ಬಳಕೆಯಾಗದೆ ಪಾಳು ಬಿದ್ದ ಶೌಚಾಲಯ

15 ವರ್ಷದ ಹಿಂದೆ ವಿಶೇಷ ಅನುದಾನದಲ್ಲಿ ನಿರ್ಮಾಣಮೂಲ ಸೌಲಭ್ಯವಿಲ್ಲದೆ ಹಾಳುಕೊಂಪೆಯಾದ ಕಟ್ಟಡ

Team Udayavani, Oct 9, 2019, 11:40 AM IST

09-October-5

„ಶಶಿಕಾಂತ ಕೆ.ಭಗೋಜಿ
ಹುಮನಾಬಾದ: ಪಟ್ಟಣದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯ ಲಕ್ಷಾಂತರ ರೂಪಾಯಿ ಅನುದಾನದಲ್ಲಿ 15 ವರ್ಷಗಳ ಹಿಂದೆ ನಿರ್ಮಿಸಿದ್ದ ಸಮುದಾಯ ಶೌಚಾಲಯಗಳು ನಿರ್ವಹಣೆ ಕೊರತೆ ಕಾರಣ ಬಳಕೆ ಇಲ್ಲದೇ ಪಾಳು ಬಿದ್ದಿವೆ. ಉಳ್ಳವರು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಬಹುದು. ಆದರೆ ಕೊಳಚೆ ಪ್ರದೇಶದ ಬಡ ಹಾಗೂ ಮಧ್ಯಮ ವರ್ಗದ ಜನರು ಎದುರಿಸುತ್ತಿರುವ ಶೌಚಾಲಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಆ ಅವಧಿಯಲ್ಲಿ ಶಾಸಕರಾಗಿದ್ದ ರಾಜಶೇಖರ ಪಾಟೀಲ ಅವರು ಎಸ್‌. ಎಂ.ಕೃಷ್ಣ ನೇತೃತ್ವದಲ್ಲಿ ಸರ್ಕಾರದಲ್ಲಿ ಸಂಬಂಧಪಟ್ಟವರ ಮೇಲೆ ಒತ್ತಡ ಹೇರಿ ತಲಾ ರೂ. 4.5ಲಕ್ಷ ವೆಚ್ಚದಲ್ಲಿ ಪಟ್ಟಣದ ಏಳು ಓಣಿಗಳಲ್ಲಿ ಶೌಚಾಲಯ ನಿರ್ಮಿಸಿದ್ದರು.

ಜನತಾ ಕಾಲೋನಿ, ಶಿವಪೂರ ಓಣಿ, ಧನಗರಗಡ್ಡಾ, ಕೋಳಿವಾಡಾ, ಜೇರಪೇಟೆ, ಇಂದಿರಾನಗರ ಎಂ.ಪಿ. ತೋಟದ ರಸ್ತೆ ಮಾರ್ಗಮಧ್ಯ ಸೇರಿದಂತೆ ಒಟ್ಟು ಏಳು ಕೊಳಚೆ ಪ್ರದೇಶಗಳಲ್ಲಿ ಈ ಶೌಚಾಲಯಗಳನ್ನು ಕೊಳಚೆ ನಿರ್ಮೂಲನಾ ಮಂಡಳಿಯೇ ನಿರ್ಮಿಸಿದೆ. ಅತ್ಯಂತ ಅವಶ್ಯವಿರುವ ನೀರು, ವಿದ್ಯುತ್‌ ಸೌಲಭ್ಯ ಮೊದಲಾದ ಯಾವುದೇ ಮೂಲಸೌಲಭ್ಯ ಕಲ್ಪಿಸದೇ ಕೇವಲ ಕಟ್ಟಡ ನಿರ್ಮಿಸಿ ಕೈ ತೊಳೆದುಕೊಂಡಿದೆ. ಆದರೆ ಈ ವರೆಗೆ ಪುರಸಭೆಗೆ ಅವುಗಳನ್ನು ಹಸ್ತಾಂತರಿಸಿಲ್ಲ. ಬಡ ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಶಾಸಕ ಪಾಟೀಲ ಅವರು ವಿಶೇಷ ಕಾಳಜಿ ವಹಿಸಿ, ಸರ್ಕಾರದ ಮೇಲೆ ಒತ್ತಡ ಹೇರಿ ಅನುದಾನವೇನೋ ತಂದರು. ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ತರಾತುರಿಯಲ್ಲಿ ಕಟ್ಟಡ ನಿರ್ಮಿಸಿ, ಕೈ ತೊಳೆದುಕೊಂಡಿದ್ದಾಯಿತು. ಆದರೇ ಅಪೂರ್ಣ ಸ್ಥಿತಿಯಲ್ಲಿರುವ ಅವುಗಳನ್ನು ಪೂರ್ಣಗೊಳಿಸದೇ ಇರಲು ಕಾರಣವೇನು ಎಂಬುದರ ಬಗ್ಗೆ ಸಂಬಂಧಪಟ್ಟವರನ್ನು ಈ ವರೆಗೆ ಗದರಿಸಿ ಕೇಳುವ ಧೈರ್ಯವನ್ನು ಯಾರೊಬ್ಬ ಚುನಾಯಿತ ಪ್ರತಿನಿಧಿಗಳೂ ಮಾಡದಿರುವುದು ನೋವಿನ ಸಂಗತಿ.

ಗಿಡಗಂಟೆಗಳ ತಾಣ: ಹೀಗೆ ನಿರ್ವಹಣೆ ಇಲ್ಲದ ಕಾರಣ ನಿರ್ಮಿಸಿರುವ ಎಲ್ಲ ಶೌಚಾಲಯ ಕಟ್ಟಡಗಳ ಎದುರು ಗಿಡಗಂಟೆ ಬೆಳೆದಿವೆ. ಮಳೆ ಗಾಳಿಗೆ ಛಾವಣಿ ಮೇಲೆ ಮಣ್ಣು ಬಿದ್ದು ಹುಲ್ಲುನಾಟಿ ಕುಸಿಯಲು ಇಂದು ನಾಳೆ ಎಂದು ಎಣೆಕೆ ಮಾಡುವ ಸ್ಥಿತಿಯಲ್ಲಿವೆ. ಸಾರ್ವಜನಿಕರ ಶೌಚಕ್ಕಾಗಿ ನಿರ್ಮಿಸಿದ ಈ ಕಟ್ಟಡಗಳು ಗಿಡಗಂಟೆಗಳಿಂದ ಆವೃತಗೊಂಡ ಕಾರಣ ಅದೊರಳಗೆ
ಜನ ಹೋಗಲು ಭಯಪಡುವಂತಾಗಿದೆ.

ಮೂರು ಹೊಸ ಶೌಚಾಲಯ: ಇದು 15 ವರ್ಷಗಳ ಹಿಂದಿನ ಕಥೆಯಾದರೆ 2013ರಲ್ಲಿ ಶಾಸಕ ರಾಜಶೇಖರ ಪಾಟೀಲ ಅವರೆ ವಿಶೇಷ ಮುತುವರ್ಜಿ ವಹಿಸಿ, ನಿರ್ಮಿಸಿದ ತಲಾ ರೂ.13ಲಕ್ಷಕ್ಕೂ ಅಧಿಕ ವೆಚ್ಚದ ಮೂರು ಹೈಟೆಕ್‌ ಶೌಚಾಲಯಗಳ ಪೈಕಿ ನ್ಯಾಯಾಲಯ ಪ್ರಾಂಗಣ, ಹಳೆ ತಹಶೀಲ್ದಾರ್‌ ಕಚೇರಿ ಎದುರಿನ ಶೌಚಾಲಯಗಳು ಅಡ್ಡಿಯಿಲ್ಲ ಎನ್ನುವ ಸ್ಥಿತಿಯಲ್ಲಿವೆ. ಆದರೆ ತಾಲೂಕು ಆಡಳಿತದ ಮಿನಿವಿಧಾನಸೌಧ ಪ್ರಾಂಗಣದಲ್ಲಿರುವ ಹೈಟೆಕ್‌ ಶೌಚಾಲಯದ ಸ್ಥಿತಿ ಗಂಭಿರವಾಗಿದೆ. 6 ವರ್ಷಗಳ ಹಿಂದೆ ನಿರ್ಮಿಸಿದ ಹೊಸ ಕಟ್ಟಡ ಸಹ ಹಳೆ ಕಟ್ಟಡದಂತೆ ಕಾಣುತ್ತಿದ್ದು, ಇವುಗಳ ಜೊತೆಗೆ ಅದೂ ಬಳಕೆ ಇಲ್ಲದೆಯೇ ಪಾಳು ಬಿದ್ದಿದೆ.
ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಇಲ್ಲಸಲ್ಲದ ನೆಪವೊಡ್ಡಿ ಕಾಕಹರಣ ಮಾಡದೇ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ಶೌಚಾಲಯಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ಉದ್ದೇಶಿತ ಕೆಲಸಕ್ಕೆ ಬಳಕೆ ಆಗುವಂತೆ ನೋಡಿಕೊಳ್ಳಬೇಕು. ಕರ್ತವ್ಯ ಬೇಜವಾಬ್ದಾರಿ ಪ್ರದರ್ಶಿಸುವವರ ವಿರುದ್ಧ ಕೇವಲ ಮೌಖೀಕವಾಗಿ ಎಚ್ಚರಿಕೆ ನೀಡದೇ ಮುಲಾಜಿಲ್ಲದೇ ಶಿಸ್ತುಕ್ರಮ ಜರುಗಿಸುವ ಮೂಲಕ ಅನೂಕೂಲ ಕಲ್ಪಿಸಬೇಕು ಎಂಬುದು ಕೊಳಚೆ ಪ್ರದೇಶ ನಿವಾಸಿಗಳ ಒತ್ತಾಸೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.