ಸಂತ್ರಸ್ತರಿಗೆ ಅಗತ್ಯ ವಸ್ತು ವಿತರಣೆ
Team Udayavani, Oct 7, 2019, 1:47 PM IST
ಭಾಲ್ಕಿ: ಉತ್ತರ ಕರ್ನಾಟದ ನೆರೆಸಂತ್ರಸ್ತರಿಗೆ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪ್ಟದ್ದೇವರು ಬಟ್ಟೆ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ಶ್ರೀಗಳು, ಎಡದ ಕೈಯಲ್ಲಿ ಲಿಂಗಪೂಜೆ, ಬಲದ ಕೈಯಲ್ಲಿ ಜಂಗಮ ದಾಸೋಹ
ಮಾಡುವುದು ಲಿಂಗಾಯತ ಧರ್ಮದ ಪ್ರಮುಖ ಸಿದ್ಧಾಂತವಾಗಿದೆ. ಸಮಾಜದಲ್ಲಿ ಕಷ್ಟಪಡುವ ಜನರನ್ನು ಬಡವರನ್ನು ನೋಡಿ ಕಣ್ಣೀರು ಒರೆಸುವುದು ಮಾನವೀಯ ಕಾರ್ಯವಾಗಿದೆ. ಹೀಗೆ ಬಸವಾದಿ ಶರಣರ ಆಸೆಯದಂತೆ ಭಾಲ್ಕಿ ಹಿರೇಮಠವು ಸದಾ ಮಾನವೀಯ ಕಾರ್ಯಗಳನ್ನು ಮಾಡುತ್ತ ಬಂದಿದೆ.
ಈ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ನೆರೆ ಸಂತ್ರಸ್ತ ಸಾವಿರಾರು ಜನರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡೋಣವೆಂದು ನಮ್ಮ ಹಿರೇಮಠ ಸಂಸ್ಥಾನ ವಿದ್ಯಾಪೀಠದ ವತಿಯಿಂದ 2.7 ಲಕ್ಷ ರೂ. ಮೌಲ್ಯಗದ ಸಾಮಗ್ರಿಗಳನ್ನು ಖರೀದಿಸಿ ಸಂತ್ರಸ್ತರಿಗೆ ವಿತರಿಸಲಾಗಿದೆ ಎಂದು ಹೇಳಿದರು.
ಶ್ರೀಗಳು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸುರಪಾಲಿ ಗ್ರಾಮಕ್ಕೆ ಭೇಟಿ ನೀಡಿ ಒಂದು ಸಾವಿರ ಮಹಿಳೆಯರಿಗೆ ಸೀರೆ, ಕುಪ್ಪಸಗಳು ಮತ್ತು ಒಂದು ಸಾವಿರ ಜನ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಕಂಪಾಸ್, ನೋಟ್ ಬುಕ್ ವಿತರಿಸಿದರು. ಹುಲ್ಯಾಳ ಗ್ರಾಮದ ಗುರುದೇವಾಶ್ರಮದ ಶ್ರೀ ಹರ್ಷಾನಂದ ಮಹಾಸ್ವಾಮಿಗಳು, ಬಸವಕಲ್ಯಾಣ ಅನುಭವಮಂಟಪ ಸಂಚಾಲಕ ಶ್ರೀ ಶಿವಾನಂದ ಸ್ವಾಮಿಗಳು, ಶ್ರೀ ಬಸವಲಿಂಗ ಸ್ವಾಮಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ