25 ಕೋ.ರೂ. ವೆಚ್ಚದಲ್ಲಿ ಹೈಟೆಕ್‌ ಕ್ರೀಡಾ ಸಂಕೀರ್ಣ

ಶಟಲ್‌-ಬ್ಯಾಡ್ಮಿಂಟನ್‌-ಕಬಡ್ಡಿಗೆ ಮಲ್ಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌

Team Udayavani, Oct 6, 2019, 5:36 AM IST

0510MLR21

ಮಹಾನಗರ: ಕರಾವಳಿಯ ಅನೇಕ ಕ್ರೀಡಾಪಟುಗಳು ಈಗಾಗಲೇ ದೇಶ-ವಿದೇಶಗಳ‌ಲ್ಲಿ ಮಿಂಚುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಗರದಲ್ಲಿ ಅತ್ಯಾ ಧುನಿಕ ಸೌಲಭ್ಯಗಳನ್ನು ಹೊಂದಿರುವ ಹೊಸ ಕ್ರೀಡಾ ಸಂಕೀರ್ಣ ತಲೆಯೆತ್ತಲಿದೆ.

ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ನಗರದ ಉರ್ವ ಹಳೆ ಪೊಲೀಸ್‌ ನಿಲ್ದಾಣ ಬಳಿ ಶೀಘ್ರದಲ್ಲೇ ಈ ಮಲ್ಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ ತಲೆ ಎತ್ತಲಿದೆ. ಮಲ್ಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ ಕಾಮಗಾರಿಗೆಂದು ಸ್ಮಾರ್ಟ್‌ ಸಿಟಿ ಯೋಜನೆಯಡಿಯಲ್ಲಿ 5 ಕೋಟಿ ರೂ. ಬಿಡುಗಡೆಯಾಗಿದ್ದು, ಹೆಚ್ಚುವರಿ 5 ಕೋ. ರೂ.ಗೆ ಬೇಡಿಕೆ ಸಲ್ಲಿಸಲಾಗಿದೆ. ಉಳಿದ 15 ಕೋಟಿ ರೂಗೆ ಪ್ರತಿಷ್ಠಿತ ಸಂಸ್ಥೆಗಳ ಸಿಎಸ್‌ಆರ್‌ ಫಂಡ್‌ನಿಂದ ವಿನಿಯೋಗಿಸಲು ಮಾತುಕತೆ ನಡೆಯುತ್ತಿದೆ. ಅಂದುಕೊಂಡಂತೆ ಆದರೆ ಇನ್ನು ಕೆಲವೇ ತಿಂಗಳುಗಳಲ್ಲಿ ಮಲ್ಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ ಕಾಮಗಾರಿ ಉರ್ವದಲ್ಲಿ ಆರಂಭಗೊಳ್ಳಲಿದೆ.

ಸುಮಾರು 1.23 ಎಕ್ರೆ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಈ ಕಾಂಪ್ಲೆಕ್ಸ್‌ ತಲೆಯೆತ್ತಲಿದ್ದು, ಕಬಡ್ಡಿ, ಶಟಲ್‌ ಬ್ಯಾಡ್ಮಿಂಟನ್‌, ಸಣ್ಣದಾದ ಈಜುಕೊಳ, ವಾಲಿಬಾಲ್‌ ಕ್ರೀಡಾಂಗಣ ಇರಲಿವೆ. ಕೆಳ ಅಂತಸ್ತಿನಲ್ಲಿ ವಿಶಾಲವಾದ ಪಾರ್ಕಿಂಗ್‌ ವ್ಯವಸ್ಥೆ, ಎದುರುಗಡೆ ಕೆಲವು ವಾಣಿಜ್ಯ ಮಳಿಗೆಗಳು ಇರಲಿವೆ.

ಮಂಗಳಾ ಕ್ರೀಡಾಂಗಣ ಬಳಿಯ ಶ್ರೀನಿವಾಸ್‌ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಸದ್ಯ ಕೇವಲ 4 ಬ್ಯಾಡ್ಮಿಂಟನ್‌ ಕೋರ್ಟ್‌ ಇದೆ. ಆದರೆ ಆಸಕ್ತ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಿದೆ. ಒಂದೊಂದು ಬ್ಯಾಚ್‌ಗೆ 1 ಗಂಟೆ ಸಮಯ ನಿಗದಿ ಪಡಿಸಿದರೂ ಕ್ರೀಡಾಸಕ್ತರಿಗೆ ತರಬೇತಿ ನೀಡಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಹೆಚ್ಚಿನ ಕ್ರೀಡಾಪಟುಗಳು ಖಾಸಗಿ ಸಂಸ್ಥೆಯ ಕೋರ್ಟ್‌ ಕಡೆ ಮುಖ ಮಾಡುತ್ತಿದ್ದಾರೆ. ಮಂಗಳಾ ಸ್ವಿಮ್ಮಿಂಗ್‌ ಪೂಲ್‌ಗೆ ಈಜು ಕಲಿಯಲು ಬರುವ ಮಂದಿಯೂ ಹೆಚ್ಚಾಗಿದ್ದಾರೆ. ಕರಾವಳಿಯಲ್ಲಿ ಹೆಚ್ಚಿನ ತರಬೇತಿಗೆ ಕೋರ್ಟ್‌ನ ಕೊರತೆ ಇದೆ. ಈ ನಿಟ್ಟಿ ನಲ್ಲಿ ಮಲ್ಟಿಸ್ಪೋರ್ಟ್ಸ್ ಕಾಂಪ್ಲೆಕ್ಸ್‌ ನಿರ್ಮಾಣವಾದರೆ ಕಬಡ್ಡಿಗೂ ಮತ್ತಷ್ಟು ಉತ್ತೇಜನ ನೀಡಿದಂತಾಗಬಹುದು.

ಪ್ರೋತ್ಸಾಹ ಅಗತ್ಯ
ಮಂಗಳೂರಿನಲ್ಲಿ ಸ್ವಿಮ್ಮಿಂಗ್‌, ಶಟಲ್‌ ಬ್ಯಾಡ್ಮಿಂಟನ್‌, ಫುಟ್‌ಬಾಲ್‌ ಕ್ರೀಡೆಗೆ ಮತ್ತಷ್ಟು ಪ್ರೋತ್ಸಾಹ ಬೇಕಿದೆ. ಶಟಲ್‌ ಬ್ಯಾಡ್ಮಿಂಟನ್‌ಗೆ ಸರಕಾರದ ವತಿಯಿಂದ ಸದ್ಯ ಇರುವಂತಹ 4 ಕೋರ್ಟ್‌ಗಳು ಸಾಕಾಗುತ್ತಿಲ್ಲ. ಹೆಚ್ಚಿನ ಮಂದಿ ಖಾಸಗಿ ಕೋರ್ಟ್‌ಗಳಿಗೆ ತೆರಳಿ ಆಡುತ್ತಿದ್ದಾರೆ. ಉರ್ವದಲ್ಲಿ ಮಲ್ಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ ಆದರೆ ಕ್ರೀಡಾಸಕ್ತರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ.
 - ಪ್ರದೀಪ್‌ ಡಿ’ಸೋಜಾ, ಯುವಜನ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ

ಕ್ರೀಡಾ ಪಟುಗಳಿಗೆ ಉತ್ತೇಜನ
ಕರಾವಳಿ ಭಾಗದ ಅನೇಕ ಕ್ರೀಡಾಪಟುಗಳು ಈಗಾಗಲೇ ದೇಶ-ವಿದೇಶಗಳಲ್ಲಿ ಮಿಂಚುತ್ತಿದ್ದಾರೆ. ಅವರ ತರಬೇತಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ಮಲ್ಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ ನಿರ್ಮಾಣವಾಗಲಿದೆ. ಕೊನೆಯ ಹಂತದ ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ.
 - ವೇದವ್ಯಾಸ ಕಾಮತ್‌, ಶಾಸಕ

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.