ಸಂಜು ಸ್ಯಾಮ್ಸನ್‌ ದ್ವಿಶತಕ ದಾಖಲೆ


Team Udayavani, Oct 13, 2019, 5:39 AM IST

sanju-samson

ಆಲೂರು: ಕೇರಳದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ ಗೋವಾ ಎದುರಿನ “ವಿಜಯ್‌ ಹಜಾರೆ ಟ್ರೋಫಿ’ ಕ್ರಿಕೆಟ್‌ ಪಂದ್ಯದಲ್ಲಿ ಅಜೇಯ ದ್ವಿಶತಕ ಬಾರಿಸಿ ಅನೇಕ ಹೊಸ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.

ಶನಿವಾರ ಬೆಂಗಳೂರು ಹೊರವಲಯದ ಆಲೂರಿನ ಕೆಎಸ್‌ಸಿಎ (2) ಕ್ರೀಡಾಂಗಣದಲ್ಲಿ ಸಂಜು ಸ್ಯಾಮ್ಸನ್‌ ಅಜೇಯ 212 ರನ್‌ ಬಾರಿಸಿ ಮೆರೆದರು. ಇದು “ಲಿಸ್ಟ್‌ ಎ’ ಕ್ರಿಕೆಟ್‌ ಇತಿಹಾಸದಲ್ಲಿ ವಿಕೆಟ್‌ ಕೀಪರ್‌ ಓರ್ವ ಬಾರಿಸಿದ ಅತ್ಯಧಿಕ ವೈಯಕ್ತಿಕ ಗಳಿಕೆಯಾಗಿದೆ. ಕಳೆದ ವರ್ಷವಷ್ಟೇ ಪಾಕಿಸ್ಥಾನಿ ಏಕದಿನ ದೇಶಿ ಕ್ರಿಕೆಟ್‌ನಲ್ಲಿ ಅಬಿದ್‌ ಅಲಿ 208 ರನ್‌ ಹೊಡೆದ ದಾಖಲೆ ಪತನಗೊಂಡಿತು. ಭಾರತದ ಪರ ಈ ದಾಖಲೆ ಮಹೇಂದ್ರ ಸಿಂಗ್‌ ಧೋನಿ ಹೆಸರಲ್ಲಿತ್ತು (ಅಜೇಯ 183).

ಸರ್ವಾಧಿಕ ವೈಯಕ್ತಿಕ ಗಳಿಕೆ
ಸ್ಯಾಮ್ಸನ್‌ ಅವರ 212 ರನ್‌ ಭಾರತದ ಏಕದಿನ ದೇಶಿ ಕ್ರಿಕೆಟ್‌ ಪಂದ್ಯದಲ್ಲಿ ದಾಖಲಾದ ಸರ್ವಾಧಿಕ ವೈಯಕ್ತಿಕ ಗಳಿಕೆಯಾಗಿದೆ. ಹಿಂದಿನ ದಾಖಲೆ ಉತ್ತರಾಖಂಡ್‌ನ‌ ಕೆ.ವಿ. ಕೌಶಲ್‌ ಹೆಸರಲ್ಲಿತ್ತು. ಅವರು ಸಿಕ್ಕಿಂ ವಿರುದ್ಧ 202 ರನ್‌ ಹೊಡೆದಿದ್ದರು.

ಕಡಿಮೆ ಎಸೆತಗಳಲ್ಲಿ ದ್ವಿಶತಕ
ಸಂಜು ಸ್ಯಾಮ್ಸನ್‌ ಕೇವಲ 129 ಎಸೆತಗಳಿಂದ 212 ರನ್‌ ಬಾರಿಸಿದರು. ಇದರಲ್ಲಿ 21 ಬೌಂಡರಿ, 10 ಸಿಕ್ಸರ್‌ ಸೇರಿತ್ತು. ದ್ವಿಶತಕಕ್ಕೆ ಇವರು ಎದುರಿಸಿದ್ದು ಕೇವಲ 125 ಎಸೆತ. ಇದು ಲಿಸ್ಟ್‌ ಎ ಕ್ರಿಕೆಟ್‌ನಲ್ಲಿ ಭಾರತೀಯ ದಾಖಲೆಯಾಗಿದೆ. ಶಿಖರ್‌ ಧವನ್‌ 132 ಎಸೆತಗಳಿಂದ ಡಬಲ್‌ ಸೆಂಚುರಿ ಬಾರಿಸಿದ ದಾಖಲೆಯನ್ನು ಸ್ಯಾಮ್ಸನ್‌ ಅಳಿಸಿ ಹಾಕಿದರು.

ಸಂಜು ಸ್ಯಾಮ್ಸನ್‌ ಅವರಿಗೆ ಸಚಿನ್‌ ಬೇಬಿ ಅವರಿಂದ ಉತ್ತಮ ಬೆಂಬಲ ಲಭಿಸಿತು. ಬೇಬಿ 127 ರನ್‌ ಹೊಡೆದರು. ಕೇರಳ 3 ವಿಕೆಟಿಗೆ 377 ರನ್‌ ಪೇರಿಸಿತು. ಜವಾಬಿತ್ತ ಗೋವಾ 8 ವಿಕೆಟಿಗೆ 273 ರನ್‌ ಗಳಿಸಿ 104 ರನ್‌ ಅಂತರದಿಂದ ಸೋತಿತು.

ಟಾಪ್ ನ್ಯೂಸ್

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.