ರೋಹಿತ್ ಶರ್ಮ ಜೀವನಶ್ರೇಷ್ಠ ಸಾಧನೆ
ಐಸಿಸಿ ಟೆಸ್ಟ್ ಬ್ಯಾಟ್ಸ್ಮನ್ ರ್ಯಾಂಕಿಂಗ್
Team Udayavani, Oct 9, 2019, 5:13 AM IST
ದುಬಾೖ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ಶತಕ ಸಿಡಿಸಿ ಮಿಂಚಿದ್ದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮ ಅವರು ನೂತನ ಐಸಿಸಿ ಟೆಸ್ಟ್ ಬ್ಯಾಟ್ಸ್ಮನ್ ರ್ಯಾಂಕಿಂಗ್ನಲ್ಲಿ ಜೀವನಶ್ರೇಷ್ಠ ಸಾಧನೆಗೈದಿದ್ದಾರೆ.
ಆರಂಭಿಕರಾಗಿ ತನ್ನ ಚೊಚ್ಚಲ ಟೆಸ್ಟ್ನ ಎರಡೂ ಇನ್ನಿಂಗ್ಸ್ಗಳಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅವರು ರ್ಯಾಂಕಿಂಗ್ನಲ್ಲಿ ಭಾರೀ ಜಿಗಿತ ಕಂಡಿದ್ದಾರೆ. 36 ಸ್ಥಾನಗಳ ಜಿಗಿತ ಕಂಡಿರುವ ರೋಹಿತ್ ತನ್ನ ಜೀವನಶ್ರೇಷ್ಠ 17ನೇ ಸ್ಥಾನವನ್ನು ಪಡೆದಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ ಟೆಸ್ಟ್ನಲ್ಲಿ ಅವರು 176 ಮತ್ತು 127 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ರೋಹಿತ್ ಅವರ ಸಾಹಸದ ಬ್ಯಾಟಿಂಗ್ನಿಂದಾಗಿ ಟೀಂ ಇಂಡಿಯಾ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆಯಿತು. ಇದೇ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ದ್ವಿಶತಕ ಸಾಧನೆ ಮಾಡಿದ್ದ ಕನ್ನಡಿಗ ಮಾಯಾಂಕ್ ಅಗರ್ವಾಲ್ ಕೂಡ ರ್ಯಾಂಕಿಂಗ್ ಪಟ್ಟಿಯಲ್ಲಿ 25ನೇ ಸ್ಥಾನಕ್ಕೇರಿದ ಸಾಧನೆ ಮಾಡಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನವನ್ನು ಉಳಿಸಿಕೊಂಡಿದ್ದರೂ ರ್ಯಾಂಕಿಂಗ್ ಪಟ್ಟಿಯ ಅಂಕಗಳಲ್ಲಿ ಮೊದಲ ಬಾರಿ 900 ಪ್ಲಸ್ ಅಂಕಕ್ಕಿಂತ ಕಡಿಮೆ ಪಡೆದಿದ್ದಾರೆ. ಪ್ರಸ್ತುತ ಅವರು 899 ಅಂಕ ಹೊಂದಿದ್ದಾರೆ. ಕೊಹ್ಲಿ ಅವರಿಗಿಂತ 38 ಅಂಕ ಹೆಚ್ಚು ಹೊಂದಿರುವ ಆಸೀಸ್ ಆಟಗಾರ ಸ್ಟೀವನ್ ಸ್ಮಿತ್ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಟೆಸ್ಟ್ ಬೌಲಿಂಗ್ನಲ್ಲಿ ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಅಗ್ರ ಹತ್ತ ರೊಳಗಿನ ಸ್ಥಾನಕ್ಕೆ ಮರಳಿದ್ದಾರೆ. ವಿಶಾಖಪಟ್ಟಣ ಟೆಸ್ಟ್ನಲ್ಲಿ 8 ವಿಕೆಟ್ ಕಿತ್ತಿರುವ ಅವರು ನಾಲ್ಕು ಸ್ಥಾನ ಏರಿ 10ನೇ ಸ್ಥಾನ ತಲುಪಿದ್ದಾರೆ.
ಅಗ್ರಸ್ಥಾನದಲ್ಲಿ ಭಾರತ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಗೆದ್ದ ಕಾರಣ ಭಾರತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 40 ಅಂಕ ಗಳಿಸಿದ್ದು ಒಟ್ಟಾರೆ 160 ಅಂಕ ಸಂಪಾದಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಸರಣಿ ಗೆದ್ದ ಕಾರಣ ತಂಡ 120 ಅಂಕ ಗಳಿಸಿತ್ತು. ನ್ಯೂಜಿಲ್ಯಾಂಡ್ ಮತ್ತು ಶ್ರೀಲಂಕಾ ತಲಾ 60 ಅಂಕ ಹೊಂದಿದ್ದರೆ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್ ತಲಾ 56 ಅಂಕ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್ ರಾಯಲ್ಸ್ ಸವಾಲು
CSK; ಬಸ್ ಕಂಡಕ್ಟರ್ಗಳಿಗೆ ಚೆನ್ನೈ ಕಿಂಗ್ಸ್ನಿಂದ 8 ಸಾವಿರ ಅಗತ್ಯ ಗಿಫ್ಟ್ !
Central government ಒಪ್ಪಿದರೆ ಪಾಕ್ಗೆ ಭಾರತ ಕ್ರಿಕೆಟ್ ತಂಡ: ರಾಜೀವ್ ಶುಕ್ಲ
T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್ ಗೆಲುವು: 4-0 ಮುನ್ನಡೆ
Pakistan ಟಿ20 ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್ ಬಹುಮಾನ
MUST WATCH
ಹೊಸ ಸೇರ್ಪಡೆ
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Rachana inder: ಮರ್ಡರ್ ಮಿಸ್ಟರಿ 4 ಎನ್ 6