ಇಂದು ವಿಶ್ವ ಮಾನಸಿಕ ಆರೋಗ್ಯ ದಿನ; ಮಾನಸಿಕ ಅನಾರೋಗ್ಯ ಯಾಕೆ ಕಾಡುತ್ತದೆ?


Team Udayavani, Oct 10, 2019, 2:12 PM IST

Health-Day

ದೇಹ ಮತ್ತು ಮನಸ್ಸು  ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡು ಆರೋಗ್ಯವಾಗಿದ್ದಾಗ ಮಾತ್ರ ಮನುಷ್ಯನ ಜೀವನ ಅರ್ಥಪೂರ್ಣ. ಜೀವನಕ್ಕೆ ನೆಲೆ- ಬೆಲೆ ನೀಡುವ “ಮಾನಸಿಕ ಆರೋಗ್ಯ’ ಅತ್ಯಗತ್ಯವಾಗಿದ್ದು, ಸದೃಢ ಬದುಕನ್ನು ಕಟ್ಟಿಕೊಳ್ಳಲು ಮುಖುÂವಾಗಿದೆ. ಹೀಗಾಗಿ ಮಾನಸಿಕ ಆರೋಗ್ಯದ ಕುರಿತು ಜಗತ್ತಿಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ವಿಶ್ವ ಮಾನಸಿಕ ಆರೋಗ್ಯ ದಿನವನ್ನಾಗಿ ಆಚರಿಸಲಾಗತ್ತದೆ.

ಈ ದಿನ ಪ್ರಾರಂಭವಾದದ್ದು ಹೇಗೆ ? ಈ ವರ್ಷದ ವಿಷಯ ವಸ್ತು ಏನು? ಯಾವ ಕಾರಣಕ್ಕಾಗಿ ಮಾನಸಿಕ ಅನಾರೋಗ್ಯ ಕಾಡುತ್ತದೆ ?  ಎಂಬ ವಿಷಯಗಳ ಕುರಿತು ಮಾಹಿತಿ ಇಲ್ಲಿದೆ.

1992 ರಲ್ಲಿ ಪ್ರಾರಂಭ

90 ರ ದಶಕದಲ್ಲಿ  ಅತೀ ಹೆಚ್ಚಿನ ಜನರು ಮಾನಸಿಕ ಅನಾರೋಗ್ಯದಿಂದ ಬಲಳುತ್ತಿದ್ದರು. ಈ ಹಿನ್ನಲೆ ಸಮಸ್ಯೆಯ ಆಳವನ್ನು ಅರಿತ ವರ್ಲ್ಡ್  ಫೆಡರೇಶನ್‌ ಆಫ್ ಮೆಂಟಲ್‌ ಹೆಲ್ತ್ 1992ರ ಅಕ್ಟೋಬರ್‌ 10 ರಂದು ವಿಶ್ವ ಆರೋಗ್ಯ ದಿನವನ್ನಾಗಿ ಆಚರಣೆ ಮಾಡುವ ಮೂಲಕ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾ ಬರುತ್ತಿದೆ.

ಆತ್ಮಹತ್ಯೆ ತಡೆಗಟ್ಟುವಿಕೆ

ಮಾನಸಿಕ ಅನಾರೋಗ್ಯಕ್ಕೆ ವಯಸ್ಸಿನ ಭೇದವಿಲ್ಲ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಈ ರೋಗ ಕಾಣಿಸಿಕೊಳ್ಳುತ್ತಿದ್ದು, ಆತ್ಮಹತ್ಯೆಯಲ್ಲಿ  ಅಂತ್ಯ ಕಾಣುತ್ತಿದೆ. ಈ ಹಿನ್ನಲೆ ಈ ವರ್ಷದ ವಿಷಯ ವಸ್ತುವಾಗಿ ಆತ್ಮಹತ್ಯೆ ತಡೆಗಟ್ಟುವಿಕೆ ಎಂಬ ಧ್ಯೇಯವನ್ನಿಟ್ಟುಕೊಂಡಿದ್ದು, ಈ ಖಾಯಿಲೆಯ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಗುರಿಯನ್ನು ಹಾಕಿಕೊಂಡಿದೆ.

5 ರಲ್ಲಿ  ಒಬ್ಬರಿಗೆ ಮಾನಸಿಕ ಸಮಸ್ಯೆ

ದೇಶದ ಜನಸಂಖ್ಯೆಯಲ್ಲಿ  5 ರಲ್ಲಿ  ಒಬ್ಬರಿಗೆ ಮಾನಸಿಕ ಆರೋಗ್ಯದ ಸಮಸ್ಯೆಗಳು ಕಾಡುತ್ತಿವೆ ಎಂಬುದು ಅಂಕಿ-ಅಂಶಗಳಿಂದ ದೃಢಪಟ್ಟಿದೆ.

ಮಹಿಳೆಯರ ಪಾಲು ಜಾಸ್ತಿ:

ಮಾನಸಿಕ ಅಸ್ವಸ್ಥತೆಗೆ ಒಳಗಾಗುವವರ ಪೈಕಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಅನ್ನೋ ಅಂಶ  ಸಾಬೀತಾಗಿದ್ದು, ಶೇ.23 ರಷ್ಟು ಮಹಿಳೆಯರು ಮಾನಸಿಕ ಅನರೋಗ್ಯದಿಂದ ಬಳಲುತ್ತಿದ್ದಾರೆ.

18%ದಷ್ಟು ಮಾನಸಿಕ ಅನರೋಗ್ಯದಿಂದ ಬಳಲುತ್ತಿರುವ ಗಂಡಸರ ದತ್ತಾಂಶವಾಗಿದೆ.

ಕಾರಣವೇನು ?

ಮಾನಸಿಕ ಅನಾರೋಗ್ಯಕ್ಕೆ  ಮುಖ್ಯವಾಗಿ ಖಿನ್ನತೆ ಕಾರಣವಾಗಿದ್ದು, ಒತ್ತಡ, ನಿರ್ಲಕ್ಷ್ಯ, ಏಕಾಂಗಿತನ, ತಾರತಮ್ಯ, ಕಳಂಕ ಮುಂತಾದ ಸಾಮಾಜಿಕ ತೊಂದರೆ ತಾಪತ್ರಯಗಳಿಂದ ಮಾನಸಿಕ ಅಸ್ವಸ್ತತೆ ಉಂಟಾಗುತ್ತದೆ.

ಪರಿಹಾರವೇನು ?

* ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು.

* ಕುಟುಂಬ ಹಾಗೂ ಸ್ನೇಹಿತರೊಂದಿಗೆ ಹೆಚ್ಚಾಗಿ ಕಾಲ ಕಳೆಯುವುದು,

* ಖುಷಿ ನೀಡುವ ಕೆಲಸಗಳಲ್ಲಿ  ನಿರತರಾಗುವುದು.

* ಆರೋಗ್ಯಕರ ಆಹಾರ ಸೇವನೆ ಮಾಡುವುದರೊಂದಿಗೆ ಸದಾ ಕ್ರೀಯಾಶೀಲತೆಯಿಂದ ಇರುವುದು.

ಕಳೆದ 27 ವರ್ಷಗಳಿಂದ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸುತ್ತ ಬಂದಿದ್ದರೂ, ಈ ಕುರಿತು ಸಂಪೂರ್ಣ ಜಾಗೃತಿ ಮೂಡಿಸಲು ಸಾಧ್ಯವಾಗಿಲ್ಲ ಅನ್ನೋದು ನಿಜ ಸಂಗತಿ. ದೈಹಿಕ ಆರೋಗ್ಯಕ್ಕೆ ಜನರು ನೀಡುವ ಪ್ರಾಮುಖ್ಯತೆಯನ್ನು ಮಾನಸಿಕ ಆರೋಗ್ಯಕ್ಕೂ ನೀಡಬೇಕು ಅನ್ನೋದು ವಿಶ್ವ ಮಾನಸಿಕ ಆರೋಗ್ಯ ಒಕ್ಕೂಟದ ಉದ್ದೇಶ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.