ಗ್ರಾಮ ವಿಕಾಸ ಯೋಜನೆ ಕಳಪೆ ಕಾಮಗಾರಿ


Team Udayavani, Oct 12, 2019, 4:17 PM IST

kolar-tdy-2

ಬೇತಮಂಗಲ: ಗ್ರಾಮ ವಿಕಾಸ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಕಳಪೆಯಾಗಿದೆ ಎಂದು ಕಳ್ಳಿಕುಪ್ಪ ಗ್ರಾಮಸ್ಥರು ಆರೋಪಿಸಿದರು.

ಟಿ.ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಕಳ್ಳಿಕುಪ್ಪ ಗ್ರಾಮ ಮಾದರಿಗಾಗಿ ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆ ಮಾಡಿಕೊಂಡು 1 ಕೋಟಿ ರೂ. ಅನುದಾನವೂ ಬಿಡುಗಡೆಯಾಗಿದೆ. ಕಾಮಗಾರಿ ಗುತ್ತಿಯನ್ನು ರಾಜ್ಯ ಭೂ ಸೇನೆ ನಿಗಮಕ್ಕೆ ನೀಡಲಾಗಿದ್ದು, ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಇದ್ದು, ಕಾಮಗಾರಿ ನಡೆಸದೇ, ಕಮಿಷನ್‌ ಆಸೆಗಾಗಿ ಹೊರಗುತ್ತಿಗೆ ನೀಡಿ ಕೈತೊಳೆದುಕೊಂಡಿದ್ದಾರೆ ಎಂದು ದೂರಿದರು. ಕಾಮಗಾರಿಗೆ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಭೂಮಿ ಪೂಜೆ ನಡೆಸಿ, 6 ತಿಂಗಳು ಕಳೆದಿದ್ದು, ಕೇವಲ ಚರಂಡಿ ಕಾಮಗಾರಿ ಮಾತ್ರ ಮಾಡಲಾಗಿದೆ. ಅದು ಅವರ ಇಷ್ಟಾನುಸಾರ ನಡೆಸಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿದರು.

ಚರಂಡಿ ನೀರು ಮನೆಗೆ: ಮೂಲ ಚರಂಡಿಗಳನ್ನು ತೆರವುಗೊಳಿಸಿ, ಬೇಕಾಬಿಟ್ಟಿ ಕಾಮಗಾರಿ ಮಾಡಲಾಗಿದೆ. ಇದರಿಂದ ಮನೆಗಳಿಗೆ ಮಳೆ ನೀರು ಹರಿಯುತ್ತಿದೆ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಇತ್ತ ಸುಳಿಯುತ್ತಿಲ್ಲ, ಕಾಮಗಾರಿ ನಿಲ್ಲಿಸಿ ಮೂರುನಾಲ್ಕು ತಿಂಗಳು ಕಳೆಯುತ್ತಿದೆ. ಇದೀಗ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ಚರಂಡಿಯ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ ಎಂದು ದೂರಿದರು.

ಪರಿಶೀಲಿಸದೇ ಹಣ ಬಿಡುಗಡೆ: ಈ ಗ್ರಾಮ ವಿಕಾಸ ಯೋಜನೆಗೆ 1 ಕೋಟಿ ರೂ. ಮೀಸಲಿಟ್ಟಿದ್ದು, ಈ ಅನುದಾನ ವನ್ನು ಗ್ರಾಪಂ ಮೂಲಕವೇ ಬಿಲ್ಲು ಪಾವತಿ ಮಾಡಲಾಗುತ್ತದೆ. ಶೇ.20 ಕಾಮಗಾರಿ ನಡೆಸಿ, ದಾಸ್ತಾನುಗಳಿಗೆಂದು 34 ಲಕ್ಷ ರೂ. ಹಣ ಡ್ರಾ ಮಾಡಿಕೊಂಡಿದ್ದಾರೆ. ಗ್ರಾಪಂ ಅಧಿಕಾರಿಗಳು ಕನಿಷ್ಠ ಪರಿಶೀಲನೆ ನಡೆಸದೆ ಇಷ್ಟೊಂದು ಮೊತ್ತ ನೀಡಿದ್ದು, ತಮ್ಮ ಬೇಜಾವಾªರಿತನ ಎತ್ತಿ ತೋರಿಸಿದ್ದಾರೆ ಎಂದು ಆರೋಪಿಸಿದರು.

ಫೋನ್‌ ಕರೆ ಸ್ವೀಕರಿಸುತ್ತಿಲ್ಲ: ಗ್ರಾಮ ವಿಕಾಸದ ಕಾಮಗಾರಿಯನ್ನು ಭೂಸೇನೆ ನಿಗಮದವರೇ ನಡೆಸಬೇಕೇಂಬ ನಿಯಮವಿದ್ದರೂ ಇವರು ಮೇಲ್ನೊಟಕ್ಕೆ ಆಗೊಮ್ಮೆ, ಈಗೊಮ್ಮೆ ಕಾಮಗಾರಿ ಬಳಿ ಕಾಣಿಸುತ್ತಾ, ಎಲ್ಲಾ ಕಾಮಗಾರಿಯನ್ನು ಹೊರಗುತ್ತಿಗೆಯರಿಂದಲೇ ನಡೆಸುತ್ತಾ, ಕಳಪೆ ಕಾಮಗಾರಿಗೆ ಸಹಕಾರ ನೀಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ: ಗ್ರಾಪಂ ಅಧಿಕಾರಿಗಳಿಗೂ ಸಾಕಷ್ಟು ಬಾರಿ ಈ ಗ್ರಾಮ ವಿಕಾಸದ ಯೋಜನೆ ಕಾಮಗಾರಿ ತಮ್ಮ ಸುರ್ಪದಿಯಲ್ಲಿ ನಡೆಸಿ, ಗುಣಮಟ್ಟ ಪರಿಶೀಲನೆ ನಡೆಸಿ ಎಂದು ಮನವಿ ಮಾಡಿದರೂ ಪ್ರಯೋಜನವಾಗುತ್ತಿಲ್ಲ. ಈ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳಾದ ವಿಜಿಕುಮಾರ್‌, ಇತರೆ ಉಪ ಎಂಜಿನಿಯರ್‌ಗಳನ್ನು ಸಂಪರ್ಕಿಸಲು ದೂರವಾಣಿ ಕರೆ ಮಾಡಿದ್ರೂ ತೆಗೆಯುತ್ತಿಲ್ಲ ಎಂದು ಆರೋಪಿಸಿದರು.

ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಭೂ ಸೇನೆ ನಿಗಮದ ಮೇಲಧಿಕಾರಿಗಳು ಕಳ್ಳಿಕುಪ್ಪ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಗ್ರಾಪಂ ಸದಸ್ಯ ಯೋಗೇಶ್‌, ಯುವ ಮುಖಂಡ ಕೆ.ಸಿ.ಚಲಪತಿ, ಜೆಸಿಬಿ ವೆಂಕಟೇಶ್‌, ವೆಂಕಟೇಗೌಡ, ಮಂಜುನಾಥ್‌, ಸುರೇಶ್‌, ಬಾಬು, ಗ್ರಾಮದ ಹಲವು ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.