ಹಾನಿಯಾದ ಪ್ರತಿ ಮನೆಗೂ ಐದು ಲಕ್ಷ


Team Udayavani, Oct 5, 2019, 1:55 PM IST

bk-tdy-1

ಮುಧೋಳ: ನೆರೆ ಸಂದರ್ಭದಲ್ಲಿ ಹಾನಿಗೀಡಾದ ಪ್ರತಿ ಮನೆಗೂ ರೂ.5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ಮುಧೋಳಕ್ಕೆ ನೆರೆ ಹಾನಿ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಸಂತ್ರಸ್ತರ ಬೇಡಿಕೆ ಸ್ವೀಕರಿಸಿ ಅವರು ಮಾತನಾಡಿದರು. ಇದೇ ವೇಳೆ ನಗರದ ಪ್ರವಾಸಿ ಮಂದಿರದಲ್ಲಿ ಬೃಹತ್‌ ನೆರೆ ಸಂತ್ರಸ್ತರ ಪ್ರತಿಭಟನಾ ರ್ಯಾಲಿಯ ನೇತೃತ್ವ ವಹಿಸಿದ ಮಾಜಿ ಸಚಿವ, ವಿಪ ಸದಸ್ಯ ಆರ್‌.ಬಿ. ತಿಮ್ಮಾಪುರ ಸಂತ್ರಸ್ತರ ಪರವಾಗಿ ವಿವಿಧ ಬೇಡಿಕೆ ಶೀಘ್ರವಾಗಿ ಈಡೇರಿಸುವಂತೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಪಾದಯಾತ್ರೆ: ಇದಕ್ಕೂ ಮೊದಲು ತಾಲೂಕಿನ ಮಳಲಿ ಗ್ರಾಮದಿಂದ ನೆರೆ ಸಂತ್ರಸ್ತರ ಪಾದಯಾತ್ರೆ ನೇತೃತ್ವ ವಹಿಸಿದ ವಿಪ ಸದಸ್ಯ ಆರ್‌.ಬಿ. ತಿಮ್ಮಾಪುರ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌, ಉತ್ತೂರ ಗೇಟ್‌, ಬಸವೇಶ್ವರ ಸರ್ಕಲ್‌, ಶಿವಾಜಿ ಸರ್ಕಲ್‌, ಗಡದನ್ನವರ ಸರ್ಕಲ್‌, ರನ್ನ ಸರ್ಕಲ್‌ ಮೂಲಕ ಸಾಗಿ ಪ್ರವಾಸಿ ಮಂದಿರ ತಲುಪಿದರು. ವಿಪ ಸದಸ್ಯ ಆರ್‌.ಬಿ. ತಿಮ್ಮಾಪುರ ಮಾತನಾಡಿ, ನೆರೆ ಪ್ರವಾಹದಲ್ಲಿ ಸಿಲುಕಿ ಮನೆ-ಮಠ, ಹೊಲ-ಗದ್ದೆ, ಜಾನುವಾರು ಕಳೆದುಕೊಂಡು ತತ್ತರಿಸಿ ಹೋಗಿರುವ ನೆರೆ ಸಂತ್ರಸ್ತರಿಗೆ ಇದುವರೆಗೂ ಪರಿಹಾರ ನೀಡದಿರುವ ಸರ್ಕಾರದ ಕ್ರಮ ಖಂಡಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಜಿಲ್ಲೆಗೆ ಎರಡನೇ ಬಾರಿ ಭೇಟಿ ನೀಡಿದ್ದರೂ, ಇದುವರೆಗೂ ರೈತರ ಬೆಳೆ ನಾಶಕ್ಕೆ ಯಾವುದೇ ಪರಿಹಾರ ಘೋಷಿಸದೇ ಕೇವಲ ಭೇಟಿ ನೀಡಿ ಹೋಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಿಂದ ಕೇಂದ್ರಕ್ಕೆ ನೆರೆ ಪರಿಹಾರಕ್ಕೆ ವರದಿ ಕಳುಹಿಸಿದ್ದು, ಕೇಂದ್ರ ಸರ್ಕಾರ ಇದನ್ನು ತಿರಸ್ಕರಿಸಿದೆ. ಕಾರಣ ಬಿ.ಎಸ್‌.ಯಡಿಯೂರಪ್ಪನವರ ಸರ್ಕಾರ ಎಷ್ಟು ಗಟ್ಟಿಯಾಗಿದೆ ಎಂಬುದು ಇದರಿಂದ ಅರ್ಥವಾಗುತ್ತದೆ ಎಂದರು.

ರಾಜ್ಯದಿಂದ 25 ಜನ ಸಂಸದರನ್ನು ಜನತೆ ಆಯ್ಕೆ ಮಾಡಿ ಕಳುಹಿಸಿದ್ದು, ಅವರು ರಾಜ್ಯಕ್ಕೆ ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯನವರು ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗೋಣ, ನಾನು ಪ್ರಧಾನಿಗಳ ಜೊತೆ ಮಾತನಾಡಿ, ನೆರೆ ಪರಿಹಾರ ಕೇಂದ್ರದಿಂದ ಬಿಡುಗಡೆಗೊಳಿಸೋಣ ಎಂದು ಹೇಳಿದರೂ, ಬಿಜೆಪಿ ನಾಯಕರು ಜಾಣ ಕುರುಡುತನ ತೋರುತ್ತಿದ್ದಾರೆ ಎಂದರು.

ತಾಪಂ ಅಧ್ಯಕ್ಷ ತಿಮ್ಮಣ್ಣ ಬಟಕುರ್ಕಿ, ಬಸವಂತ ಕಾಟೆ, ತಿಮ್ಮಣ್ಣ ಹಲಗತ್ತಿ, ಪ್ರಶಾಂತ ಕಾಳೆ, ರವಿ ಕಾಂಬಳೆ, ಅಹಿಂದ ಅಧ್ಯಕ್ಷ ಭೀಮಶಿ ತಳವಾರ, ಮುದಕಣ್ಣ ಅಂಬಿಗೇರ,ನಗರಸಭೆ ಸದಸ್ಯರು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.