. ಹಣ್ಣು ಮತ್ತು ವ್ಯಾಪಾರ ಅವನದೇ ಆದ ಮೇಲೆ ಅಂಥವರೊಂದಿಗೆ ಹೊಂದಾಣಿಕೆ ಮಾಡಿಕೊಂಡ ಬಡ ವರ್ಗದವರು, ದೀನದಲಿತರ ನೋವಿಗೆ ಪೊಲೀಸ್‌ ಇಲಾಖೆ ಸ್ಪಂದಿಸಲು ಹೇಗೆ ಸಾಧ್ಯ. ಪೊಲೀಸರೇ ರೌಡಿಶೀಟರ್‌ಗಳು, ಗೂಂಡಾಗಳು, ಕ್ರಿಕೆಟ್‌ ಬೆಟ್ಟಿಂಗ್‌, ಬಡ್ಡಿ ಕುಳಗಳು, ಮಟ್ಕಾ ಬುಕ್ಕಿಗಳು ಸೇರಿದಂತೆ ಅಕ್ರಮ ಚಟುವಟಿಕೆ, ದಂಧೆಗಳಲ್ಲಿ ತೊಡಗಿದವರೊಂದಿಗೆ ಸ್ನೇಹಿತ್ವ ಬೆಳೆಸಿಕೊಂಡಿದ್ದಾರೆ. ಹೀಗಾದಾಗ ಅಂಥವರನ್ನು ಸದೆಬಡಿಯಲು ಹೇಗೆ ಸಾಧ್ಯವೆಂಬ ಮಾತುಗಳು ಜನರಿಂದ ಕೇಳಿಬರುತ್ತಿವೆ.

ಬೀಟ್‌ ವ್ಯವಸ್ಥೆ ನಿರಂತರವಾಗಿ ನಡೆಯುತ್ತಿದೆ. ಅದರ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದೆ. ಬೀಟ್‌ ಸಿಬ್ಬಂದಿಯು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಯಾವುದೇ ಸ್ಥಳದಲ್ಲಿ ಅಹಿತಕರ ಘಟನೆ, ಅಕ್ರಮ ಚಟುವಟಿಕೆಗಳು ನಡೆದರೆ ಅಂತಹ ಪ್ರದೇಶಕ್ಕೆ ನಿಯೋಜಿತಗೊಂಡ ಬೀಟ್‌ ಸಿಬ್ಬಂದಿಯನ್ನೇ ಹೊಣೆಗಾರರನ್ನಾಗಿಸಲಾಗುವುದು. -ಆರ್‌. ದಿಲೀಪ್‌, ಹು-ಧಾ ಪೊಲೀಸ್‌ ಆಯುಕ್ತ

 

-ಶಿವಶಂಕರ ಕಂಠಿ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.