ಶೂನ್ಯ ಪೀಠಾರೋಹಣ.. ಸಂಭ್ರಮಿಸಿದ ಭಕ್ತ ಗಣ..

ಮುರುಘಾ ಶ್ರೀಗಳಿಂದ ರುದ್ರಾಕ್ಷಿ ಕಿರೀಟ ಧಾರಣೆ ವಚನಗಳ ಹಸ್ತಪ್ರತಿ, ಅಲ್ಲಮ-ಬಸವಣ್ಣ ಭಾವಚಿತ್ರ ಮೆರವಣಿಗೆ

Team Udayavani, Oct 10, 2019, 2:51 PM IST

10-October-14

ಚಿತ್ರದುರ್ಗ: ಮುರುಘಾ ಮಠದ ಹಿಂದಿನ ಪೂಜ್ಯರು ಚಿನ್ನದ ಕಿರೀಟ, ಚಿನ್ನದ ಪಾದುಕೆ, ಆಭರಣ ಧರಿಸಿ ದಸರಾ ಸಂದರ್ಭದಲ್ಲಿ ಪೀಠಾರೋಹಣ ಮಾಡುತ್ತಿದ್ದ ಪರಂಪರೆಗೆ ಡಾ| ಶಿವಮೂರ್ತಿ ಮುರುಘಾ ಶರಣರು ಪೀಠಾಧ್ಯಕ್ಷರಾದ ನಂತರ ಇತಿಶ್ರೀ ಹಾಡಿದ್ದು, ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮುರುಘಾ ಮಠದ ರಾಜಾಂಗಣದಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆದ ಮುರುಘಾ ಶರಣರ ಶೂನ್ಯ ಪೀಠಾರೋಹಣ ಅತ್ಯಂತ ಮಹತ್ವ ಪಡೆದಿತ್ತು. ಅ.2ರಿಂದ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಶರಣರ ಶೂನ್ಯ ಪಿ ಪೀಠಾರೋಹಣ ಬಹಳ ಪ್ರಾಮುಖ್ಯತೆ ಪಡೆದಿದ್ದು, ಶೂನ್ಯ ಪೀಠಾರೋಹಣವನ್ನು ಕಣ್ತುಂಬಿಕೊಳ್ಳಲು, ಮಠದಲ್ಲಿರುವ ಚಿನ್ನದ ಕಿರೀಟ, ಪಾದುಕೆಗಳನ್ನು ನೋಡಲು ಸಾವಿರಾರು ಭಕ್ತರು ಮಠಕ್ಕೆ ಆಗಮಿಸಿದ್ದರು.

ಶ್ರೀ ಮುರುಗೀ ಶಾಂತವೀರ ಸ್ವಾಮಿಗಳ ಕರ್ತೃ ಗದ್ದುಗೆಗೆ ಭಕ್ತಿ ಸಮರ್ಪಿಸಿ ರಾಜಾಂಗಣಕ್ಕೆ ಆಗಮಿಸಿದ ಮುರುಘಾ ಶರಣರು, ಚಿನ್ನದ ಕಿರೀಟ ಹಾಗೂ ಪಾದುಕೆಗಳನ್ನು ಭಕ್ತರ ಕೈಗೆ ನೀಡಿ, ರುದ್ರಾಕ್ಷಿ ಕಿರೀಟ ಧರಿಸಿ ಕೈಯಲ್ಲೊಂದು ವಚನ ಸಂಪುಟ ಹಿಡಿದು ಶೂನ್ಯ ಪೀಠಾರೋಹಣ ಮಾಡಿದರು.

ಮುರುಘಾ ಶರಣರನ್ನು ಈ ರೀತಿಯಲ್ಲಿ ಕಾಣುವ ದಿನ ವರ್ಷಕ್ಕೊಮ್ಮೆ ಮಾತ್ರ ಬರುವುದರಿಂದ ಭಕ್ತರು ಸಾಲುಗಟ್ಟಿ ನಿಂತು ಆಶೀರ್ವಾದ ಪಡೆದರು. ಅಲ್ಲಮಪ್ರಭು ದೇವರು, ಅಕ್ಕಮಹಾದೇವಿ ಹಾಗೂ ಬಸವಣ್ಣನ ಭಾವಚಿತ್ರಗಳಿರುವ ಅತ್ಯಂತ ಸೂಕ್ಷ್ಮಕುಸುರಿ ಕಲೆ ಹೊಂದಿರುವ ಪೀಠದಲ್ಲಿ ಶರಣರು ಆಸೀನರಾಗುತ್ತಿದ್ದಂತೆ ಭಕ್ತರು ಹರ್ಷೋದ್ಗಾರ ಮಾಡಿದರು. ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಹರ ಗುರು ಚರ ಮೂರ್ತಿಗಳು, ಎಸ್‌ ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ, ಸಿಬ್ಬಂದಿ, ವೀರಶೈವ ಸಮಾಜ ಸೇರಿದಂತೆ ವಿವಿಧ ಸಮಾಜದ ಮುಖಂಡರು ಸೇರಿದಂತೆ ನಾಡಿನ ವಿವಿಧೆಡೆಯಿಂದ ಭಕ್ತರು ಭಾಗವಹಿಸಿದ್ದರು. ವಿವಿಧ ಕಲಾ ತಂಡಗಳು ಮಠದ ರಾಜಾಂಗಣದಲ್ಲಿ ಕಹಳೆ, ಡೊಳ್ಳು ವಾದ್ಯ ಕಲೆ ಪ್ರದರ್ಶಿಸಿದವು.

ಹಸ್ತಪ್ರತಿ, ಬಸವಣ್ಣ-ಅಲ್ಲಮರ ಭಾವಚಿತ್ರ ಮೆರವಣಿಗೆ: ಮುರುಘಾ ಶರಣರ ಶೂನ್ಯ ಪೀಠಾರೋಹಣ ನಂತರ ಅಡ್ಡಪಲ್ಲಕ್ಕಿ ಉತ್ಸವ ಮಾಡುವುದು ವಾಡಿಕೆ. ಇಲ್ಲಿಯೂ ಬದಲಾವಣೆ ತಂದಿರುವ ಮುರುಘಾ ಶರಣರು, ಅಡ್ಡ ಪಲ್ಲಕ್ಕಿಯಲ್ಲಿ ತಾವು ಕುಳಿತುಕೊಳ್ಳುವ ಬದಲು ವಚನಗಳ ಪ್ರಾಚೀನ ಹಸ್ತಪ್ರತಿಗಳು, ಶೂನ್ಯಪೀಠದ ಪ್ರಥಮ ಅಧ್ಯಕ್ಷರಾಗಿದ್ದ ಅಲ್ಲಮಪ್ರಭು ದೇವರು ಹಾಗೂ ಬಸವಣ್ಣನ ಭಾವಚಿತ್ರವಿಟ್ಟು ಮಠದ ಆವರಣದಲ್ಲಿ ಮೆರವಣಿಗೆ ಮಾಡಿಸಿದರು.

ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಶೂನ್ಯ ಪೀಠಾರೋಹಣ ಹಿನ್ನೆಲೆಯಲ್ಲಿ ಮಠದ ಆವರಣ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಮಠದ ಕರ್ತೃ ಗದ್ದುಗೆ, ರಾಜಾಂಗಣದಲ್ಲಿ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಬೃಹದಾಕಾರದ ರಂಗವಲ್ಲಿಗಳು ಗಮನ ಸೆಳೆದವು.

ಟಾಪ್ ನ್ಯೂಸ್

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

13

ʼPushpa-2ʼ ಎರಡನೇ ಹಾಡು ರಿಲೀಸ್:‌ ಕಪಲ್ಸ್‌ ಹಾಡಿಗೆ ಹೆಜ್ಜೆ ಹಾಕಿದ ʼಪುಷ್ಪʼ, ʼಶ್ರೀವಲ್ಲಿʼ

ಮೂತ್ರಕೋಶದ ಕಲ್ಲಿನ ಚಿಕಿತ್ಸೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadagiri

Yadagiri: ರೈತರ‌ ಬಾಳಲ್ಲಿ ಆಟವಾಡುತ್ತಿರುವ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಆಕ್ರೋಶ

koppala

Koppala; ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಮಗು ಸಾವು; ಸಂಬಂಧಿಕರ ಆಕ್ರೋಶ

Nitte Institute of Communication; ಮೇ 31ರಂದು ನಿಟ್ಟೆ ಕ್ರಿಯೇಟಿವಿಟಿ ಫೆಸ್ಟಿವಲ್‌

Nitte Institute of Communication; ಮೇ 31ರಂದು ನಿಟ್ಟೆ ಕ್ರಿಯೇಟಿವಿಟಿ ಫೆಸ್ಟಿವಲ್‌

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

kodihalli

Magadi: ಹೇಮಾವತಿ ಕುಡಿಯುವ ನೀರು ಹೋರಾಟ; ಕೋಡಿಹಳ್ಳಿ ಚಂದ್ರಶೇಖರ್ ಸೇರಿ ರೈತರ ಬಂಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

15-uv-fusion

UV Fusion: ಒಂದಾನೊಂದು ಕಾಲದ ರಾಜ ರಾಣಿ ಕಥೆ

yadagiri

Yadagiri: ರೈತರ‌ ಬಾಳಲ್ಲಿ ಆಟವಾಡುತ್ತಿರುವ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಆಕ್ರೋಶ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.