ಪರಿಹಾರ ವಿಚಾರದಲ್ಲಿ ಟೀಕಿಸಲ್ಲ, ಸಹಕರಿಸುತ್ತೇವೆ: ಕುಮಾರಸ್ವಾಮಿ


Team Udayavani, Oct 12, 2019, 3:06 AM IST

kumarswamy

ವಿಧಾನಸಭೆ: “ಅನುದಾನ ಹೊಂದಾಣಿಕೆ ಮಾಡಿದರೆ ನೆರೆ ಪರಿಹಾರ ಕಾರ್ಯಕ್ಕೆ 10,000ದಿಂದ 15,000 ಕೋಟಿ ರೂ.ಹೊಂದಿಸಿಕೊಳ್ಳುವ ಅವಕಾಶವಿದೆ. ತುರ್ತು ಅಗತ್ಯ ವಿಲ್ಲದ ಯೋಜನೆಗಳನ್ನು 2 ವರ್ಷ ಮುಂದೂಡಿ. ನಮ್ಮ ಆಕ್ಷೇಪವೇನೂ ಇಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದರು.

ಪ್ರವಾಹ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ಸರ್ಕಾರ ಸಂತ್ರಸ್ತರಿಗೆ ವಿಶ್ವಾಸ ಮೂಡಿಸುವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು. ಬದಲಿಗೆ ನಮ್ಮ- ನಿಮ್ಮ ದೌರ್ಬಲ್ಯಗಳನ್ನು ತೋರಿಸುತ್ತಾ ರಾಜ್ಯದ ಜನರನ್ನು ಬೀದಿಯಲ್ಲಿ ನಿಲ್ಲಿಸುವುದು ಬೇಡ ಎಂದು ಕಿವಿಮಾತು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷರು ಹಿಂದೆ ಸಿದ್ದರಾಮಯ್ಯ ಹಾಗೂ ಮೈತ್ರಿ ಸರ್ಕಾರದ ಅವಧಿಯಲ್ಲಿ ರಾಜ್ಯ ಸರ್ಕಾರದ ಖಜಾನೆ ಲೂಟಿಯಾಗಿದೆ ಎಂದು ಆರೋಪಿಸಿದ್ದಾರೆ.

ಅವರಿಗೆ ಮಾಹಿತಿ ಕೊರತೆ ಇದೆಯೋ ಏನೋ? ಯಡಿಯೂರಪ್ಪ ಅವರೇ ಆರ್ಥಿಕ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರೂ ಈ ರೀತಿ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ರೀತಿಯ ನೆರೆ ಕಾಣಿಸಿಕೊಂಡಾಗ ರಾತ್ರೋರಾತ್ರಿ ನಾವಾಗಲಿ, ನೀವಾಗಲಿ ಎಲ್ಲ ಪರಿಹಾರ ಕಲ್ಪಿಸಲು ಸಾಧ್ಯವಿಲ್ಲ. ಹಾಗಾಗಿ ನಾನು ಹೆಚ್ಚು ಟೀಕೆ ಮಾಡದೆ ಸಲಹೆ ನೀಡುತ್ತೇನೆ. ಹಾಗೆಯೇ ಕೇಂದ್ರ ಸರ್ಕಾರವನ್ನೂ ದೂರುವುದಿಲ್ಲ ಎಂದು ಹೇಳಿದರು.

ಅಪಪ್ರಚಾರ- ಅಕ್ರಮ ಶಂಕೆ: ಮನೆ ಕಳೆದುಕೊಂಡವರು ಶೆಡ್‌ನ‌ಲ್ಲಿ ವಾಸ್ತವ್ಯ ಹೂಡಿದರೆ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಪರಿಹಾರ ಸಿಗದು ಎಂಬ ಅಪಪ್ರಚಾರ ನಡೆಯುತ್ತಿದ್ದು, ಇದರಿಂದಾಗಿ ಸಂತ್ರಸ್ತರು ಶೆಡ್‌ಗಳಿಗೆ ಹೋಗುತ್ತಿಲ್ಲ ಎಂಬ ಮಾಹಿತಿಯಿದೆ. ಮನೆ ಹಾನಿ ಸಂಬಂಧ ಸರ್ಕಾರ ಎ, ಬಿ ಹಾಗೂ ಸಿ ವರ್ಗವೆಂದು ವಿಂಗಡಿಸಿದೆ. ಈ ಪೈಕಿ ಹೆಚ್ಚಿನ ಸಂತ್ರಸ್ತರನ್ನು “ಸಿ’ ವರ್ಗದಡಿ ಗುರುತಿಸಲಾಗುತ್ತದೆ ಎಂಬ ಮಾತಿದೆ. ಕೆಲವೆಡೆ ಪರಿಹಾರಕ್ಕಾಗಿ ಮನೆಗಳನ್ನೇ ಒಡೆದುಕೊಳ್ಳುತ್ತಿದ್ದಾರೆ ಎಂಬ ಮಾತುಗಳೂ ಕೇಳಿಬಂದಿವೆ. ಈ ಬಗ್ಗೆ ಗಮನ ಹರಿಸಿ ಎಂದು ಸಲಹೆ ನೀಡಿದರು.

ಮಾತನಾಡುವಾಗ ಎಚ್ಚರ: ನೆರೆ ಪರಿಹಾರ ಸಂಬಂಧ ಸರ್ಕಾರದ ಕೆಲ ಪ್ರಮುಖರ ಹೇಳಿಕೆಗಳೇ ಗೊಂದಲಮಯವಾಗಿವೆ. ಸಚಿವ ಜೆ.ಸಿ.ಮಾಧುಸ್ವಾಮಿಯವರು ನೆರೆ ಪರಿಹಾರ ಪಡೆಯಲು ಮುಂದಾದವರೇ ಕಡಿಮೆ ಎಂದು ಹೇಳಿಕೆ ನೀಡಿದ್ದರು. ಇತ್ತೀಚೆಗೆ ಸಚಿವ ಸಿ.ಟಿ.ರವಿ, ರಾಮನಗರದಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎಂದು ಹೇಳಿದ್ದಾರೆ. ಚಪಲಕ್ಕೆ ಮಾತನಾಡಬಾರದು. 1996ರ ಸಂದರ್ಭಕ್ಕೂ ಇಂದಿನ ರಾಮನಗರದ ಸ್ಥಿತಿಗತಿ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

ನಾನು ಮತ್ತು ಸಿದ್ದರಾಮಯ್ಯ ಹುಚ್ಚರು ಎಂದು ಆತ್ಮೀಯರಾದ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ನಾವು ಹುಚ್ಚರೋ, ಅಲ್ಲವೋ ಎಂಬುದನ್ನು ಬಿಡಿ. ರಾಜ್ಯದ ಜನರನ್ನು ಹುಚ್ಚರನ್ನಾಗಿ ಮಾಡಬೇಡಿ. ಇತ್ತೀಚೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ರಾಜ್ಯದ ಇಬ್ಬರು ಕೇಂದ್ರ ಸಚಿವರು ದೆಹಲಿಗೆ ಹೋಗಿದ್ದು, ನೆರೆ ಪರಿಹಾರ ತರುವುದಕ್ಕಾಗಿ ಅಲ್ಲ. ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಸಲು ಎಂದು ಹೇಳಿದ್ದಾರೆ ಎನ್ನುವ ಮೂಲಕ ಬಿಜೆಪಿಗೆ ಟಾಂಗ್‌ ನೀಡಿದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.