ಹಡಗಲಿ ದಾರಿ ಫ್ಲಾಟ್ ನಲ್ಲಿ ಸೌಲಭ್ಯಕ್ಕೆ ಪರದಾಟ

ಸೌಲಭ್ಯವಿಲ್ಲದೇ ಸೊರಗುತ್ತಿವೆ ನೂತನ ಬಡಾವಣೆಗಳು ರೋಗ ಭೀತಿಯಲ್ಲಿ ಜನತೆ

Team Udayavani, Oct 11, 2019, 6:06 PM IST

11-October-17

ಸಿಕಂದರ ಎಂ. ಆರಿ
ನರೇಗಲ್ಲ: ಅಬ್ಬಿಗೇರಿ ಗ್ರಾಮದ ವಾರ್ಡ್‌ ನಂ.4ರ ಹಡಗಲಿ ದಾರಿಯಲ್ಲಿರುವ ಪ್ಲಾಟ್‌ನಲ್ಲಿ ನೂರಾರು ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದು, ಸೌಲಭ್ಯ ಇಲ್ಲದೇ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದು ಮಾಲಿಕರ ಜಮೀನುವಾಗಿದ್ದು, ಇಲ್ಲಿ ಮೂಲ ಸೌಲಭ್ಯ ಒದಗಿಸಲು ಗ್ರಾಪಂ ಹಿಂದೇಟು ಹಾಕುತ್ತಿದೆ. ಗಂಡ-ಹೆಂಡಿರ ನಡುವೆ ಕೂಸು ಬಡವಾಯ್ತು ಎನ್ನುವಂತಿದೆ ಇಲ್ಲಿನ ನಿವಾಸಿಗಳ ಸ್ಥಿತಿ.

ಸುಸಜ್ಜಿತ ರಸ್ತೆ, ಚರಂಡಿ, ಸಾಮೂಹಿಕ ಶೌಚಾಲಯ, ಅಂಗನವಾಡಿ, ಅಷ್ಟೇ ಏಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲದೇ ಇಲ್ಲಿಯ ಜನರು ವಾಸಿಸುತ್ತಿದ್ದಾರೆ. ಇಲ್ಲಿ ಸುಸಜ್ಜಿತ ಚರಂಡಿ ಇಲ್ಲ. ಹೀಗಾಗಿ ನಿವಾಸಿಗಳು ಉಪಯೋಗಿಸಿದ ಕೊಳಚೆ ನೀರು ನೇರವಾಗಿ ಜನರು ಓಡಾಡುವ ರಸ್ತೆ ಮೇಲೆಯೇ ಹರಿಯುತ್ತದೆ. ಜನತೆ ಕೊಳಚೆ ನೀರನ್ನು ತುಳಿದುಕೊಂಡೇ ಓಡಾಡಬೇಕಾದ ಅನಿವಾರ್ಯತೆ ಇದೆ. ಇದರ ಪರಿಣಾಮ ಜನ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದರ ಜತೆಗೆ ಮಳೆಗಾಲದಲ್ಲಿ ನೀರು ಮನೆಗಳಿಗೆ ನುಗ್ಗುತ್ತದೆ.

ಅಲ್ಲದೇ ಕುಡಿಯುವ ನೀರಿನ ಪೈಪ್‌ಗ್ಳನ್ನು ರಸ್ತೆಯ ಮಧ್ಯೆದಲ್ಲೇ ಹಾಕಲಾಗಿದ್ದು, ಆಕಸ್ಮಾತ್‌ ಒಡೆದರೆ ರಾಡಿ ನೀರೇ ಗತಿಯಾಗಿದೆ. ಅಂಗನವಾಡಿ ಕೊರತೆ: ಈ ಪ್ಲಾಟ್‌ನಲ್ಲಿ ಸುಮಾರು 200ಕ್ಕೂ ಅಧಿಕ ಮನೆಗಳಿದ್ದು, ಸುಮಾರು 300 ರಿಂದ 350 ಜನ ಇಲ್ಲಿ ವಾಸಿಸುತ್ತಾರೆ. ಇಲ್ಲಿ ಅಂಗನವಾಡಿ ಕೇಂದ್ರ ಇಲ್ಲದೇ ಇರುವುದರಿಂದ ಸುಮಾರು ಅರ್ಧ ಕಿ.ಮೀ ದೂರ ಹೋಗಬೇಕಾದ ಸ್ಥಿತಿ ಇದೆ. ಪಾಲಕರಿಗೆ ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸಿ ಬರುವುದೇ ದೊಡ್ಡ ಕೆಲಸವಾಗಿದೆ.

ಇಲ್ಲಿನ ಮಹಿಳೆಯರು ಹಾಗೂ ಪುರುಷರು ನಿತ್ಯ ಶೌಚಾಲಯಕ್ಕಾಗಿ ಹಳ್ಳಕ್ಕೆ ಹೋಗಬೇಕಾದ ಅನಿವಾರ್ಯ ಇದೆ. ಅಲ್ಲದೇ ಉತ್ತಮ ರಸ್ತೆ ಇಲ್ಲದೇ ಇರುವುದರಿಂದ ಮಳೆ ನೀರು, ಕೊಳಚೆ ನೀರು ನಿಂತಿರುವುದರಿಂದ ಡೆಂಘೀ, ಚಿಕೂನ್‌ ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.