ಸರ್ಕಾರಿ ಶಾಲೆ ಉಳಿವಿಗಾಗಿ ಪ್ರತಿಭಟನೆ
Team Udayavani, Oct 13, 2019, 3:00 AM IST
ಮೈಸೂರು: ಮೈಸೂರಿನ ನಾರಾಯಣ ಶಾಸ್ತ್ರೀ ರಸ್ತೆಯಲ್ಲಿರುವ ಶತಮಾನಕ್ಕಿಂತಲೂ ಹೆಚ್ಚು ಹಳೆಯದಾದ ಮಹಾರಾಣಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಬಾರದು ಎಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರರು ಹಾಗೂ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು.
ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದಾಗ ಈ ಶಾಲೆಯಿರುವ ಕಟ್ಟಡದಲ್ಲಿ ವಾಸ್ತವ್ಯವಿದ್ದರು ಎಂಬ ಕಾರಣಕ್ಕೆ ಇಲ್ಲಿ ವಿವೇಕಾನಂದರ ಸ್ಮಾರಕ ನಿರ್ಮಿಸಲು ರಾಮಕೃಷ್ಣ ಆಶ್ರಮಕ್ಕೆ ಶಾಲೆಯನ್ನು ಒಪ್ಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಪೊಲೀಸರೊಂದಿಗೆ ಶಾಲೆಗೆ ಆಗಮಿಸಿದ್ದರು.
ಈ ವಿಷಯ ತಿಳಿದ ಶಾಲೆಯ ಮಕ್ಕಳ ಪೋಷಕರು, ಕನ್ನಡಪರ ಹೋರಾಟಗಾರರು ಅಧಿಕಾರಿಗಳನ್ನು ತಡೆದು, ಶಾಲೆಯ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ ತೀರ್ಪು ಬರುವ ಮುನ್ನವೇ, ಸರ್ಕಾರದ ಯಾವುದೇ ಆದೇಶವಿಲ್ಲದೆ ಶಾಲೆಯನ್ನು ಮುಚ್ಚಿ ಆಶ್ರಮದವರಿಗೆ ಒಪ್ಪಿಸುವುದು ಸರಿಯಲ್ಲ ಎಂದು ಒತ್ತಾಯಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಾಂಡುರಂಗ 2014ರ ಕಡತಗಳನ್ನು ತೋರಿಸಿ ಶಾಲೆಯನ್ನು ವಶಪಡಿಸಿಕೊಳ್ಳಲು ಪ್ರಯತ್ನ ನಡೆಸಿದರು. ಶಾಲೆಯ ಒಳಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸಮಾಲೋಚನೆ ನಡೆಸಿದರೆ, ಹೊರಗೆ ಸರ್ಕಾರಿ ಶಾಲೆಯನ್ನು ಉಳಿಸುವಂತೆ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸು, ಇಲ್ಲಿ ಕಲಿಯಲು ಬರುವವರೆಲ್ಲ ಬಡವರ ಮಕ್ಕಳು, ಅವರಿಗೆ ಹೆಚ್ಚಿನ ಶುಲ್ಕ ಭರಿಸಲು ಶಕ್ತಿ ಇಲ್ಲ. ಈ ವರ್ಷ ಇಲ್ಲಿ 48 ಮಕ್ಕಳು ಕಲಿಯುತ್ತಿದ್ದು, ಶಾಲೆ ಮುಚ್ಚಿದರೆ ಅವರ ಭವಿಷ್ಯ ಹಾಳಾಗಲಿದೆ ಎಂದು ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕನ್ನಡ ಪರ ಹೋರಾಟಗಾರರಾದ ಪ.ಮಲ್ಲೇಶ್ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ್ದರಿಂದ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.