ರಾಹುಲ್ ಅಧ್ಯಕ್ಷಗಾದಿ ತೊರೆದಿರುವುದು ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ; ಸಲ್ಮಾನ್ ಖುರ್ಷಿದ್
Team Udayavani, Oct 9, 2019, 1:06 PM IST
ನವದೆಹಲಿ:2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಸ್ಥಾನ ಪಡೆಯದೇ ಇದ್ದ ಕಾರಣ ಭಾರೀ ಅವಮಾನ ಎದುರಿಸಿದ ನಂತರ ರಾಹುಲ್ ಗಾಂಧಿ ಪಕ್ಷದ ಚುಕ್ಕಾಣಿ ಹಿಡಿಯದೇ ಹೊರ ಹೋಗಿದ್ದರಿಂದಲೇ ಕಾಂಗ್ರೆಸ್ ಪಕ್ಷ ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಪಕ್ಷದ ಸೋಲಿಗೆ ಏನು ಕಾರಣ ಎಂಬುದನ್ನು ಕಂಡು ಹಿಡಿಯಬೇಕು. ದುರಾದೃಷ್ಟ ನಾವು ಪಕ್ಷದ ಅಧ್ಯಕ್ಷ ಸ್ಥಾನ ತೊರೆಯಬೇಡಿ ಎಂದು ಮನವಿ ಮಾಡಿಕೊಂಡಿದ್ದೇವೆ. ಆದರೂ ರಾಹುಲ್ ಅಧ್ಯಕ್ಷಗಾದಿಯಿಂದ ಕೆಳಗಿಳಿದಿದ್ದಾರೆ. ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕೆಂಬುದು ನಮ್ಮ ಆಶಯವಾಗಿತ್ತು. ಆದರೆ ಅವರ ನಿರ್ಧಾರವನ್ನು ನಾವು ಗೌರವಿಸಬೇಕಾಗಿದೆ ಎಂದು ಹೇಳಿದರು.
ಪಕ್ಷದೊಳಗಿನ ಬಿಕ್ಕಟ್ಟು, ಅಸಮಾಧಾನಗಳು ಮುಂಬರುವ ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅಡ್ಡಿಯಾಗಲಿದೆ ಎಂದು ಖುರ್ಷಿದ್ ವಿಶ್ಲೇಷಿಸಿದ್ದಾರೆ.
ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಚ್ಚಾಟ ಮಿತಿ ಮೀರಿದೆ. ಈ ಪರಿಸ್ಥಿತಿ ಮುಂದುವರಿದರೆ ಭವಿಷ್ಯದಲ್ಲಿ ಪಕ್ಷಕ್ಕೆ ಮಾರಕವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ