ಮೊಬೈಲ್‌ ಆ್ಯಪ್‌ ಬಳಸಿ ರಾಬರಿ: ಚಾಲಕರಿಗೆ ಹಲ್ಲೆ


Team Udayavani, Oct 10, 2019, 3:08 AM IST

mobile-app

ಬೆಂಗಳೂರು: ಬೈಕ್‌ ಸೇವೆ ಒದಗಿಸುವ “ಮೊಬೈಲ್‌ ಆ್ಯಪ್‌’ನ್ನು ದುರ್ಬಳಕೆ ಮಾಡಿಕೊಂಡ ತಂಡವೊಂದು, ಒಂದೇ ದಿನ ರಾತ್ರಿ ಇಬ್ಬರು ಬೈಕ್‌ ಸವಾರರ ಮೇಲೆ ಹಲ್ಲೆ ನಡೆಸಿ ಮೊಬೈಲ್‌, ಹಣ ದೋಚಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅ. 6ರಂದು ನಸುಕಿನ ವೇಳೆಯಲ್ಲಿ ಮೂವರ ದುಷ್ಕರ್ಮಿಗಳು ಈ ಕೃತ್ಯಗಳನ್ನು ಎಸಗಿದ್ದಾರೆ. ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿರುವ ಬೈಕ್‌ ಸವಾರರಾದ ಧನೇಶ್ವರ್‌ ಬೇ ಹಾಗೂ ಅಮಲ್‌ ಸಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಧನೇಶ್ವರ್‌ “ರ್ಯಾಪಿಡೋ’ ಕಂಪನಿಯ ಸಹಭಾಗಿತ್ವದಲ್ಲಿ ಗ್ರಾಹಕರಿಗೆ ಬೈಕ್‌ ಸೇವೆ ಒದಗಿಸುವ ಕೆಲಸ ಮಾಡುತ್ತಿದ್ದು, ಅಗತ್ಯ ಇರುವ ಗ್ರಾಹಕರನ್ನು ಪಿಕ್‌ ಅಪ್‌ ಅಂಡ್‌ ಡ್ರಾಪ್‌ ಸೇವೆ ಒದಗಿಸುತ್ತಾರೆ. ರ್ಯಾಪಿಡೋ ಮೊಬೈಲ್‌ ಆ್ಯಪ್‌ ಮೂಲಕ ಗ್ರಾಹಕರು ಪಿಕ್‌ ಅಪ್‌ ಅಂಡ್‌ ಡ್ರಾಫ್ ಸೇವೆ ಬುಕ್ಕಿಂಗ್‌ ಮಾಡಬಹುದು.

ಅ.6 ರ ಮಧ್ಯರಾತ್ರಿ(12) ಗ್ರಾಹಕರೊಬ್ಬರನ್ನು ಕೂಡ್ಲು ಗೇಟ್‌ನ ಎಇಸಿಎಸ್‌ ಲೇಔಟ್‌ನಲ್ಲಿ ಡ್ರಾಪ್‌ ಮಾಡಿದ್ದರು. ಅಲ್ಲಿಂದ ಕೇವಲ 400 ಮೀಟರ್‌ ದೂರದಲ್ಲಿಯೇ ಪಿಕ್‌ ಮಾಡಲು ಗ್ರಾಹಕರೊಬ್ಬರಿಂದ ಬುಕ್ಕಿಂಗ್‌ ಬಂದಿದ್ದು ಅಲ್ಲಿಗೆ ತೆರಳಿದ್ದಾರೆ. ಅಲ್ಲಿಗೆ ಯುವಕನೊಬ್ಬ ಬಂದಿದ್ದು ಏಕಾಏಕಿ ಚಾಕು ತೆಗೆದು ಧನೇಶ್ವರ್‌ ಅವರ ಕುತ್ತಿಗೆಗೆ ಒಂದು ಬಾರಿ ಚುಚ್ಚಿ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದಾನೆ. ಜತೆಗೆ, ಅವರ ಬಳಿಯಿದ್ದ ಮೊಬೈಲ್‌ ಫೋನ್‌, ಪರ್ಸ್‌ನಲ್ಲಿದ್ದ 1200 ರೂ. ಕಿತ್ತುಕೊಂಡಿದ್ದಾನೆ.

ಅಲ್ಲದೆ ಬಲವಂತವಾಗಿ ಬೈಕ್‌ನಲ್ಲಿ ಇನ್ನು ಸ್ವಲ್ಪ ಮುಂದಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಮತ್ತಿಬ್ಬರು ಮದ್ಯಸೇವನೆ ಮಾಡುತ್ತಿದ್ದು ಅಲ್ಲಿಯೇ ಕುಳ್ಳರಿಸಿದ್ದಾನೆ. ಈ ವೇಳೆ ಪುನಃ ಚಾಕುವಿನಿಂದ ಚುಚ್ಚಿ, ಕೊಲೆ ಮಾಡುವುದಾಗಿ ಮೂವರು ದುಷ್ಕರ್ಮಿಗಳು ಬೆದರಿಸಿದ್ದಾರೆ. ಅಷ್ಟೇ ಅಲ್ಲದೆ ಎಟಿಎಂ ಕಾರ್ಡ್‌ ಕಿತ್ತುಕೊಂಡು ಪಾಸ್‌ವರ್ಡ್‌ ಪಡೆದು ಸಮೀಪದ ಎಟಿಎಂಗೆ ತೆರಳಿ 500 ರೂ. ಡ್ರಾ ಮಾಡಿದ್ದಾರೆ.

ಗೂಗಲ್‌ ಪೇ ಮೂಲಕ 160 ರೂ. ಹಣ ವರ್ಗಾಯಿಸಿಕೊಂಡಿದ್ದಾರೆ. ಕೆಲ ಸಮಯದ ಬಳಿಕ ಧನೇಶ್ವರ್‌ ಅವರ ಕಣ್ತಪ್ಪಿಸಿ ಓಡಿದ್ದು ನಿರ್ಮಾಣಹಂತದ ಕಟ್ಟಡದಲ್ಲಿ ಅವಿತುಕುಳಿತಿದ್ದಾರೆ. ದುಷ್ಕರ್ಮಿಗಳು ಕೆಲ ಕಾಲ ಹುಡುಕಾಡಿ ಅಲ್ಲಿಂದ ತೆರಳಿದ್ದಾರೆ. ಬಳಿಕ ರಸ್ತೆ ಕಡೆಗೆ ಓಡಿ ಬಂದ ಧನೇಶ್ವರ್‌ ಸಹಾಯಕ್ಕೆ ಕೂಗಿಕೊಂಡು ಸ್ಥಳೀಯರು ರಕ್ಷಣೆಗೆ ಬಂದಿದ್ದಾರೆ. ಬಳಿಕ ಬೀಟ್‌ ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಬ್ಬ ಬೈಕ್‌ ಸವಾರಿಗೆ ಇರಿದು ದೋಚಿದರು!: ಅದೇ ದಿನ ರಾತ್ರಿ ಎರಡು ಗಂಟೆ ಸುಮಾರಿಗೆ ಅಮಲ್‌ ಸಿಂಗ್‌ ಎಂಬ ಬೈಕ್‌ ಸವಾರರನ್ನು ಅದೇ ರೀತಿ ಕರೆಸಿಕೊಂಡ ಮೂವರು ದುಷ್ಕರ್ಮಿಗಳು, ಅವರ ಕೈಗಳಿಗೆ ಚಾಕುವಿನಿಂದ ಇರಿದು ಕುತ್ತಿಗೆ ಬಳಿ ಚಾಕು ಇಟ್ಟು ಹೆದರಿಸಿ ಫೋನ್‌ ಕಿತ್ತುಕೊಂಡಿದ್ದಾರೆ.

ಜತೆಗೆ, ಪೇಟಿಎಂ, ಗೂಗಲ್‌ ಪೇ ಮುಖಾಂತರ 9656 ರೂ. ಹಣವನ್ನು ತಮ್ಮ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿಕೊಂಡು ಪರಾರಿಯಾಗಿದ್ದಾರೆ. ಎರಡು ಕೃತ್ಯಗಳನ್ನು ಒಂದೇ ತಂಡ ನಡೆಸಿರುವ ಸಾಧ್ಯತೆಯಿದೆ ಎಂದಿರುವ ಪೊಲೀಸರು ದೂರುದಾರರ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.