ಸುವರ್ಣ ವಿಧಾನಸೌಧದಲ್ಲಿ ಕುರಿಗಳ ಸಭೆ: ಪೊಲೀಸರ ಅಡ್ಡಿ, ವಾಟಾಳ್ ನಾಗರಾಜ್ ಬಂಧನ
Team Udayavani, Oct 10, 2019, 3:12 PM IST
ಬೆಳಗಾವಿ: ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲ ಅಧಿವೇಶನವನ್ನು ರದ್ದು ಪಡಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕುರಿಗಳ ಸಭೆ ನಡೆಸಲು ಉದ್ದೇಶಿಸಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಹಿರೇಬಾಗೇವಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಚಿವರು, ಶಾಸಕರನ್ನು ಕುರಿಗಳಿಗೆ ಹೋಲಿಕೆ ಮಾಡಿ ಸುವರ್ಣ ವಿಧಾನಸೌಧದಲ್ಲಿ ಕುರಿಗಳನ್ನು ತಂದು ಪ್ರತಿಭಟನೆ ನಡೆಸಲು ಮುಂದಾಗಿದ್ದ ವಾಟಾಳ್ ನಾಗರಾಜ್ ಅವರನ್ನು ಬಂಧಿಸಿ ಕುರಿಗಳ ಸಭೆಗೆ ನಿರ್ಭಂದ ಹೇರಲಾಗಿದೆ.
ಈ ವೇಳೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಪ್ರತಿ ವರ್ಷ ಗಡಿ ಜಿಲ್ಲೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸುವುದು ವಾಡಿಕೆ ಆಗಿದೆ. ಆದರೆ ಈ ಸಲ ರಾಜ್ಯ ಸರ್ಕಾರ ಈ ಇದನ್ನು ರದ್ದುಪಡಿಸಿ ಉತ್ತರ ಕರ್ನಾಟಕದ ಜನರಿಗೆ ಅನ್ಯಾಯ ಮಾಡಿದೆ.
ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸಚಿವರು ಹಾಗೂ ಶಾಸಕರು ಕುರಿಗಳು ಇದ್ದಂತೆ. ಹೀಗಾಗಿ ಕುರಿಗಳನ್ನು ತಂದು ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಪೊಲೀಸರು ಇದಕ್ಕೆ ಅನುಮತಿ ನೀಡಲಿಲ್ಲ. ಇಂತಹ ಸಭೆ ನಡೆಸಲು ನಮಗೆ ಆಗುವುದಿಲ್ಲ ಎಂದಾದರೆ ಎಮ್ಮೆ, ಕೋಣ, ಕುರಿಗಳಿಗೆ ಸಭೆ ನಡೆಸಲು ಸರಕಾರ ಅನುಮತಿ ನೀಡಲಿ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ