ರಾಜ್ಯದಲ್ಲಿ ಮುಂದಿನ 3 ವರ್ಷ ಚುನಾವಣೆ ಎದುರಾಗದು: ನಳಿನ್
Team Udayavani, Oct 13, 2019, 5:38 AM IST
ಸುಳ್ಯ: ಉಪ ಚುನಾವಣೆಯಲ್ಲಿ ಎಲ್ಲ 15 ಸ್ಥಾನಗಳಲ್ಲಿ ಬಿಜೆಪಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ಮೂರು ವರ್ಷ ವಿಧಾನಸಭಾ ಚುನಾವಣೆ ಎದುರಾಗುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಸುಳ್ಯಕ್ಕೆ ಆಗಮಿಸಿದ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಸಾಮಾನ್ಯ ಕಾರ್ಯಕರ್ತನಿಗೂ ರಾಜ್ಯಾಧ್ಯಕ್ಷನಾಗುವ ಅರ್ಹತೆ, ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ. ಇಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಅಧ್ಯಕ್ಷನಾಗಲು ಅರ್ಹ ಎಂದ ಅವರು, ಇಲ್ಲಿ ನಾನು ನಿಮಿತ್ತ ಮಾತ್ರ, ಇದು ಹುದ್ದೆಯಲ್ಲ, ಜವಾಬ್ದಾರಿ. ಹಾಗಾಗಿ ನೀವು ಅರ್ಪಿಸಿದ ಸಮ್ಮಾನ ನಿಮಗೇ ಸಂದದ್ದು ಎಂದರು.
150 ಸ್ಥಾನಗಳಲ್ಲಿ ಗೆಲುವು
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆದ್ದು ಸರಕಾರ ರಚಿಸಲಿದೆ. ಆ ನಿಟ್ಟಿನಲ್ಲಿ ಎಲ್ಲರ ವಿಶ್ವಾಸ ಪಡೆದು ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ ಮುನ್ನಡೆಸಲಾಗುವುದು ಎಂದವರು ತಿಳಿಸಿದರು.
ಈ ಸಂದರ್ಭ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಜಿಲ್ಲಾ ಮುಖಂಡ ಎ.ವಿ. ತೀರ್ಥರಾಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ
Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ
Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ
ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’
Sullia ಮೊಬೈಲ್ ರಿಚಾರ್ಜ್ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು
MUST WATCH
ಹೊಸ ಸೇರ್ಪಡೆ
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ