“ಥಳಿತ” ವಿದೇಶಿ ಶಬ್ದ, ಭಾರತೀಯರ ಮೇಲೆ ಆ ಪದ ಹೇರಬೇಡಿ; ಮೋಹನ್ ಭಾಗವತ್
Team Udayavani, Oct 8, 2019, 3:47 PM IST
ನಾಗ್ಪುರ್: “ಥಳಿತ” ಎಂಬುದು ವಿದೇಶಿ ರಚನೆಯ ಪದವಾಗಿದೆ. ಹೀಗಾಗಿ ಆ ಶಬ್ದವನ್ನು ಭಾರತದಲ್ಲಿ ನಡೆಯುವ ಸನ್ನಿವೇಶಗಳಿಗೆ ಬಳಸಬೇಡಿ, ಇದರಿಂದ ದೇಶದ ಗೌರವಕ್ಕೆ ಧಕ್ಕೆಯಾಗಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ್(ಆರ್ ಎಸ್ ಎಸ್) ದ ವರಿಷ್ಠ ಮೋಹನ್ ಭಾಗವತ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಮಂಗಳವಾರ ಮಹಾರಾಷ್ಟ್ರದ ನಾಗಪುರದ ರೇಶಿಮ್ ಬಾಗ್ ನಲ್ಲಿ ವಿಜಯದಶಮಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಂಪು ಥಳಿತ ಎಂಬ ಪದ ಭಾರತೀಯ ಮೂಲದ್ದಲ್ಲ, ಇದು ಪ್ರತ್ಯೇಕವಾದ ಧಾರ್ಮಿಕ ಹಿನ್ನೆಲೆಯಲ್ಲಿ ಬಂದಿರುವ ಪದವಾಗಿದೆ. ಆ ನಿಟ್ಟಿನಲ್ಲಿ ಅಂತಹ ಪದವನ್ನು ಭಾರತೀಯರ ಮೇಲೆ ಹೇರಿಕೆ ಮಾಡಲು ಹೋಗಬೇಡಿ ಎಂದು ಹೇಳಿದರು.
ಅಲ್ಲದೇ ಈ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಪಡಿಸಿರುವ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆದರೆ ಕೆಲವು ಪೂರ್ವಾಗ್ರಹ ಪೀಡಿತ ವ್ಯಕ್ತಿಗಳಿಗೆ ದೇಶ ಬಲಿಷ್ಠ ಹಾಗೂ ವಿಶಾಲವಾಗುವುದು ಬೇಕಾಗಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿ ನಾಗರಿಕರು ಸಾಮರಸ್ಯವನ್ನು ಕಾಪಾಡಿಕೊಂಡು, ಪ್ರತಿಯೊಬ್ಬರು ಭಾರತದ ಕಾನೂನಿಗೆ ಅನುಗುಣವಾಗಿ ಬದುಕಬೇಕಾಗಿದೆ ಎಂದು ಭಾಗವತ್ ಈ ಸಂದರ್ಭದಲ್ಲಿ ಹೇಳಿದರು. ಭಾರತ ಹಿಂದೂ ದೇಶವಾಗಿದೆ, ಇದು ಹಿಂದೂರಾಷ್ಟ್ರವಾಗಲಿದೆ ಎಂದು ಭಾಗವತ್ ಮತ್ತೊಮ್ಮೆ ಹಿಂದೂದೇಶದ ಬಗ್ಗೆ ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ
ಭಗವಾನ್ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್ ಅನುಮತಿ
Special Marriage Act ಅಡಿಯಲ್ಲಿ ಹಿಂದೂ-ಮುಸ್ಲಿಂ ವಿವಾಹ ಮಾನ್ಯವಲ್ಲ: ಹೈಕೋರ್ಟ್
ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ
Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ
Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ
Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ
Mangaluru ನಮಾಜ್ ಪ್ರಕರಣ: ಬಿ ರಿಪೋರ್ಟ್ ಸಲ್ಲಿಕೆ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ
TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್