ಕೊಳ್ನಾಡ್: ಲಾರಿಗಳು ಢಿಕ್ಕಿ; ಓರ್ವ ಚಾಲಕನಿಗೆ ಗಂಭೀರ ಗಾಯ
Team Udayavani, Oct 6, 2019, 1:28 AM IST
ಮೂಲ್ಕಿ: ಇಲ್ಲಿಗೆ ಸಮೀಪದ ಕೊಳ್ನಾಡಿನಲ್ಲಿ ಶನಿವಾರ ರಾತ್ರಿ ಲಾರಿಗಳೆರಡು ಢಿಕ್ಕಿ ಹೊಡೆದು ಓರ್ವ ಚಾಲಕ ಗಂಭೀರ ವಾಗಿ ಗಾಯಗೊಂಡಿದ್ದಾರೆ.
ಕೊಳ್ನಾಡಿನ ಪೆಟ್ರೋಲ್ ಪಂಪ್ನಲ್ಲಿ ಇಂಧನ ತುಂಬಿಸಿ ಉಡುಪಿ ಕಡೆಗೆ ಬರಲೆಂದು ಹೆದ್ದಾರಿ ದಾಟುತ್ತಿದ್ದ ಲಾರಿಗೆ ಮಂಗಳೂರು ಕಡೆಯಿಂದ ಬಂದ ಲಾರಿಯು ಢಿಕ್ಕಿ ಹೊಡೆ ದಿದೆ. ಪರಿಣಾಮ ಢಿಕ್ಕಿ ಹೊಡೆದ ಲಾರಿಯ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಕಾಲುಗಳು ಸಂಪೂರ್ಣ ಜರ್ಝರಿತವಾಗಿದೆ. ಲಾರಿಯಲ್ಲಿ ಸಿಲುಕಿಕೊಂಡಿದ್ದ ಅವ ರನ್ನು ಹೊರ ತರಲು ಸ್ಥಳೀಯರು ತೀವ್ರ ಶ್ರಮಪಟ್ಟರು.
ಲಾರಿಗಳು ಒಂದಕ್ಕೊಂದು ಸಿಲುಕಿಕೊಂಡಿದ್ದು, ಕ್ರೇನ್ ಬಳಸಿ ಬೇರ್ಪಡಿಸಲಾಯಿತು. ಪೊಲೀಸರು ಹಾಗೂ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸಹಕರಿಸಿದರು. ಗಾಯಾಳುವಿನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸುಮಾರು ಮುಕ್ಕಾಲು ತಾಸು ಸಂಚಾರ ವ್ಯತ್ಯಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ