370 ವಿಧಿ ರದ್ದು ಸಾಧನೆ

ಪ್ರಧಾನಿ ನರೇಂದ್ರ ಮೋದಿ ಧೈರ್ಯಕ್ಕೆ ಗೃಹ ಸಚಿವರ ಮೆಚ್ಚುಗೆ

Team Udayavani, Oct 14, 2019, 6:23 AM IST

370

ಚಂಡೀಗಢ/ಕೊಲ್ಹಾಪುರ: ದೇಶದ ಹಿಂದಿನ ಪ್ರಧಾನಿಗಳಿಗೆ ಹೋಲಿಕೆ ಮಾಡಿದರೆ ಸದ್ಯ 56 ಇಂಚಿನ ಎದೆಯುಳ್ಳ ಪ್ರಧಾನಿ ಬಲು ದೊಡ್ಡ ಕೆಲಸ ಮಾಡಿದ್ದಾರೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರವಿವಾರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೆ2àಷ ಸ್ಥಾನ ಹಿಂಪಡೆದದ್ದು ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ. ಹಿಂದಿನ ಯಾವುದೇ ಪ್ರಧಾನಿಗಳು ಈ ಬಗ್ಗೆ ಧೈರ್ಯವನ್ನೇ ಮಾಡಿರಲಿಲ್ಲ ಎಂದು ಕೊಂಡಾಡಿದ್ದಾರೆ. ಕಾಂಗ್ರೆಸ್‌ ಮತ್ತು ಎನ್‌ಸಿಪಿ ನಾಯಕರು ಮತ ಕೇಳಲು ಬಂದ ಸಂದರ್ಭದಲ್ಲಿ ಎನ್‌ಡಿಎ ಸರಕಾರ ಕೈಗೊಂಡ ನಿರ್ಧಾರವನ್ನು ಬೆಂಬಲಿಸುತ್ತೀರಾ ಎಂದು ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮತ್ತು ದೇಶದ ಜನರು ನರೇಂದ್ರ ಮೋದಿಯವರ ನೇತೃತ್ವದ ಸರಕಾರವನ್ನು ಎರಡನೇ ಬಾರಿಗೆ ಬಹುಮತದಿಂದ ಆಯ್ಕೆ ಮಾಡಿದಾಗ 70 ವರ್ಷಗಳಿಂದ ದೇಶದ ಜನರು ಕಾಯುತ್ತಿದ್ದ ಪ್ರಮುಖ ನಿರ್ಧಾರ ಕೈಗೊಂಡರು. ಅದುವೇ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯ ಅನ್ವಯ ನೀಡಲಾಗಿದ್ದ ವಿಶೇಷ ಮಾನ್ಯತೆ ರದ್ದು ಮಾಡಿರುವುದು. ಈ ಮೂಲಕ ಕಣಿವೆ ರಾಜ್ಯ ದೇಶದ ಇತರ ರಾಜ್ಯಗಳ ಜತೆಗೆ ಸಮ್ಮಿಳನವಾಗುವಂತೆ ಮಾಡಿದ್ದಾರೆ’ ಎಂದರು.

ಜನ ಸಂಘದ ಕಾಲದಿಂದಲೇ ಒಂದು ದೇಶಕ್ಕೆ ಇಬ್ಬರು ಪ್ರಧಾನಮಂತ್ರಿಗಳು ಇರಲು ಸಾಧ್ಯವೇ ಇಲ್ಲ ಎಂಬ ವಾದ ಮಂಡಿಸಲಾಗುತ್ತಿತ್ತು. ಆದರೆ ಕಾಂಗ್ರೆಸ್‌ 370ನೇ ವಿಧಿಯನ್ನು ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಇತರ ಭಾಗಗಳಂತೆ ವಿಲೀನ ಮಾಡುವ ಪ್ರಕ್ರಿಯೆನ್ನು ತಡೆ ಹಿಡಿದಿತ್ತು. ಆದರೆ 56 ಇಂಚಿನ ಎದೆಯುಳ್ಳ ವ್ಯಕ್ತಿ (ನರೇಂದ್ರ ಮೋದಿ) ಅದನ್ನು ಒಂದೇ ಹಂತದಲ್ಲಿ ರದ್ದು ಮಾಡಿದರು. ಯುಪಿಎ ಅವಧಿಯಲ್ಲಿ ಉಗ್ರಗಾಮಿಗಳು ಎಲ್‌ಒಸಿ ಮೂಲಕ ನುಗ್ಗಿ ಸೈನಿಕರನ್ನು ಹತ್ಯೆ ಮಾಡುತ್ತಿದ್ದರು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಸರಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಅಮಿತ್‌ ಶಾ.
ಮೌನ ವಹಿಸುತ್ತಿದ್ದ ಸಿಂಗ್‌: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಸೈನಕರನ್ನು ಹತ್ಯೆ ಮಾಡುತ್ತಿದ್ದಾಗ ಪ್ರಧಾನಿಯಾಗಿದ್ದ ಡಾ| ಮನಮೋಹನ್‌ ಸಿಂಗ್‌ ಒಂದೇ ಒಂದು ಖಂಡನಾತ್ಮಕ ಮಾತುಗಳನ್ನು ಆಡುತ್ತಿರಲಿಲ್ಲ. ಆದರೆ ಉರಿ, ಪುಲ್ವಾಮಾಗಳಲ್ಲಿ ದಾಳಿ ನಡೆದಾಗ ಸರ್ಜಿಕಲ್‌ ದಾಳಿ ಮೂಲಕ ಭಯೋತ್ಪಾದಕರಿಗೆ ಸರಿಯಾದ ಪಾಠವನ್ನು ಮೋದಿ ಕಲಿಸಿದರು ಎಂದರು.

ಹನಿ ನೀರು ಬರಲಿಲ್ಲ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌-ಎನ್‌ಸಿಪಿ ನೇತೃತ್ವದ ಸರಕಾರ ಇದ್ದಾಗ ನೀರಾವರಿ ಯೋಜನೆಗಳಿಗೆ 70 ಸಾವಿರ ಕೋಟಿ ರೂ. ವೆಚ್ಚ ಮಾಡಲಾಯಿತು. ಆದರೆ ರೈತರ ಜಮೀನಿಗೆ ಒಂದೇ ಒಂದು ಹನಿ ನೀರು ಹರಿಯಲಿಲ್ಲ. ಬಿಜೆಪಿ-ಶಿವಸೇನೆ ನೇತೃತ್ವದ ಸರಕಾರ ಐದು ವರ್ಷಗಳ ಅವಧಿಯಲ್ಲಿ ನೀರಿನ ಉಳಿಕೆ ಯೋಜನೆ ವ್ಯಾಪ್ತಿಯಲ್ಲಿ 11 ಸಾವಿರ ಗ್ರಾಮಗಳಿಗೆ ನೀರು ಹರಿಸಲಾಗಿದೆ. ಅದಕ್ಕೆ ವೆಚ್ಚ ಮಾಡಿದ್ದು ಕೇವಲ 9 ಸಾವಿರ ಕೋಟಿ ರೂ. ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

15 ವರ್ಷದ ಎನ್‌ಸಿಪಿ-ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಮಹಾರಾಷ್ಟ್ರದ ಕ್ರಮಾಂಕ ಕುಸಿದಿತ್ತು. ಆದರೆ ಹಾಲಿ ಸರಕಾರದ ಅವಧಿಯಲ್ಲಿ ಕೃಷಿ, ಹೈನುಗಾರಿಕೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಮಹಾರಾಷ್ಟ್ರದ ಮೊದಲ ಐದು ಸ್ಥಾನಗಳಲ್ಲಿದೆ ಎಂದು ಶ್ಲಾ ಸಿದರು.

ಬಡ್ಡಿ ರಹಿತ ಸಾಲ: ಬಿಜೆಪಿ ಘೋಷಣೆ
ಹರ್ಯಾಣದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಎಸ್‌ಸಿ ಸಮುದಾಯಕ್ಕೆ 3 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಬಿಜೆಪಿ ಘೋಷಣೆ ಮಾಡಿದೆ. ಚಂಡೀಗ ಢ ದಲ್ಲಿ ರವಿವಾರ ಬಿಡುಗಡೆ ಮಾಡಲಾಗಿರುವ ಸಂಕಲ್ಪ ಪತ್ರದಲ್ಲಿ ಈ ಅಂಶ ಪ್ರಸ್ತಾಪಿಸಲಾಗಿದೆ. ಇದರ ಜತೆಗೆ ರೈತ ರಿಗೂ 3 ಲಕ್ಷ ರೂ. ಬಡ್ಡಿ ರಹಿತ ಸಾಲ ನೀಡುವುದರ ಬಗ್ಗೆ ವಾಗ್ಧಾನ ಮಾಡಲಾಗಿದೆ. ವೃದ್ಧರಿಗೆ 3 ಸಾವಿರ
ರೂ. ಪಿಂಚಣಿ, ಹರ್ಯಾಣವನ್ನು ಟಿ.ಬಿ.ರಹಿತ ರಾಜ್ಯವ ನ್ನಾಗಿ ಮಾಡುವುದು, 1 ಸಾವಿರ ಕ್ರೀಡಾ ನರ್ಸರಿ, 2 ಸಾವಿರ ಆರೋಗ್ಯ ಮತ್ತು ಪಾಲನಾ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಸಂಕಲ್ಪ ಪತ್ರದಲ್ಲಿ ಘೋಷಣೆ ಮಾಡಲಾಗಿದೆ.

ಸಿಎಂಗಳ ಪ್ರಚಾರ
ಅ.21ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಾಗಿ ಉತ್ತರ ಪ್ರದೇಶ ಮತ್ತು ಗೋವಾ ಮುಖ್ಯಮಂತ್ರಿಗಳಾಗಿರುವ ಕ್ರಮವಾಗಿ ಯೋಗಿ ಆದಿತ್ಯನಾಥ್‌, ಡಾ| ಪ್ರಮೋದ್‌ ಸಾವಂತ್‌ ಪ್ರಚಾರಕ್ಕೆ ಆಗಮಿಸಿದ್ದಾರೆ. ಯೋಗಿ ಆದಿತ್ಯನಾಥ್‌ ಔರಂಗಾಬಾದ್‌ನಲ್ಲಿ ಪ್ರಚಾರ ನಡೆಸಿದರೆ, ಗೋವಾ ಸಿಂಗ್‌ ಮುಂಬೈನ ಮರೀನ್‌ ಡ್ರೈವ್‌ನಲ್ಲಿ ಪ್ರಚಾರ ನಡೆಸಿದರು.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.