ಶೇ.25 ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಮೊಟಕು

2230 ತಾತ್ಕಾಲಿಕ ಚಾಲಕರ ವಜಾ

Team Udayavani, Oct 6, 2019, 5:38 AM IST

05KSDE8

ಕಾಸರಗೋಡು: ರಾಜ್ಯ ಹೈಕೋ ರ್ಟ್‌ನ ಆದೇಶ‌ ಪ್ರಕಾರ ಕೇರಳ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದಲ್ಲಿ ದುಡಿಯು ತ್ತಿದ್ದ 2230 ತಾತ್ಕಾಲಿಕ ಚಾಲಕರನ್ನು ಸೇವೆ ಯಿಂದ ವಜಾಗೈಯ್ಯಲಾಗಿದ್ದು, ಅದು ರಾಜ್ಯ ದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆಗಳನ್ನು ತೀವ್ರವಾಗಿ ಅಸ್ತವ್ಯಸ್ತಗೊಳಿಸ ತೊಡಗಿದೆ.

ರಾಜ್ಯದಲ್ಲಿ ಒಟ್ಟು 5312 ಕೆಎಸ್‌ಆರ್‌ಟಿಸಿ ಸೇವೆಗಳಿದ್ದು, ಅದರಲ್ಲಿ 580 ಸೇವೆಗಳನ್ನು ರದ್ದುಗೊಳಿಸಬೇಕಾಗಿ ಬಂದಿತ್ತು. ಕೆಲವು ಜಿಲ್ಲೆಗಳಲ್ಲಿ ರಜೆಯಲ್ಲಿರುವ ಚಾಲಕರು ಮತ್ತು ಇತರ ಚಾಲಕರಿಗೆ ಡಬಲ್‌ ಡ್ನೂಟಿ ನೀಡಿ ಗುರುವಾರ ಬಸ್‌ ಸೇವೆಯನ್ನು ಬಹುತೇಕ ನಿಯಂತ್ರಿಸಲಾಗಿತ್ತು. ಆದರೆ ಡಬಲ್‌ ಡ್ನೂಟಿ ಮಾಡಿದ ಚಾಲಕರು ಶುಕ್ರವಾರವೂ ಕರ್ತವ್ಯಕ್ಕೆ ಹಾಜರಾಗದೆ ಇರುವುದರಿಂದ ಅದು ಇನ್ನಷ್ಟು ಹೆಚ್ಚು ಬಸ್ಸು ಸೇವೆ ಮೊಟಕುಗೊಳಿಸುವಂತೆ ಮಾಡಿದೆ. ಇದರಿಂದಾಗಿ ಈಗಾಗಲೇ ಶೇಕಡ 25ರಷ್ಟು ಬಸ್‌ ಸೇವೆ ಮೊಟಕುಗೊಂಡಿದೆ.

ಕೆಎಸ್‌ಆರ್‌ಟಿಸಿಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸುತ್ತಿರುವ ಚಾಲಕರು ಮತ್ತು ನಿರ್ವಾಹಕರನ್ನು ವಜಾಗೈಯ್ಯುವಂತೆ ಹೈಕೋರ್ಟ್‌ ಈ ಹಿಂದೆಯೇ ಆದೇಶ ನೀಡಿತ್ತು. ಅದರಂತೆ ತಾತ್ಕಾಲಿಕ ಸಿಬ್ಬಂದಿ ಗಳನ್ನು ವಜಾಗೈಯ್ಯಲಾಗಿದ್ದರೂ ವಜಾಗೈಯ್ಯ ಲಾಗಿದ್ದ ಚಾಲಕರನ್ನು ದಿನ ವೇತನ ಆಧಾರದಲ್ಲಿ ಬಳಿಕ ನೇಮಿಸಲಾಗಿತ್ತು. ಈ ಕ್ರಮದ ವಿರುದ್ಧ ಪಿಎಸ್‌ಸಿ ರ್‍ಯಾಂಕ್‌ ಹೋಲ್ಡರ್‌ ಅಸೋಸಿಯೇಶನ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಎಲ್ಲಾ ತಾತ್ಕಾಲಿಕ ಸಿಬ್ಬಂದಿಗಳನ್ನು ಪೂರ್ಣವಾಗಿ ಹೊರತು ಪಡಿಸುವಂತೆ ಕಠಿಣ ಆದೇಶ ನೀಡಿತ್ತು. ಅದರಂತೆ 2230 ತಾತ್ಕಾಲಿಕ ಚಾಲಕರನ್ನು ಕೆಎಸ್‌ಆರ್‌ಟಿಸಿ ಸೇವೆಯಿಂದ ವಜಾಗೈದಿದೆ.

ಕೆಎಸ್‌ಆರ್‌ಟಿಸಿಯಲ್ಲಿ ಒಂದೇ ಬಾರಿ ಇಷ್ಟೊಂದು ಸಂಖ್ಯೆಯಲ್ಲಿ ಚಾಲಕರನ್ನು ಸೇವೆಯಿಂದ ಹೊರತುಪಡಿಸಿರುವುದು ಸೇವೆಗಳ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಮಾತ್ರವಲ್ಲದೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದ ಪ್ರಯಾಣಿಕರು ಹೆಚ್ಚಿನ ಸಂಕಷ್ಟ ಅನುಭವಿಸುವಂತಾಗಿದೆ.

ಕಾಸರಗೋಡು ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಈಗಾಗಲೇ 47 ಚಾಲಕರ ಹುದ್ದೆಗಳು ತೆರವು ಬಿದ್ದಿದೆ. ಆದರೆ ಅದಕ್ಕೆ ಈ ತನಕ ಖಾಯಂ ಚಾಲಕರನ್ನು ನೇಮಕಾತಿ ನಡೆದಿಲ್ಲ. ತಾತ್ಕಾಲಿಕ ಚಾಲಕರ ಸೇವೆ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕಾಸರಗೋಡು ಡಿಪ್ಪೋದಿಂದ ಚಂದ್ರಗಿರಿ ರೂಟಿನಲ್ಲಿ -2, ಪಾಣತ್ತೂರು ರೂಟ್‌ನಲ್ಲಿ -2 ಮತ್ತು ಚಿತ್ತಾರಿಕಲ್‌ ರೂಟ್‌ನಲ್ಲಿ -1 ಕೆಎಸ್‌ಆರ್‌ಟಿಸಿ ಸೇವೆ ಮೊಟಕುಗೊಳಿಸಬೇಕಾಗಿ ಬಂದಿದೆ. ಹೊಸದುರ್ಗ ಸಬ್‌ ಡಿಪೋದಿಂದಲೂ ಎರಡು ಬಸ್‌ ಸೇವೆ ಮೊಟಕುಗೊಳಿಸಲಾಗಿದೆ. ಇತರ ಜಿಲ್ಲೆಗಳ ಹಾಗೆ ಕಾಸರಗೋಡು ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಸೇವೆಗಳ ಮೇಲೆ ಈ ಸಮಸ್ಯೆ ಹೆಚ್ಚಿನ ಪರಿಣಾಮ ಬೀರಿಲ್ಲ.

ಮೊದಲೇ ನಷ್ಟದ ಹಾದಿಯಲ್ಲಿ ಸಾಗುತ್ತಿರುವ ಕೆಎಸ್‌ಆರ್‌ಟಿಸಿ ಈಗ ಚಾಲಕರಿಲ್ಲದೆ ಬಸ್ಸು ಸೇವೆ ಮೊಟಕುಗೊಳಿಸಬೇಕಾಗಿ ಬಂದಿರುವುದು ಕೆಎಸ್‌ಆರ್‌ಟಿಸಿಯನ್ನು ಇನ್ನಷ್ಟು ಆರ್ಥಿಕ ನಷ್ಟದತ್ತ ತಳ್ಳುವಂತೆ ಮಾಡಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.