ಡಿಸೆಂಬರ್ ಅಂತ್ಯದೊಳಗೆ ನಿಮ್ಮ ಅಕೌಂಟ್ KYC ಅಪ್ಡೇಟ್ ಮಾಡಿ; ಇಲ್ಲದಿದ್ರೆ ಏನಾಗುತ್ತೆ ಗೊತ್ತಾ?


Team Udayavani, Oct 10, 2019, 4:40 PM IST

KYC-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ‘ನಿಮ್ಮ ಗ್ರಾಹಕರ ಬಗ್ಗೆ ತಿಳಿದುಕೊಳ್ಳಿ’ (ಕೆ.ವೈ.ಸಿ.) ನೀತಿಗಳನ್ನು ಪರಿಷ್ಕೃತಗೊಳಿಸಿದ್ದು ಆ ಪ್ರಕಾರ ಎಲ್ಲಾ ಬ್ಯಾಂಕ್ ಖಾತೆದಾರರು ತಮ್ಮ ಕೆ.ವೈ.ಸಿ.ಯನ್ನು 2020ರ ಜನವರಿ ತಿಂಗಳ ಒಳಗೆ ಸಲ್ಲಿಸಬೇಕಾಗಿರುವುದು ಕಡ್ಡಾಯವಾಗಲಿದೆ. ಇದಕ್ಕೆ ತಪ್ಪಿದಲ್ಲಿ ಅಂತಹ ಖಾತೆದಾರರ ಬ್ಯಾಂಕ್ ಖಾತೆಗಳು ರದ್ದುಗೊಳ್ಳುವ ಸಾಧ್ಯತೆಗಳಿವೆ.

ಗ್ರಾಹಕ ಜಾಗೃತಿಯ ಉದ್ದೇಶಕ್ಕಾಗಿ ಆರ್.ಬಿ.ಐ. ಈ ಕಟ್ಟುನಿಟ್ಟಿನ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ದೇಶಿಸಿದ್ದು ಆ ಪ್ರಕಾರವಾಗಿ ಎಸ್.ಬಿ.ಐ., ಐಡಿಬಿಐ, ಐಸಿಸಿಐ ಸೇರಿದಂತೆ ಸಾರ್ವಜನಿಕ ರಂಗದ ಬ್ಯಾಂಕುಗಳು ತಮ್ಮೆಲ್ಲಾ ಖಾತೆದಾರರಿಗೆ ಈ ಕುರಿತಾದ ಮಾಹಿತಿಯನ್ನು ಎಸ್.ಎಂ.ಎಸ್., ಇ-ಮೆಲ್ ಹಾಗೂ ಇನ್ನಿತರ ರೂಪದಲ್ಲಿ ನಿರಂತರವಾಗಿ ಕಳುಹಿಸುತ್ತಿವೆ.

ಬ್ಯಾಂಕ್ ಖಾತೆದಾರರು ತಮ್ಮ ಕೆ.ವೈ.ಸಿ.ಯನ್ನು ಬ್ಯಾಂಕ್ ಗೆ ಸಲ್ಲಿಸಲು ಮುಂದಿನ ವರ್ಷದ ಜನವರಿ 01 ಕಡೆಯ ದಿನವಾಗಿದ್ದರೆ, ಫೋನ್ ಪೇ, ಪೇಟಿಯಂ, ಅಮೆಝಾನ್ ಪೇ ಅಥವಾ ಈ ರೀತಿಯ ವ್ಯಾಲೆಟ್ ಗಳನ್ನು ಬಳಸುತ್ತಿರುವವರು ತಮ್ಮ ಕೆ.ವೈ.ಸಿ.ಯನ್ನು ಮುಂದಿನ ವರ್ಷದ ಫೆಬ್ರವರಿ 29ರ ಒಳಗೆ ಸಲ್ಲಿಸಬೇಕಾಗಿದೆ.

ತುಂಬಾ ಸಮಯದವರೆಗೆ ಕೆ.ವೈ.ಸಿ.ಯನ್ನು ಸಲ್ಲಿಸದಿರುವ ಖಾತೆದಾರರ ಖಾತೆಗಳನ್ನು ಸಂಬಂಧಪಟ್ಟ ಬ್ಯಾಂಕುಗಳ ಫ್ರೀಝ್ ಮಾಡುವ ಸಾಧ್ಯತೆ ಇರುವುದರಿಂದ ಖಾತೆದಾರರು ತಮ್ಮ ಕೆ.ವೈ.ಸಿ.ಗಳನ್ನು ಬ್ಯಾಂಕುಗಳಿಗೆ ಸಲ್ಲಿಸುವ ಮೂಲಕ ಈ ಅಪಾಯದಿಂದ ಪಾರಾಗಬಹುದು.

ಖಾತೆದಾರರು ತಮ್ಮ ಕೆ.ವೈ.ಸಿ.ಯನ್ನು ಸಲ್ಲಿಸಲು ತಾವು ಖಾತೆಗಳನ್ನು ಹೊಂದಿರುವ ಬ್ಯಾಂಕ್ ಶಾಖೆಗೆ ತೆರಳಿ ಅಲ್ಲಿ ಅಧಿಕಾರಿಗಳು ಕೇಳುವ ನಿರ್ಧಿಷ್ಟ ದಾಖಲೆಗಳನ್ನು ಸಲ್ಲಿಸಬೇಕಾಗಿರುತ್ತದೆ. ಇನ್ನು ತಮ್ಮ ಖಾತೆಗಳನ್ನು ನಿಯಮಿತ ಅವಧಿಗೆ ಅಪ್ ಡೇಟ್ ಮಾಡಿಕೊಳ್ಳುತ್ತಿರುವ ಖಾತೆದಾರರು ತಮ್ಮ ಬ್ಯಾಂಕಿನ ವೆಬ್ ಸೈಟ್ ನಲ್ಲಿ ಕೆ.ವೈ.ಸಿ. ಸಲ್ಲಿಸುವ ಕಡೆ ‘ನನ್ನ ಕೆ.ವೈ.ಸಿ. ವಿವರಗಳಲ್ಲಿ ಯಾವುದೇ ಬದಲಾವಣೆ ಇಲ್ಲ’ (No changes in my KYC Details) ಎಂಬ ಆಯ್ಕೆಗೆ ಕ್ಲಿಕ್ ಮಾಡಬೇಕು.

ಹೈ ರಿಸ್ಕ್ ಗ್ರಾಹಕರು ತಮ್ಮ ಕೆ.ವೈ.ಸಿ.ಯನ್ನು  ಪ್ರತೀ ಎರಡು ವರ್ಷಗಳಿಗೊಮ್ಮೆ ಅಪ್ ಡೇಟ್ ಮಾಡಬೇಕಾಗಿರುತ್ತದೆ. ಇನ್ನು ಮೀಡಿಯಂ ರಿಸ್ಕ್ ಗ್ರಾಹಕರು ತಮ್ಮ ಕೆ.ವೈ.ಸಿ.ಯನ್ನು ಎಂಡು ವರ್ಷಗಳಿಗೊಮ್ಮೆ ಅಪ್ ಡೇಟ್ ಮಾಡಿದರೆ ಸಾಕು.

ಬ್ಯಾಂಕ್ ಖಾತೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಹಾಗೂ ಹಣಕಾಸು ವಂಚನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರ್.ಬಿ.ಐ. ಸೂಚನೆಯ ಮೇರೆಗೆ ದೇಶದಲ್ಲಿರುವ ಎಲ್ಲಾ ಬ್ಯಾಂಕುಗಳು ಹಾಗೂ ಆನ್ ಲೈನ್ ಹಣಕಾಸು ವ್ಯವಹಾರ ನಡೆಸುವ ಅಪ್ಲಿಕೇಶನ್ ಗಳು ತಮ್ಮ ಗ್ರಾಹಕರು ಸುರಕ್ಷಿತ ವ್ಯವಹಾರವನ್ನು ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಹಕರ ಗುರುತು ಹಾಗೂ ವಿಳಾಸದ ಮಾಹಿತಿಯನ್ನು ಪಡೆದುಕೊಳ್ಳುತ್ತಿವೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.