ಸಾರ್ವಜನಿಕರ ತೊಂದರೆಗಳಿಗೆ ತಕ್ಷಣ ಸ್ಪಂದಿಸಿ: ಕಿಶೋರಬಾಬು
Team Udayavani, Oct 9, 2019, 11:58 AM IST
ಕಲಘಟಗಿ: ಸಾರ್ವಜನಿಕರ ತೊಂದರೆಗಳಿಗೆ ತಕ್ಷಣ ಸ್ಪಂದಿಸಿ ಶಾಂತಿಯುತ ಹಾಗೂ ಸೌಹಾರ್ದಯುತ ಸಮಾಜ ನಿರ್ಮಿಸುವಲ್ಲಿ ಪೊಲೀಸ್ ಅಧಿಕಾರಿಗಳಲ್ಲದೇ ಸಿಬ್ಬಂದಿ ಪಾತ್ರವೂ ಬಹು ಮುಖ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರಬಾಬು ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಗೆ ಭೇಟಿ ನೀಡಿ ಗೌರವ ವಂದನೆ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿ ಧಿಯೊಂದಿಗೆ ಅವರು ಮಾತನಾಡಿದರು. ಜನರು ಶಾಂತಿಯುತವಾಗಿ ಸ್ನೇಹಜೀವಿಗಳಾಗಿ ಬಾಳಲು ಅವಕಾಶವನ್ನೀಯಬೇಕು. ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸದಾ ಸ್ನೇಹಹಸ್ತ ನೀಡುತ್ತಲಿದೆ. ಜನರೂ ಕೂಡಾ ಕಾನೂನು ಚೌಕಟ್ಟಿನಲ್ಲಿಯೇ ಬಾಳಬೇಕು ಎಂದರು.
ಸಿಬ್ಬಂದಿಯೂ ಕೂಡ ಕಾನೂನಿನ ಎಲ್ಲ ನೂತನ ತಿದ್ದುಪಡಿಗಳನ್ನು ಮನನ ಮಾಡಿಕೊಂಡು ಕಾರ್ಯ ನಿರತರಾದಲ್ಲಿ ಉತ್ತಮ ಸೇವೆ ನೀಡಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿಯೂ ಸಿಬ್ಬಂದಿಗೆ ತರಬೇತಿಯನ್ನು ನೀಡಲು ಕಾರ್ಯೋನ್ಮುಖರಾಗುವುದಾಗಿ ತಿಳಿಸಿದರು. ಇಲಾಖೆಯ ಕೆಲ ಕಡತಗಳನ್ನು ಪರಿಶೀಲನೆ ನಡೆಸಿದ ನಂತರ ಸಿಬ್ಬಂದಿ ಜತೆ ಚರ್ಚಿಸಿ ಕುಂದು ಕೊರತೆ ಆಲಿಸಿದರು. ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ವಿಜಯ ಬಿರಾದಾರ ಉಪಸ್ಥಿತರಿದ್ದರು. ನಂತರ ತಾಲೂಕಿನ ಮಿಶ್ರಿಕೋಟಿ ಹೊರವಲಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ