ಪ್ರಜ್ಞಾವಸ್ಥೆಯಲ್ಲಿರುವಾಗಲೇ ಶ್ವಾಸಕೋಶದ ಶಸ್ತ್ರಚಿಕಿತ್ಸೆ
Team Udayavani, Oct 11, 2019, 5:24 AM IST
ಪ್ರಜ್ಞಾವಸ್ಥೆಯಲ್ಲಿರುವಾಗಲೇ ಶ್ವಾಸಕೋಶದ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ.
ಮಂಗಳೂರು: ರೋಗಿ ಪ್ರಜ್ಞಾವಸ್ಥೆಯಲ್ಲಿರುವಾಗಲೇ ಶ್ವಾಸ ಕೋಶದ ಶಸ್ತ್ರಚಿಕಿತ್ಸೆಯನ್ನು ನಗರದ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ವೈದ್ಯಕೀಯ ವಿಜ್ಞಾನ ದಲ್ಲಿ “ಅವೇಕ್ ಲಂಗ್ ಸರ್ಜರಿ’ ಎಂದು ಕರೆಯಲ್ಪಡುವ ಈ ಶಸ್ತ್ರಚಿಕಿತ್ಸೆಯು ತೀರಾ ಅಪರೂಪದ ಶಸ್ತ್ರಚಿಕಿತ್ಸೆ ಯಾಗಿದೆ.
ಬಂಟ್ವಾಳ ತಾಲೂಕಿನ 28 ವರ್ಷದ ಯುವಕನನ್ನು ತೀವ್ರ ಉಸಿರಾಟದ ತೊಂದರೆ ಮತ್ತು ಎರಡೂ ಕಾಲುಗಳ ದುರ್ಬಲತೆ ಸಮಸ್ಯೆಯಿಂದಾಗಿ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞರು ಕೂಲಂಕಷ ತಪಾಸಣೆಗೆ ನಡೆಸಿದಾಗ ಶ್ವಾಸಕೋಶದ ದಪ್ಪ ದ್ರವರೂಪಿ ಪೊರೆಯಿಂದ ಕೂಡಿದ ಲಾಕ್ಯುಲೇಟೆಡ್ ಎಂಪೈಮಾ (ಶ್ವಾಸಕೋಶದ ವೈಫಲ್ಯ) ಹಾಗೂ ನಿಯಂತ್ರಣ ಕಳೆದು ಕೊಂಡಿರುವ (ಡಿಮೈಲಿನೇಟಿಂಗ್ ಪಾಲಿ ನ್ಯೂರೋಪತಿ) ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂತು.
ಅತಿಕ್ಲಿಷ್ಟಕರವಾದ ಎದೆಯ ಮತ್ತು ಶ್ವಾಸಕೋಶದ ಶಸ್ತ್ರಚಿಕಿತ್ಸೆಗೆ ಸಂಪೂರ್ಣ ಅರಿವಳಿಕೆ ಅಗತ್ಯ. ಆದರೆ ತೀವ್ರತರ ವಾದ ಸಮಸ್ಯೆಯಿಂದ ಬಳಲುತ್ತಿದ್ದ ಈ ರೋಗಿಗೆ ಸಂಪೂರ್ಣ ಅರಿವಳಿಕೆ ಕೊಟ್ಟು ಶಸ್ತ್ರಚಿಕಿತ್ಸೆ ಅಸಾಧ್ಯವಾಗಿತ್ತು. ಅದರಿಂದ ರೋಗಿಯ ಪ್ರಾಣಕ್ಕೇ ಅಪಾಯದ ಸಾಧ್ಯತೆಯೂ ಇದ್ದುದ ರಿಂದ ಪ್ರಜ್ಞಾವಸ್ಥೆಯಲ್ಲಿಯೇ ಸ್ಥಳೀಯ ಅರಿವಳಿಕೆಯನ್ನು ನೀಡಿ ಶಸ್ತ್ರಕ್ರಿಯೆ ನಡೆಸಲಾಯಿತು.
ಎ.ಜೆ. ಆಸ್ಪತ್ರೆಯ ಹೃದಯ ಮತ್ತು ರಕ್ತನಾಳಗಳ ನುರಿತ ಉತ್ಸಾಹೀ ಶಸ್ತ್ರಚಿಕಿತ್ಸಕ ಡಾ| ಸಂಭ್ರಮ್ ಶೆಟ್ಟಿ, ಹೃದಯ ಶಸ್ತ್ರಚಿಕಿತ್ಸಕ ಡಾ| ಜಯಶಂಕರ್ ಮಾರ್ಲ, ಹೃದಯದ ಅರಿವಳಿಕೆ ತಜ್ಞ ಡಾ| ಗುರುರಾಜ್ ತಂತ್ರಿ, ಡಾ| ಸುಹಾಸ್ ಎಂ.ಕೆ. ಹಾಗೂ ಅನುಭವಿ ವೈದ್ಯೆàತರ ಸಿಬಂದಿಯ ಪ್ರಯತ್ನದಿಂದ ಈ ಸಾಹಸಪೂರ್ಣ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿ ಯಾಗಿ ಮಾಡಲಾಗಿದೆ. ರೋಗಿಯು ಶೀಘ್ರ ಚೇತರಿಸಿಕೊಂಡು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಪ್ರಶಾಂತ್ ಮಾರ್ಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ