ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳದ್ದೇ ದರ್ಬಾರ್!
Team Udayavani, Oct 13, 2019, 12:27 PM IST
ನರಗುಂದ: ಅರ್ಧ ಕಿಲೋ ಮೀಟರ್ಗೆ ಒಂದರಂತೆ ಆರೇಳು ಅಪಾಯಕಾರಿ ತಿರುವುಗಳು, ಸಾಲದೆಂಬಂತೆ ಹೆಜ್ಜೆ ಹೆಜ್ಜೆಗೂ ಬಾಯಿ ತೆರೆದು ಅಪಾಯಕ್ಕೆ ಆಹ್ವಾನಿಸುತ್ತಿರುವ ತಗ್ಗು ಗುಂಡಿಗಳು. ಇದು ನರಗುಂದ-ಗದಗ ರಾಜ್ಯ ಹೆದ್ದಾರಿಯ ಅವ್ಯವಸ್ಥೆ. ನರಗುಂದದಿಂದ ಜಿಲ್ಲಾ ಕೇಂದ್ರ ಗದಗ ಪಟ್ಟಣಕ್ಕೆ ಒಳರಸ್ತೆಯಾಗಿರುವ ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿಯಲ್ಲಿ ಸಾಗುವುದೇ ಬಹುದೊಡ್ಡ ಸವಾಲು.
ನರಗುಂದ ಕೇಂದ್ರ ಸ್ಥಾನದಿಂದ 8 ಕಿಮೀ ಅಂತರದ ತಾಲೂಕಿನ ಕುರ್ಲಗೇರಿ ಗ್ರಾಮವರೆಗೆ ಸುಮಾರು ಐದಾರು ಕಿಮೀ ಹೆದ್ದಾರಿಯುದ್ದಕ್ಕೂ ತಗ್ಗು ಗುಂಡಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಪಟ್ಟಣದ ಹೊರವಲಯ ದೂರಸಂಪರ್ಕ ಕಚೇರಿ ದಾಟಿದ ಬಳಿಕ ಮೂರ್ನಾಲ್ಕು ತಿರುವು ಸಾಗಿ ಮುಂದೆ ಹೋಗುತ್ತಿದ್ದಂತೆ ಕುರ್ಲಗೇರಿ ರಸ್ತೆಯಲ್ಲಿ ಇಂತಹ ಗುಂಡಿಗಳು ಹೆದ್ದಾರಿಯುದ್ದಕ್ಕೂ ಸಹಜವಾಗಿವೆ. ಹಗಲು ಹೊತ್ತಿನಲ್ಲೇ ಅಪಾಯ ಸ್ಥಿತಿಯಲ್ಲಿರುವ ಈ ಹೆದ್ದಾರಿ ಸಂಚಾರ ರಾತ್ರಿ ವೇಳೆಯಲ್ಲಂತೂ ಅದರಲ್ಲೂ ದ್ವಿಚಕ್ರ ವಾಹನ ಸವಾರರಿಗೆ ಮೃತ್ಯು ಕೂಪವಾಗಿ ಪರಿಣಮಿಸಿದೆ.
ಹೆದ್ದಾರಿ ತುಂಬೆಲ್ಲ ದೊಡ್ಡ ಗುಂಡಿಗಳು ಉದ್ಭವಿಸಿದ್ದು, ಮಳೆಯಾಗಿ ಗುಂಡಿಗಳು ಕೆಸರು ನೀರಿನಿಂದ ತುಂಬಿ ನಿಂತಿವೆ. ಗುಂಡಿಯಲ್ಲಿ ವಾಹನ ಹೋಗಿದ್ದೇಯಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬ ಸ್ಥಿತಿ ಇಲ್ಲಿದೆ. ದ್ವಿಚಕ್ರ ವಾಹನ ಸವಾರರಂತೂ ಹೆದ್ದಾರಿಯಲ್ಲಿ ಗುಂಡಿಗಳನ್ನು ತಪ್ಪಿಸಲು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿಕೊಂಡು ಸಾಗಬೇಕಿದೆ. ಆಯ ತಪ್ಪಿದರೆ ಕೆಸರಿನ ಅಭಿಷೇಕ ಜೊತೆಗೆ ಬಿದ್ದು ಗಾಯಗೊಳ್ಳಬೇಕಾದ ಪರಿಸ್ಥಿತಿಯಿದೆ. ನರಗುಂದ ಪಟ್ಟಣದಿಂದ ಗದಗ ಪಟ್ಟಣ ಸೇರಲು ಕಡಿಮೆ ಅಂತರದ ಒಳರಸ್ತೆಯಾಗಿರುವ ಈ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಿದೆ.
ಸಮೀಪವಿರುವ ಈ ಮಾರ್ಗದಲ್ಲಿ ರಸ್ತೆಯ ಅವ್ಯವಸ್ಥೆ ಪ್ರತಿದಿನ ಸಾರ್ವಜನಿಕರ ನಿದ್ದೆಗೆಡಿಸಿದೆ ಎಂಬ ದೂರುಗಳು ಕೇಳಿ ಬಂದಿವೆ. ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಒಳಪಡುವ ಗದಗ ಒಳರಸ್ತೆ ರಾಜ್ಯ ಹೆದ್ದಾರಿಯನ್ನು ತ್ವರಿತವಾಗಿ ಸುಧಾರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದು ಸಾರ್ವಜನಿಕರ ಕೋರಿಕೆಯಾಗಿದೆ.
ವಾರದೊಳಗೆ ರಸ್ತೆ ನಿರ್ವಹಣೆ : ನರಗುಂದ ಪಟ್ಟಣದಿಂದ ಕುರ್ಲಗೇರಿ ಮಾರ್ಗದ ರಸ್ತೆ ದುರಸ್ತಿ ನಿರ್ವಹಣೆಗೆ ಈಗಾಗಲೇ 10 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಟೆಂಡರ್ ಆಗಿದೆ. ವಾರದೊಳಗೆ ರಸ್ತೆ ನಿರ್ವಹಣೆಗೆ ಚಾಲನೆ ನೀಡಲಾಗುವುದು. -ಸತೀಶ ನಾಗನೂರ, ಲೋಕೋಪಯೋಗಿ ಕಿರಿಯ ಅಭಿಯಂತರ
-ಸಿದ್ಧಲಿಂಗಯ್ಯ ಮಣ್ಣೂರಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ