ಸಮಾಜ ಸೇವಕರನ್ನು ಸಮ್ಮಾನಿಸುವುದು ಧರ್ಮ: ಡಾ| ಶೆಟಿ


Team Udayavani, Oct 5, 2019, 6:39 PM IST

mumbai-tdy-1

ಮುಂಬಯಿ, ಅ. 4: ಸಮಾಜಮುಖೀ ಚಿಂತನೆಗಳಿಂದ ನಿರಂತರವಾಗಿ ಸಮಾಜಕ್ಕಾಗಿ ನಾನು ಏನು ಮಾಡಲು ಸಾಧ್ಯ ಎಂದು ಚಿಂತಿಸುವವರು ಬಹಳ ವಿರಳ. ಆ ನಿಟ್ಟಿನಲ್ಲಿ ನಿಸ್ವಾರ್ಥವಾಗಿ ದುಡಿಯುವವರನ್ನು ಸಂಘ-ಸಂಸ್ಥೆಗಳು ಗುರುತಿಸಿ ಸಮ್ಮಾನಿಸಿದಾಗ ಅವರಿಗೆ ಪ್ರೋತ್ಸಾಹ ನೀಡಿದಾಗ ಮತ್ತಷ್ಟು ಜವಾಬ್ದಾರಿಯಿಂದ, ಉತ್ಸಾಹದಿಂದ ಅವರು ಕೆಲಸ ಮಾಡಲು ಸಾಧ್ಯವಾಗುತ್ತದೆ.

ಲಯನ್‌ ಜಯರಾಮ ಶೆಟ್ಟಿ ಅವರು ಕಳೆದ ಅನೇಕ ದಶಕಗಳಿಂದ ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಬಂದಿರುವುದನ್ನು ನಾವು ನೋಡುತ್ತಾ ಬಂದಿದ್ದೇವೆ. ಅವರಿಗೆ ಇಂದು ಸನ್ಮಾನ ಮಾಡಿರುವುದು ಅರ್ಥಪೂರ್ಣ ಎಂದು ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ| ಆರ್‌. ಕೆ. ಶೆಟ್ಟಿ ಅವರು ಅಭಿಪ್ರಾಯಪಟ್ಟರು.

ಅವರು ಅ. 2ರಂದು ತುಳು ಕನ್ನಡಿಗರ ಹಿತಚಿಂತಕರ ವೇದಿಕೆಯವರು ಆಯೋಜಿಸಿದ್ದ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ಸಂಚಾಲಕತ್ವದಲ್ಲಿ ಶ್ರೀ ಅನಂತಶಯನ ಬಂಟ ಮಹಿಳಾ ಯಕ್ಷಗಾನ ಕಲಾಮಂಡಳಿ ಕಾರ್ಕಳ ತಂಡದಿಂದ ತಾಳಮದ್ದಲೆ ಹಾಗೂ ಸಮ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು.

ಇನ್ನೋರ್ವ ಅತಿಥಿ ಉದ್ಯಮಿ ಕೆ. ಎಂ. ಶೆಟ್ಟಿ ಅವರು ಮಾತನಾಡಿ, ಯಕ್ಷಗಾನ ಮತ್ತು ತಾಳಮದ್ದಲೆಯನ್ನು ಮುಂಬಯಿಯಂಥ ಮಹಾನಗರದಲ್ಲಿ ತುಳು ಕನ್ನಡಿಗರು ಜೀವಂತವಾಗಿರಿಸಿರುವುದು ಅಭಿಮಾನದ ಸಂಗತಿ. ಇವತ್ತು ಈರ್ವರು ಗಣ್ಯರನ್ನು ಅವರ ಸಮಾಜಸೇವೆಯನ್ನು ಗುರುತಿಸಿ ಸಮ್ಮಾನಿಸಿರುವುದು ಖುಷಿ ತಂದಿದೆ. ಲಯನ್‌ ಜಯರಾಮ ಶೆಟ್ಟಿ ಅವರ ಕಾರ್ಯವೈಖರಿಯನ್ನು ನಾನು ಹಲವಾರು ವರ್ಷದಿಂದ ನೋಡುತ್ತಾ ಬಂದಿದ್ದೇನೆ. ಮರೋಲ್‌ ಪರಿಸರದಲ್ಲಿ ಮಾತ್ರವಲ್ಲ ಬಂಟ ಸಮುದಾಯದಲ್ಲೂ ಅವರು ತಮ್ಮನ್ನು ತಾವು ತೊಡಗಿಸಿಕೊಂಡು ನಿರಂತರವಾಗಿ ಸೇವೆಯನ್ನು ಸಲ್ಲಿಸಿದವರು ಎಂದರು. ಸಮ್ಮಾನ ಸ್ವೀಕರಿಸಿ ಮಾತನಾಡಿದ ಲಯನ್‌ ಜಯರಾಮ ಶೆಟ್ಟಿ ಅವರು ನನ್ನ ಸಮಾಜಮುಖೀ ಚಿಂತನೆಗಳನ್ನು ಗುರುತಿಸಿ ಇಂದಿನ ದಿನ ತುಳು ಕನ್ನಡಿಗರ ಹಿತಚಿಂತಕರ ವೇದಿಕೆಯಲ್ಲಿ ಮಾಡಿದ ಸಮ್ಮಾನವನ್ನು ಸ್ವೀಕರಿಸಿ ಧನ್ಯನಾಗಿದ್ದೇನೆ. ಅನಿವಾರ್ಯ ಕಾರಣದಿಂದ ನಾನು ಹುಟ್ಟೂರಿನತ್ತ ಮುಖ ಮಾಡಿದ್ದರೂ ತಮ್ಮೆಲ್ಲರ ಪ್ರೀತಿಯನ್ನು ಹೊತ್ತುಕೊಂಡು ಹೋಗುತ್ತಿದ್ದೇನೆ ಎಂದು ನುಡಿದರು.

ವೇದಿಕೆಯಲ್ಲಿ ಉದ್ಯಮಿ ಸಮಾಜ ಸೇವಕ ಅಪ್ಪಣ್ಣ ಶೆಟ್ಟಿ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಸುಭಾಸ್‌ ಶೆಟ್ಟಿ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ನ್ಯಾಯವಾದಿ ರತ್ನಾಕರ ಶೆಟ್ಟಿ, ನ್ಯಾಯವಾದಿ ಗುಣಕರ ಶೆಟ್ಟಿ, ಪೊವಾಯಿ ಕನ್ನಡ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ಡಿ. ಕೆ. ಶೆಟ್ಟಿ, ಪೊವಾಯಿ ಕನ್ನಡ ಸಂಘದ ಅಧ್ಯಕ್ಷರಾದ ಅಶೋಕ್‌ ಶೆಟ್ಟಿ, ಸಾಂತೂರು, ಲಯನ್‌ ಶೋಭಾ ಶಂಕರ ಶೆಟ್ಟಿ, ಉದ್ಯಮಿ ಶಂಕರ ಶೆಟ್ಟಿ, ರಂಗನಟ ಭಾಸ್ಕರ ಸುವರ್ಣ ಸಸಿಹಿತ್ಲು, ಉದ್ಯಮಿ ವೇಣುಗೋಪಾಲ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು. ಸಾಹಿತಿ, ರಂಗನಟ, ಸಂಘಟಕ ಪೇತ್ರಿ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.