ಗಾಂಧಿ ಜಯಂತಿ ದಿನ ಮದ್ಯ ಮಾರಾಟ!


Team Udayavani, Oct 5, 2019, 6:30 PM IST

tk-tdy-2

ಕುಣಿಗಲ್‌: ಗಾಂಧಿ ಜಯಂತಿಯಂದು ಮದ್ಯ ಮಾರಾಟ ಮಾಡುತ್ತಿದ್ದ ಎಡೆಯೂರಿನ ಅಡ್ಡೆಯೊಂದರ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಎರಡು ಬೈಕ್‌, ಮದ್ಯ ವಶಪಡಿಸಿಕೊಂಡರೂ ಪ್ರಕರಣ ದಾಖಲಿಸದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ಅ.2ರಂದು ಅಬಕಾರಿ ಸಬ್‌ಇನ್ಸ್‌ಪೆಕ್ಟರ್‌ ದೇವರಾಜು, ಸಿಬ್ಬಂದಿ ತಿರುಮಲೇ ಗೌಡ, ಅಮೃತ್‌ ಗಸ್ತು ತಿರುಗುವಾಗ ಎಡೆಯೂರಿನ ಸಂಗೀತಾ  ಮಿಲ್ಟ್ರಿ ಹೋಟೆಲ್‌ಬಳಿ ಎರಡು ಬೈಕ್‌ಗಳ ಬಾಕ್ಸ್‌ಗಳಲ್ಲಿ ಮದ್ಯ ಇಟ್ಟು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಪೊಲೀಸರನ್ನು ಕಂಡು ಇಬ್ಬರು ಯುವಕರು ಪರಾರಿಯಾಗಿದ್ದಾರೆ.

ಎರಡು ಬೈಕ್‌ ಹಾಗೂ ಮೂರು ಕೇಸ್‌ ಮದ್ಯದ ಬಾಕ್ಸ್‌ ವಶಪಡಿಸಿ ಕೊಂಡು ಕುಣಿಗಲ್‌ ಅಬಕಾರಿ ಕಚೇರಿಗೆ ತಂದು ಇನ್ಸ್‌ಪೆಕ್ಟರ್‌ ಕಮಲಾಕರ್‌ ವಶಕ್ಕೆ ನೀಡಿದ್ದಾರೆ. ಮಧ್ಯ ರಾತ್ರಿವರೆಗೂ ಮದ್ಯದಂಗಡಿ ಮಾಲೀಕರ ಜೊತೆ ಮಾತುಕತೆ ನಡೆದು ಯಾವುದೇ ಪ್ರಕರಣ ದಾಖಲಿಸಿಕೊಳ್ಳದೆ ಬೈಕ್‌ ಬಿಟ್ಟು ಕಳುಹಿಸಲಾಗಿದೆ ಎಂದು ಎಡೆ ಯೂರು ಹೋಬಳಿ ಕೊಪ್ಪ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಜಿ.ಲಕ್ಷ್ಮಣ ಆರೋಪಿಸಿದ್ದಾರೆ.

ಈ ಸಂಬಂಧ ಅಬಕಾರಿ ಡೀಸಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದಾಗ ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇಲಾಖೆಯಲ್ಲಿ ಅಧಿಕಾರಿಗಳ ನಡುವೆ ಸಮನ್ವಯತೇ ಇಲ್ಲದಿರುವುದು ಎದ್ದು ಕಾಣುತ್ತಿದೆ. ಅಕ್ರಮ ಮದ್ಯ ಮಾರಾಟ ಮಾಡುವುದೇ ಅಪರಾಧ. ಆದರೆ ಗಾಂಧಿ ಜಯಂತಿ ದಿನವೇ ಮದ್ಯ ಮಾರಾಟ ಮಾಡು ವುದು ಪತ್ತೆಯಾದರೂ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣ ವಾಗಿದೆ. ಅಬಕಾರಿ ಡೀಸಿ ಅವರು ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಬೆದರಿಕೆ ಕರೆ: ಈ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಿರುವ ಸಬ್‌ಇನ್ಸ್‌ಪೆಕ್ಟರ್‌ ದೇವ ರಾಜುಗೆ ಕಳೆದ ಎರಡು ದಿನಗಳಿಂದ ಎಡೆಯೂರು ಹೋಬಳಿ ರಾಜಕೀಯ ಮುಖಂಡರಿಂದ ಬೆದರಿಕೆ ಕರೆಗಳು ಬರುತ್ತಿವೆ. ಲೋಕಾಯುಕ್ತ, ಅಬಕಾರಿ ಮೇಲಧಿಕಾರಿಗಳಿಗೆ ದೂರು ನೀಡುವುದಾಗಿ ಬೆದರಿಕೆ ಕರೆಗಳು ಬರುತ್ತಿವೆ. ನನಗೆ ಆರೋಗ್ಯದ ಸಮಸ್ಯೆ ಇದೆ.

ಈ ಸಂಬಂಧ ಕರೆ ಮಾಡಿರುವ ದೂರವಾಣಿ ಸಂಖ್ಯೆಗಳ ಸಮೇತ ಮೇಲಧಿಕಾರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಸಬ್‌ಇನ್ಸ್‌ಪೆಕ್ಟರ್‌ ದೇವರಾಜು ತಿಳಿಸಿದ್ದಾರೆ.

ಟಾಪ್ ನ್ಯೂಸ್

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.