ವಿಶ್ವ ಬಾಕ್ಸಿಂಗ್‌: ಮಂಜುಗೆ ಚಿನ್ನದ ನಿರೀಕ್ಷೆ, ಮೇರಿಗೆ ಕಂಚು

6 ಬಾರಿಯ ಚಾಂಪಿಯನ್‌ ಮೇರಿ ಕೋಮ್‌ಗೆ ಕಂಚು

Team Udayavani, Oct 12, 2019, 9:50 PM IST

manjurani

ನವದೆಹಲಿ: ಭಾರೀ ನಿರೀಕ್ಷೆ ಮೂಡಿಸಿದ್ದ ಮೇರಿ ಕೋಮ್‌ ರಷ್ಯಾ ಮಹಿಳಾ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌’ ಸೆಮಿಫೈನಲ್‌ನಲ್ಲಿ ಸೋಲನುಭವಿಸಿ ಕಂಚಿನ ಪದಕಕ್ಕೆ ಸಮಾಧಾನಪಟ್ಟಿದ್ದಾರೆ. ಇವರೊಂದಿಗೆ ಸೆಮಿಗೆ ಲಗ್ಗೆ ಇರಿಸಿದ್ದ ಜಮುನಾ ರಾಣಿ, ಲವಿÉನಾ ಬೊರ್ಗೊಹೇನ್‌ ಕೂಡ ಪರಾಭವಗೊಂಡಿದ್ದಾರೆ. ಆದರೆ ಇದೇ ಮೊದಲ ಸಲ ಕಣಕ್ಕಿಳಿದ ಮಂಜುರಾಣಿ ಫೈನಲ್‌ಗೆ ನೆಗೆದಿದ್ದು, ಚಿನ್ನದ ಪದಕದ ಸಾಧ್ಯತೆಯನ್ನು ತೆರೆದಿರಿಸಿದ್ದಾರೆ.

ಚಿನ್ನದ ರಾಣಿಯಾಗುವರೇ ಮಂಜು?
6ನೇ ಶ್ರೇಯಾಂಕದ ಮಂಜುರಾಣಿ 48 ಕೆ.ಜಿ ವಿಭಾಗದ ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್‌ನ‌ ಚುತಮತ್‌ ರಕ್ಸತ್‌ ವಿರುದ್ಧ 4-1 ಅಂತರದ ಗೆಲುವು ಸಾಧಿಸಿದರು. ಭಾನುವಾರದ ಪ್ರಶಸ್ತಿ ಕಾಳಗದಲ್ಲಿ ಅವರು ಆತಿಥೇಯ ರಷ್ಯಾದ 2ನೇ ಶ್ರೇಯಾಂಕದ ಎಕಟೆರಿನಾ ಪಲ್ಸೇವಾ ವಿರುದ್ಧ ಸೆಣಸಲಿದ್ದಾರೆ. ಮಂಜು ಚಿನ್ನದ ರಾಣಿಯಾಗುವರೇ ಎಂಬ ಕುತೂಹಲ ಗರಿಗೆದರಿದೆ.

54 ಕೆ.ಜಿ ವಿಭಾಗದಲ್ಲಿ ಜಮುನಾ ಬೋರೊ ಚೈನೀಸ್‌ ತೈಪೆಯ ಅಗ್ರ ಶ್ರೇಯಾಂಕಿತೆ ಹಾಂಗ್‌ ಸಿಯಾವೊ ವೆನ್‌ ವಿರುದ್ಧ 0-5 ಅಂತರದಿಂದ ಪರಾಭವಗೊಂಡರು. ಲವಿÉನಾ ಬೊರ್ಗೊಹೇನ್‌ (69 ಕೆಜಿ) ಅವರನ್ನು ಚೀನಾದ ಯಾಂಗ್‌ ಲಿಯು 3-2ರಿಂದ ಮಣಿಸಿದರು.

ತೀರ್ಪಿನ ವಿರುದ್ಧ ಮೇರಿ ಅಸಮಾಧಾನ
ಶನಿವಾರದ ಮೊದಲ ಸೆಮಿಫೈನಲ್‌ನಲ್ಲಿ 3ನೇ ಶ್ರೇಯಾಂಕದ ಮೇರಿ ಕೋಮ… (51 ಕೆ.ಜಿ) ಅವರನ್ನು ಟರ್ಕಿಯ ಬುಸೆನಾಜ್‌ ಕಾಕಿರೊಗುÉ  4-1 ಅಂತರದಿಂದ ಹಿಮ್ಮೆಟ್ಟಿಸಿದರು. ಕಾಕಿರೊಗುÉ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಾಗೂ ಯುರೋಪಿಯನ್‌ ಗೇಮ್ಸ್ ಚಾಂಪಿಯನ್‌ ಕೂಡ ಆಗಿದ್ದಾರೆ. ಆರಂಭಿಕ ಸುತ್ತಿನಲ್ಲಿ ಮೇರಿ ಮುಂದಿದ್ದರೂ ಬಳಿಕ ಮಂಕಾದರು. ಎದುರಾಳಿಯ ಹೊಡೆತಕ್ಕೆ ಪ್ರತಿತಂತ್ರ ರೂಪಿಸುವುದು ಅವರಿಗೆ ಕಠಿಣವಾಗಿ ಪರಿಣಮಿಸಿತು. ಈ ನಡುವೆ ರೆಫ್ರಿ ನೀಡಿದ ತೀರ್ಪು ಕೂಡ ಮೇರಿಗೆ ಸಮಾಧಾನ ತರಲಿಲ್ಲ. ನನಗೆ ಇದರಿಂದ ಬಹಳ ಬೇಸರವಾಗಿದೆ. ನಾನು ಅತ್ಯುತ್ತಮ ರೀತಿಯಲ್ಲೇ ಹೋರಾಡಿದ್ದೇನೆ. ಸೋಲಿಗೆ ನಾನು ಖಂಡಿತ ಅರ್ಹಳಾಗಿರಲಿಲ್ಲ’ ಎಂದು ಮೇರಿ ಪ್ರತಿಕ್ರಿಯಿಸಿದ್ದಾರೆ. ಇದರಿಂದ ನೊಂದ ಅವರು, ಸೆಮಿಫೈನಲ್‌ ವೀಡಿಯೋವನ್ನು ಟ್ವೀಟ್‌ ಮಾಡಿ, ಇದನ್ನು ವಿಶ್ವವೇ ನೋಡಲಿ ಎಂದಿದ್ದಾರೆ.

ತೀರ್ಪನ್ನು ಪುನರ್‌ ಪರಿಶೀಲಿಸಬೇಕೆಂಬ ಮೇರಿ ಕೋಮ್‌ ಮನವಿಯನ್ನು ಅಂತಾರಾಷ್ಟ್ರೀಯ ಬಾಕ್ಸಿಂಗ್‌ ಅಸೋಸಿಯೇಶನ್‌ (ಎಐಬಿಎ) ತಳ್ಳಿಹಾಕಿದೆ. 3-2 ಅಥವಾ 3-1 ಅಂತರವಿದ್ದರಷ್ಟೇ ಇಂಥ ಮನವಿಯನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಎಐಬಿಎ ತಿಳಿಸಿದೆ.

ಮೇರಿಗೆ ದಾಖಲೆ 8ನೇ ಪದಕ
ಈ ಫ‌ಲಿತಾಂಶದ ಹೊರತಾಗಿಯೂ ವಿಶ್ವ ಮಹಿಳಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ಇತಿಹಾಸದÇÉೇ ಅತ್ಯಧಿಕ 8 ಪದಕ ಗೆದ್ದ ದಾಖಲೆಗೆ ಮೇರಿ ಕೋಮ್‌ ಭಾಜನರಾದರು. ಇದರಲ್ಲಿ 6 ಚಿನ್ನ, ಒಂದು ಬೆಳ್ಳಿ, ಒಂದು ಕಂಚು ಸೇರಿದೆ. ಪುರುಷರ ವಿಭಾಗದ ವಿಶ್ವ ಚಾಂಪಿಯನ್‌ಶಿಪ್‌ಗೆ ಹೋಲಿಸಿದರೂ ಮೇರಿ ಕೋಮ್‌ ಅವರೇ ಅಗ್ರಸ್ಥಾನದಲ್ಲಿರುವುದು ಭಾರತದ ಪಾಲಿಗೊಂದು ಹೆಮ್ಮೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.