“ಜ್ಞಾನಪೀಠ’ಕ್ಕೆ ಸರಕಾರಿ ಲಾಕರ್‌

ಕಾರಂತಜ್ಜನಿಗೆ ಸಿಕ್ಕ ಪ್ರಶಸ್ತಿ ಜನ್ಮದಿನದಂದು ಪ್ರದರ್ಶನಕ್ಕೆ ಸೀಮಿತ

Team Udayavani, Oct 11, 2019, 10:48 AM IST

u-44

ಶಿವರಾಮ ಕಾರಂತ ಅವರಿಗೆ ಲಭಿಸಿದ "ಜ್ಞಾನಪೀಠ' ಪುರಸ್ಕಾರ.

ಪುತ್ತೂರು: ಸಾಹಿತ್ಯ ಕ್ಷೇತ್ರದ ಮೇರು ಪುರಸ್ಕಾರ ಜ್ಞಾನಪೀಠ ಪ್ರಶಸ್ತಿಯನ್ನು ನೋಡಲು ಸಿಗುವ ಅವಕಾಶವೇ ವಿಶೇಷ ಅನುಭವ. ಪುತ್ತೂರಿನಲ್ಲಿ ಮೇರು ಸಾಹಿತಿ ಡಾ| ಕೆ. ಶಿವರಾಮ ಕಾರಂತರ ಕಾರಣದಿಂದ ಈ ಮಹಾ ಪಾರಿತೋಷಕವನ್ನು ಸಾಹಿತ್ಯಾಭಿಮಾನಿಗಳು ಕಣ್ತುಂಬಿ ಕೊಳ್ಳಬಹುದಾದರೂ ಮೂರು ವರ್ಷಗಳ ಬಳಿಕ ಅ. 10ರಂದು ಕಾರಂತ ಜನ್ಮದಿನದ ದಿನವಷ್ಟೇ ಈ ಅವಕಾಶ ಲಭಿಸಿದೆ.

ಕಡಲ ತಡಿಯ ಭಾರ್ಗವ ಡಾ| ಕೆ. ಶಿವರಾಮ ಕಾರಂತ 1936ರಿಂದ 1978ರ ತನಕ ಪುತ್ತೂರು ಪರ್ಲಡ್ಕದ ಬಾಲವನವನ್ನು ತಮ್ಮ ಸಾಹಿತ್ಯ, ಸಾಂಸ್ಕೃತಿಕ ಕೃಷಿಯ ಕರ್ಮಭೂಮಿಯನ್ನಾಗಿಸಿಕೊಂಡಿದ್ದರು. ಡಾ| ಶಿವರಾಮ ಕಾರಂತರ “ಮೂಕಜ್ಜಿಯ ಕನಸುಗಳು’ ಮಹಾ ಕಾದಂಬರಿಗೆ 1976ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿತ್ತು.

ಪ್ರಶಸ್ತಿ ಕರ್ಮಭೂಮಿಯಲ್ಲಿ…
ಡಾ| ಕಾರಂತರು ತಮ್ಮ ಕೊನೆಯ ದಿನ ಗಳಲ್ಲಿ ಪುತ್ತೂರಿನಿಂದ ದೂರವಾದರೂ ಜ್ಞಾನಪೀಠ ಪ್ರಶಸ್ತಿ ಬಾಲವನದ ಕರ್ಮ ಭೂಮಿಯಲ್ಲಿಯೇ ಇರಿಸಿದ್ದರು.

ಪುನಶ್ಚೇತನ, ಭದ್ರತೆಗಾಗಿ ಸ್ಥಳಾಂತರ
ಮೂರು ವರ್ಷಗಳ ಹಿಂದೆ ಡಾ| ಶಿವರಾಮ ಕಾರಂತರ ಬಾಲವನದಲ್ಲಿ ಪುನಶ್ಚೇತನ ಕಾಮಗಾರಿಗಳನ್ನು ಆರಂಭಿಸ ಲಾಗಿದೆ. ಕಾರಂತರ ಮನೆಯನ್ನು 30 ಲಕ್ಷ ರೂ. ವೆಚ್ಚದಲ್ಲಿ ಪುನಶ್ಚೇತನ ಮಾಡುವ ಸಂದರ್ಭದಲ್ಲಿ ಭದ್ರತೆಯ ಕಾರಣಕ್ಕಾಗಿ ಜ್ಞಾನಪೀಠ ಪ್ರಶಸ್ತಿಯನ್ನು ಬಾಲವನದಿಂದ ಸರಕಾರಿ ಲಾಕರ್‌ಗೆ ಸ್ಥಳಾಂತರ ಮಾಡಲಾಗಿತ್ತು.

2018ರಲ್ಲಿ ಕಾರಂತರ ಪುನಶ್ಚೇತನಗೊಂಡ ಮನೆ ಉದ್ಘಾಟನೆ ಗೊಂಡರೂ ಸದ್ಯಕ್ಕೆ ಭದ್ರತೆ ಹಾಗೂ ಲಾಕರ್‌ ವ್ಯವಸ್ಥೆ ಮಾಡಲು ಸಾಧ್ಯವಾಗದೇ ಇರುವುದರಿಂದ ಜ್ಞಾನಪೀಠ ಪ್ರಶಸ್ತಿ ಸರಕಾರಿ ಲಾಕರ್‌ನಲ್ಲೇ ಉಳಿದಿತ್ತು.

ಈ ಬಾರಿ ಅ. 10ರಂದು ಕಾರಂತರ ಜನ್ಮದಿನೋತ್ಸವದ ಸಂದರ್ಭದಲ್ಲಿ ಸಾಹಿತ್ಯಾಸಕ್ತರ ಬೇಡಿಕೆಯ ಮೇರೆಗೆ ಬಾಲವನದಲ್ಲಿ ಪ್ರದರ್ಶನಕ್ಕೆ ಇಡುವ ವ್ಯವಸ್ಥೆಯನ್ನು ಸಹಾಯಕ ಆಯುಕ್ತರ ನೇತೃತ್ವದ ಸಮಿತಿಯ ಮೂಲಕ ಮಾಡಲಾಗಿತ್ತು. ಜತೆಗೆ ವಿಶೇಷವಾಗಿ ಪೊಲೀಸ್‌ ಭದ್ರತೆಯನ್ನೂ ನಿಯೋಜಿಸಲಾಗಿತ್ತು.

ಬಾಲವನದಲ್ಲಿ ಕಾರಂತರ ಮನೆಯ ಪುನಶ್ಚೇತನ ಕಾಮಗಾರಿ ನಡೆದಿದ್ದರೂ ಕಾರಂತರ ನಾಟ್ಯಶಾಲೆ, ರಂಗಮಂದಿರ, ಪ್ರಿಂಟಿಂಗ್‌ ಪ್ರಸ್‌ ಇದ್ದ ಗ್ರಂಥಾಲಯ ಮುಂತಾದವುಗಳ ಪುನಶ್ಚೇತನ ಕಾಮಗಾರಿ ನಡೆಯಬೇಕಿದೆ.

ಇದಕ್ಕಾಗಿ ಸರಕಾರ 1 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದೆ. ಸ್ವಲ್ಪ ಮಟ್ಟಿನ ಕೆಲಸ ನಡೆದಿದ್ದರೂ ಹೆಚ್ಚುವರಿ ಹಣಕ್ಕಾಗಿ ಗುತ್ತಿಗೆದಾರ ಸಂಸ್ಥೆ ಮನವಿ ಮಾಡಿದೆ.
ಬಾಲವನದಲ್ಲಿ ಒಟ್ಟು ಪುನಶ್ಚೇತನ ಕಾಮಗಾರಿ ನಡೆದ ಬಳಿಕವಷ್ಟೇ ಜ್ಞಾನಪೀಠ ಪ್ರಶಸ್ತಿ ಸ್ಥಳಾಂತರಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆಯ ದೃಷ್ಟಿ
ಡಾ| ಶಿವರಾಮ ಕಾರಂತರಿಗೆ ಲಭಿಸಿದ ಅತ್ಯುಚ್ಚ ಗೌರವ ಜ್ಞಾನಪೀಠ ಪ್ರಶಸ್ತಿಗೆ ಭಾರೀ ಮೌಲ್ಯವಿರುವುದರಿಂದ ಭದ್ರತೆ ದೃಷ್ಟಿಯಿಂದ ಸರಕಾರಿ ಲಾಕರ್‌ಗೆ
ಸ್ಥಳಾಂತರ ಮಾಡಲಾಗಿದೆ. ಬೇಡಿಕೆಯ ಮೇರೆಗೆ ಒಂದು ದಿನ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಾಲವನದಲ್ಲಿ ಪುನಶ್ಚೇತನ ಕಾಮಗಾರಿ ಸಹಿತ ಒಟ್ಟು ವ್ಯವಸ್ಥೆಗಳು ಸಮರ್ಪಕವಾದ ಬಳಿಕ ಭದ್ರವಾದ ಲಾಕರ್‌ ನಿರ್ಮಿಸಿ ಅಲ್ಲಿಗೆ ಮರು ಸ್ಥಳಾಂತರ ಮಾಡಲಾಗುತ್ತದೆ.
– ಎಚ್‌.ಕೆ. ಕೃಷ್ಣಮೂರ್ತಿ, ಸಹಾಯಕ ಆಯುಕ್ತ, ಪುತ್ತೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.